ಮನರಂಜನೆ

‘ಮಂಕುತಿಮ್ಮನ ಕಗ್ಗ’ ಚಿತ್ರದ ಟ್ರೇಲರ್ ಬಂತು; ಮೇನಲ್ಲಿ ಚಿತ್ರ ಬಿಡುಗಡೆ

ಡಾ.ಡಿ.ವಿ. ಗುಂಡಪ್ಪನವರ ಅತ್ಯಂತ ಜನಪ್ರಿಯ ಪದ್ಯ ಪುಸ್ತಕವೆಂದರೆ ಅದು ‘ಮಂಕುತಿಮ್ಮನ ಕಗ್ಗ’. ಈಗ ‘ಮಂಕುತಿಮ್ಮನ ಕಗ್ಗ’ ಹೆಸರಿನ ಚಿತ್ರವೊಂದು ಕನ್ನಡದಲ್ಲಿ ಸದ್ದಿಲ್ಲದೆ ಬಿಡುಗಡೆಗೆ ತಯಾರಿಗೆ ನಿಂತಿದೆ.

ಹೆಸರು ಕೇಳುತ್ತಿದ್ದಂತೆಯೇ ಇದು ‘ಮಂಕುತಿಮ್ಮನ ಕಗ್ಗ’ ಕುರಿತಾದ ಚಿತ್ರ ಅಂತನಿಸಿದರೆ ಆಶ್ಚರ್ಯವಿಲ್ಲ. ಇದು ಡಿ.ವಿ.ಜಿ ಅವರ ಬಾಲ್ಯದ ದಿನಗಳ ಕುರಿತಾದ ಚಿತ್ರ. ರಾಜ ರವಿಶಂಕರ್‍ ಈ ಚಿತ್ರವನ್ನು ನಿರ್ದೇಶಿಸಿದ್ದು, ಎನ್.ಎ. ಶಿವಕುಮಾರ್ ಈ ಚಿತ್ರವನ್ನು ನಿರ್ಮಿಸಿದ್ದಾರೆ. ಈ ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ.

ಈ ಚಿತ್ರದ ಕುರಿತು ಮಾತನಾಡುವ ರವಿಶಂಕರ್‍, ‘ಈ ಚಿತ್ರದಲ್ಲಿ‌‌ ಡಿ.ವಿ.ಜಿ ಅವರ ಬಾಲ್ಯದ ದಿನಗಳ ಬಗ್ಗೆ ತೋರಿಸಲಾಗಿದೆ.‌ ಬಾಲ್ಯದಲ್ಲಿ ಡಿ.ವಿ.ಜಿ ಅವರ ಮೇಲೆ ಅತ್ಯಂತ ಪ್ರಭಾವ ಬೀರಿದ್ದು ಅವರ ಸೋದರಮಾವ ತಿಮ್ಮಣ್ಣ ಮೇಷ್ಟ್ರು. ಸೋದರಮಾವ ಹಾಗೂ ಸೋದರಳಿಯನ ಬಾಂಧವ್ಯವನ್ನು ಈ ಚಿತ್ರದಲ್ಲಿ ತೋರಿಸಿದ್ದೇವೆ. ತಿಮ್ಮಣ್ಣ ಮೇಷ್ಟ್ರು ಪಾತ್ರದಲ್ಲಿ ಹಿರಿಯ ನಟ ರಾಮಕೃಷ್ಣ, ಸೋಮಿ (ಡಿ.ವಿ.ಜಿ) ಅವರ ಪಾತ್ರದಲ್ಲಿ ಮಾಸ್ಟರ್ ರಣವೀರ್, ಅಲಮೇಲು ಪಾತ್ರದಲ್ಲಿ ಭವ್ಯಶ್ರೀ ರೈ, ವೆಂಕರಮಣಯ್ಯ ಪಾತ್ರದಲ್ಲಿ ರವಿನಾರಾಯಣ್ ಹಾಗೂ ಅಜ್ಜಿಯ ಪಾತ್ರದಲ್ಲಿ ಲಕ್ಷ್ಮೀ ನಾಡಗೌಡ ಅಭಿನಯಿಸಿದ್ದಾರೆ. ಚಿತ್ರ ತೆರೆಗೆ ಬರಲು ಸಿದ್ದವಾಗಿದೆ. ಮೇ ಎರಡನೇ ವಾರದಲ್ಲಿ ಬಿಡುಗಡೆಯಾಗಲಿದೆ’ ಎಂದು ಮಾಹಿತಿ ನೀಡಿದರು.

ಹಲವು ವರ್ಷಗಳಿಂದ ಪ್ರಸಾಧನ ಕಲಾವಿದನಾಗಿರುವ ಶಿವಕುಮಾರ್‍ ಅವರ ನಿರ್ಮಾಣದ ಎರಡನೆಯ ಚಿತ್ರವಂತೆ. ‘ಹಲವು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿದ್ದೇನೆ. 20 ವರ್ಷಗಳ ಹಿಂದೆ ‘ಅವಳೆ ನನ್ನ ಗೆಳತಿ’ ಚಿತ್ರ ನಿರ್ಮಾಣ ಮಾಡಿದ್ದೆ. ಇದು ಎರಡನೇ ಚಿತ್ರ. ಡಿ.ವಿ.ಜಿ ಅವರ ಚಿತ್ರ ಮಾಡಿರುವುದಕ್ಕೆ ಹೆಮ್ಮೆ ಇದೆ’ ಎಂದು ನಿರ್ಮಾಪಕ ಶಿವಕುಮಾರ್ ತಿಳಿಸಿದರು.

ತಿಮ್ಮಣ್ಣ ಮೇಷ್ಟ್ರು ಪಾತ್ರ ಮಾಡಿರುವುದು ಬಹಳ ಖುಷಿಯಾಗಿದೆ ಎಂದರು ಹಿರಿಯ ನಟ ರಾಮಕೃಷ್ಣ. ಚಿತ್ರದಲ್ಲಿ ಸಾಯಿಪ್ರಕಾಶ್, ನರಸೇಗೌಡ, ಶ್ರೀನಿವಾಸ್ ಕೆಮ್ತೂರ್‌ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಎ.ಟಿ. ರವೀಶ್‍ ಅವರ ಸಂಗೀತವಿದೆ.

ಆಂದೋಲನ ಡೆಸ್ಕ್

Recent Posts

ತ್ರಿನೇಶ್ವರ ದೇವಾಲಯಕ್ಕೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಭೇಟಿ

ಮೈಸೂರು: ಇಂದು ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಂಪ್ರದಾಯದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ಅವರು ತ್ರಿನೇಶ್ವರ ದೇವಾಲಯಕ್ಕೆ ಭೇಟಿ ನೀಡಿ…

24 mins ago

ಮಹಾಶಿವರಾತ್ರಿ ಪ್ರಯುಕ್ತ ಅರಮನೆ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡು

ಮೈಸೂರು: ನಾಡಿನೆಲ್ಲೆಡೆ ಮಹಾಶಿವರಾತ್ರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿರುವ ತ್ರಿನೇಶ್ವರ ದೇವಾಲಯಕ್ಕೆ ಭಕ್ತರ ದಂಡೇ ಹರಿದು…

30 mins ago

ಓದುಗರ ಪತ್ರ | ಹಟ್ಟಿ ಮಾರಮ್ಮ ದೇವಾಲಯಕ್ಕೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ಪಟ್ಟಣದಲ್ಲಿರುವ ಇತಿಹಾಸ ಪ್ರಸಿದ್ಧ ಹಟ್ಟಿ ಮಾರಮ್ಮ ದೇವಾಲಯದಲ್ಲಿ ಪ್ರತಿ ವರ್ಷ ಫೆಬ್ರವರಿ/ಮಾರ್ಚ್ ತಿಂಗಳಲ್ಲಿ ಅದ್ಧೂರಿಯಾಗಿ ಕೊಂಡೋತ್ಸವ, ಜಾತ್ರೆ ನಡೆಯುತ್ತದೆ.…

1 hour ago

ಓದುಗರ ಪತ್ರ | ಮಾದರಿ ಗ್ರಾಮ ಸೌಂದಾಳ

ಮಹಾರಾಷ್ಟ್ರ ರಾಜ್ಯದ ಸೌಂದಾಳ ಗ್ರಾಮವು ದೇಶದಲ್ಲೇ ಮೊದಲ ಜಾತಿ ಮುಕ್ತ ಮನಸ್ಸುಳ್ಳ ಗ್ರಾಮ ಎಂಬ ಕೀರ್ತಿಯನ್ನು ಗಳಿಸಿ ನಮ್ಮ ಸಮಾಜಕ್ಕೆ…

2 hours ago

ಓದುಗರ ಪತ್ರ | ಪಿಯುಸಿ ಪರೀಕ್ಷೆ ಫಲಿತಾಂಶ ಹೆಚ್ಚಳಕ್ಕೆ ಶ್ರಮಿಸಿ

ಈ ಸಾಲಿನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳಿಂದ ಒಟ್ಟು 1.38 ಲಕ್ಷ ವಿದ್ಯಾರ್ಥಿಗಳು ಹಾಜರಾಗುತ್ತಿದ್ದಾರೆ, ಇವರಲ್ಲಿ 63,514 ವಿದ್ಯಾರ್ಥಿಗಳು…

2 hours ago

ಓದುಗರ ಪತ್ರ | ಹೆಚ್ಚುವರಿ ಆಂಬ್ಯುಲೆನ್ಸ್ ಸೌಲಭ್ಯ ಕಲ್ಪಿಸಿ

ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಾಕಷ್ಟು ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೆ ತುರ್ತು ಸಂದರ್ಭದಲ್ಲಿ ರೋಗಿಗಳನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ತೊಂದರೆಯಾಗಿದೆ.…

2 hours ago