ಮನರಂಜನೆ

24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು ದಾಖಲೆ ಬರೆದ ‘ಕಾಂತಾರ ಚಾಪ್ಟರ್ 1’ ಟ್ರೇಲರ್

ಸೋಮವಾರ (ಸೆ. 22) ಬಿಡುಗಡೆಯಾದ ‘ಕಾಂತಾರ ಚಾಪ್ಟರ್ 1’ ಚಿತ್ರದ ಟ್ರೇಲರ್, ಭಾರತೀಯ ಚಿತ್ರರಂಗದಲ್ಲೇ ಹೊಸದೊಂದು ದಾಖಲೆ ಬರೆದಿದೆ. ಟ್ರೇಲರ್ ಬಿಡುಗಡೆಯಾದ 24 ಗಂಟೆಗಳಲ್ಲಿ 107 ಮಿಲಿಯನ್‍ ವೀಕ್ಷಣೆ ಕಂಡು ‘ಕಾಂತಾರ ಚಾಪ್ಟರ್ 1’ ಟ್ರೇಲರ್ ಹೊಸ ದಾಖಲೆಯನ್ನು ಬರೆದಿದೆ.

ರಿಷಭ್‍ ಶೆಟ್ಟಿ ಅಭಿನಯದ ಮತ್ತು ನಿರ್ದೇಶನದ ಬಹು ನಿರೀಕ್ಷಿತ ‘ಕಾಂತಾರ ಅಧ್ಯಾಯ 1’ ಸಿನಿಮಾದ ಟ್ರೇಲರ್ ಸೋಮವಾರ, ಮಧ್ಯಾಹ್ನ 12:40ಕ್ಕೆ ಅಧಿಕೃತವಾಗಿ ಬಿಡುಗಡೆಯಾಗಿದೆ. ಚಿತ್ರದ ಐದು ಭಾಷೆಗಳ ಟ್ರೇಲರ್ ಬಿಡುಗಡೆಯಾಗಿದ್ದು, ಕನ್ನಡದ ಟ್ರೇಲರನ್ನು ಕನ್ನಡದ ಜನತೆ ಬಿಡುಗಡೆ ಮಾಡಿದೆ. ಮಿಕ್ಕಂತೆ ಹೃತಿಕ್‍ ರೋಶನ್, ಪ್ರಭಾಸ್‍, ಪೃಥ್ವಿರಾಜ್‍ ಮತ್ತು ಶಿವಕಾರ್ತಿಕೇಯನ್‍ ಕ್ರಮವಾಗಿ ಹಿಂದಿ, ತೆಲುಗು, ಮಲಯಾಳಂ ಮತ್ತು ತಮಿಳು ಭಾಷೆಯ ಟ್ರೇಲರ್‍ ಬಿಡುಗಡೆ ಮಾಡಿದ್ದಾರೆ.

ಇದನ್ನು ಓದಿ : ದಾಖಲೆಯ 7000 ಚಿತ್ರಮಂದಿರಗಳಲ್ಲಿ ‘ಕಾಂತಾರ – ಚಾಪ್ಟರ್ 1’ ಬಿಡುಗಡೆ

ಬಿಡುಗಡೆಯಾದ 24 ಗಂಟೆಗಳಲ್ಲಿ ಟ್ರೇಲರ್ 107 (10 ಕೋಟಿ) ಮಿಲಿಯನ್‍ ವೀಕ್ಷಣೆ ಕಂಡರೆ, 3.4 ಮಿಲಿಯನ್‍ ಲೈಕ್‍ಗಳನ್ನು ಪಡೆದಿವೆ. ಹೊಂಬಾಳೆ ಫಿಲಂಸ್‍ ಇದುವರೆಗೂ ಬಿಡುಗಡೆ ಮಾಡಿರುವ ತಮ್ಮ ಸಂಸ್ಥೆಯ ಚಿತ್ರಗಳ ಪೈಕಿ ಇದೊಂದು ಹೊಸ ದಾಖಲೆಯೆಂದರೆ ತಪ್ಪಿಲ್ಲ. ಅಷ್ಟೇ ಅಲ್ಲ, ಭಾರತದ ಅತೀ ಹೆಚ್ಚು ಶೇರ್ ಆದ ಟ್ರೇಲರ್ ಎಂಬ ಹೆಗ್ಗಳಿಕೆಗೂ ಚಿತ್ರ ಪಾತ್ರವಾಗಿದೆ. ಈ ಟ್ರೇಲರ್ 1.2 ಮಿಲಿಯನ್‍ ಶೇರ್ ಆಗಿವೆ.

‘ಕಾಂತಾರ ಚಾಪ್ಟರ್ 1’ ಚಿತ್ರವನ್ನು ಹೊಂಬಾಳೆ ಫಿಲಂಸ್‍ ನಿರ್ಮಿಸಿದ್ದು, ರಿಷಭ್‍ ಶೆಟ್ಟಿ ನಿರ್ದೇಶಿಸುವುದರ ಜೊತೆಗೆ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ಅವರ ಜೊತೆಗೆ ರುಕ್ಮಿಣಿ ವಸಂತ್‍, ಅಚ್ಯುತ್‍ ಕುಮಾರ್, ಗುಲ್ಶನ್‍ ದೇವಯ್ಯ ಮುಂತಾದವರು ನಟಿಸಿದ್ದು, ಚಿತ್ರವು ಕನ್ನಡ ಸೇರಿದಂತೆ ತೆಲುಗು, ಹಿಂದಿ, ತಮಿಳು, ಮಲಯಾಳಂ, ಬಂಗಾಳಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ.

ಆಂದೋಲನ ಡೆಸ್ಕ್

Recent Posts

ಕನ್ನಡ ಭಾಷ ಶಿಕ್ಷಕರ ಪ್ರತ್ಯೇಕ ನೇಮಕಕ್ಕೆ ಸರ್ಕಾರ ಅಸ್ತು ; ಸ್ವಾಗತಾರ್ಹ

ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್‌ಟಿಆರ್ ಹಾಗೂ ಎಚ್‌ಎಸ್‌ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…

2 hours ago

ಶೀಘ್ರದಲ್ಲೇ ರಾಜ್ಯದಲ್ಲಿ ಗುಟ್ಕಾ ನಿಷೇಧ ಆದೇಶ ವಾಪಸ್?‌

ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್‌ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್‌ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…

6 hours ago

6 ದಿನಗಳಾದರೂ ಸಿಗದ ಟೆಕ್ಕಿ ಅದ್ವೈತ್‌ ಸುಳಿವು: ಶಿವಗಂಗೆ ಬೆಟ್ಟದಲ್ಲಿ ಶೋಧ ಕಾರ್ಯಾಚರಣೆ ಸ್ಥಗಿತ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್‌ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್‌ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…

8 hours ago

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

9 hours ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

10 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

13 hours ago