ಸುದೀಪ್ ಅಕ್ಕನ ಮಗ ಸಂಚಿತ್ ಸಂಜೀವ್ ಅಭಿನಯದ ‘ಮ್ಯಾಂಗೋ ಪಚ್ಚ’ ಸಿನಿಮಾದ ಟೀಸರ್ ರಿಲೀಸ್ ಆಗಿದೆ. ಸಂಚಿತ್ ಚೊಚ್ಚಲ ಸಿನಿಮಾದ ಟೀಸರ್ ಅನ್ನು ಸುದೀಪ್ ಅವರೇ ಬಿಡುಗಡೆ ಮಾಡಿದ್ದಾರೆ.
‘ಮ್ಯಾಂಗೋ ಪಚ್ಚ’ ಮೈಸೂರು ಭಾಗದ ಕಥೆ. ಈ ದಸರ ಸಂಭ್ರಮದಲ್ಲೇ ಮೈಸೂರು ಭಾಗದ ಕಥೆಯ ಟೀಸರ್ ಬಿಡುಗಡೆ ಆಗಿರುವುದು ವಿಶೇಷ.
‘ನಮ್ದು ಮೈಸೂರು. ರಾಜರಿದ್ದ ಊರು. ಊರಲ್ಲಿ ರಾಜರಿದ್ದ ಮೇಲೆ ಸೈನಿಕರು ಸಹ ಇರಬೇಕಲ್ವಾ?’ ಎಂದು ನಾಯಕ ಆಡುವ ಮಾತಿನಿಂದ ಟೀಸರ್ ಪ್ರಾರಂಭವಾಗುತ್ತದೆ. ಇಲ್ಲಿ ನಾಯಕನ ಹೆಸರು ಪ್ರಶಾಂತ್. ಎಲ್ಲರೂ ಪಚ್ಚ ಎಂದು ಕರೆಯುತ್ತಿರುತ್ತಾರೆ. ಇಂಥ ಪಚ್ಚ, ‘ಮ್ಯಾಂಗೋ ಪಚ್ಚ’ ಆಗುವುದು ಹೇಗೆ ಎಂಬುದರ ಸುತ್ತ ಚಿತ್ರ ಸುತ್ತುತ್ತದೆ. ಇದು ಮೈಸೂರಿನ ಕಥೆ. ರಾಜನ ವಿರುದ್ಧ ಸೈನಿಕ ಹೇಗೆ ತಿರುಗಿಬಿದ್ದ ಎಂಬುದರ ಸುತ್ತ ಈ ಚಿತ್ರ ಸುತ್ತುತ್ತದೆ.
‘ಮ್ಯಾಂಗೋ ಪಚ್ಚ’ ಚಿತ್ರದ ಬಹುತೇಕ ಚಿತ್ರೀಕರಣ ಮೈಸೂರಿನಲ್ಲೇ ಮಾಡಲಾಗಿದೆ. ಪಕ್ಕ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾ ಇದಾಗಿದ್ದು, 2001ರಿಂದ 2011ರ ಅವಧಿಯಲ್ಲಿ ಮೈಸೂರಿನಲ್ಲಿ ನಡೆದ ಪ್ರಮುಖ ಘಟನೆಗಳು ಈ ಸಿನಿಮಾದಲ್ಲಿದೆ.
ಇದನ್ನೂ ಓದಿ:-ಭಾಲ್ಕಿಯಲ್ಲಿ ಮುಂದಿನ ವರ್ಷದಿಂದ ವಚನ ವಿಶ್ವವಿದ್ಯಾಲಯ ಆರಂಭ: ಸಿಎಂ ಸಿದ್ದರಾಮಯ್ಯ
‘ಮ್ಯಾಂಗೋ ಪಚ್ಚ’ ಚಿತ್ರವನ್ನು KRG ಸ್ಟುಡಿಯೋಸ್ ಮತ್ತು ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಜಂಟಿಯಾಗಿ ನಿರ್ಮಾಣ ಮಾಡುತ್ತಿರುವುದು ವಿಶೇಷ. ಇನ್ನು, ಈ ಚಿತ್ರಕ್ಕೆ ವಿವೇಕ ಕಥೆ-ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
ಸಂಚಿ ಮೊದಲ ಸಿನಿಮಾಗೆ ನಾಯಕಿಯಾಗಿ ನಟಿ ಕಾಜಲ್ ಕುಂದರ್ ಕಾಣಿಸಿಕೊಳ್ಳುತ್ತಿದ್ದಾರೆ. ಉಳಿದಂತೆ ಈ ಸಿನಿಮಾದಲ್ಲಿ, ಮಯೂರ್ ಪಟೇಲ್, ವಿಜಯ ರಾಘವೇಂದ್ರ ಅವರ ಅಕ್ಕನ ಮಗ ಜಯ್, ಹಂಸ, ಮಾಲಾಶ್ರೀ ಸೇರಿದಂತೆ ದೊಡ್ಡ ತಾರಾಬಳಗವೆ ಇದೆ. ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಶೇಖರ್ ಚಂದ್ರ ಛಾಯಾಗ್ರಹಣವಿದೆ.
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಾಯಾತ್ರೆ ತೆರಳುವುದಕ್ಕೆ ತಾತ್ಕಾಲಿಕ ನಿರ್ಬಂಧ ಹೇರಲಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಈ ನಿರ್ಬಂಧ…
ಮೈಸೂರು : ಮುಡುಕುತೊರೆ ಭ್ರಮರಾಂಬ ಸಮೇತ ಶ್ರೀ ಮಲ್ಲಿಕಾರ್ಜುನಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಧಾರ್ಮಿಕ ಮತ್ತು ದತ್ತಿ ಇಲಾಖೆ ಹಾಗೂ…
ಹನೂರು : ಪ್ರತಿಯೊಬ್ಬ ವಿದ್ಯಾರ್ಥಿಗೂ ದ್ವಿತೀಯ ಪಿಯುಸಿ ಒಂದು ಪ್ರಮುಖ ಘಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ಜೀವನವನ್ನು ರೂಪಿಸಿಕೊಳ್ಳುವಲ್ಲಿ ಒಂದು ಗುರಿ…
ಉತ್ತರ ಪ್ರದೇಶ: ಇಲ್ಲಿನ ಪ್ರಯಾಗ್ರಾಜ್ನಲ್ಲಿ ತರಬೇತಿ ಹಾರಾಟ ನಡೆಸುತ್ತಿದ್ದಾಗ ಭಾರತೀಯ ವಾಯುಪಡೆಯ ಮೈಕ್ರೋಲೈಟ್ ವಿಮಾನವೊಂದು ಅಪಘಾತಕ್ಕೀಡಾಗಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲಟ್ಗಳನ್ನು…
ಬೆಂಗಳೂರು: ಕರ್ನಾಟಕದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ…
ಮೈಸೂರು: ಪ್ರಸಾದ್ ಯೋಜನೆಯಡಿ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ಧಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ…