ಮನರಂಜನೆ

‘ತುರ್ರಾ’ ಹಾಡಿಗೆ ಸ್ಫೂರ್ತಿಯಾದ ಹುಚ್ಚನ ‘ಬೊಂಬುವೈ ಟುರ್ರವೈ’ ಪದಗಳು

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

‘ತುರ್ರಾ’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ.

‘ತುರ್ರಾ’ ಒಂದು ಅರ್ಥವಿಲ್ಲದ ಹಾಡು. ಯೋಗರಾಜ್‍ ಭಟ್‍ ಹಾಗೂ ವಿ. ಹರಿಕೃಷ್ಣ ಅವರ ಕಾಂಬಿನೇಷನ್‍ನಲ್ಲಿ ಕೆಲವು ಈ ತರಹದ ಅರ್ಥವಿಲ್ಲದ ಹಾಡುಗಳು ಮೂಡಿಬಮದಿರುವುದಷ್ಟೇ ಅಲ್ಲ, ಜನಪ್ರಿಯವೂ ಆಗಿವೆ. ಆ ಅನರ್ಥದ ಹಾಡಗಳಿಗೆ ಈ ‘ತುರ್ರಾ’ ಸೇರ್ಪಡೆಯಾಗಿದೆ.

ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್‍ ಭಟ್‍, ‘ನನ್ನ‌ ಬಾಲ್ಯದಲ್ಲಿ‌ ನಮ್ಮೂರಿನಲ್ಲಿ ಅಲಿಮಾ‌ ಎಂಬ ಹುಚ್ಚ ಇದ್ದ. ಆತ‌ನಿಗೆ ಮಕ್ಕಳೆಂದರೆ ಪ್ರೀತಿ. ನಾವೆಲ್ಲಾ‌ ಆತನ ಹಿಂದೆ ಸುತ್ತುತ್ತಿದ್ದೆವು. ಆತ ‘ಬೊಂಬುವೈ ಟುರ್ರವೈ’ ಎಂಬ ಪದ ಬಳಸುತ್ತಿದ್ದ.‌ ಆ ಪದವೇ ಈ ‘ತುರ್ರಾ’ ಹಾಡು ಬರೆಯಲು ಸ್ಪೂರ್ತಿ. ವಿ. ಹರಿಕೃಷ್ಣ ಅವರ ಧ್ವನಿ ಈ ಹಾಡಿಗೆ ಸೂಕ್ತವಾಗಿದೆ. ಅವರ ಜೊತೆಗೆ ಸಂಜಿತ್ ಹೆಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ಕನ್ನಡ ಕಲಾಭಿಮಾನಿಗಳು ಈ ಹಾಡನ್ನು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆ ಇದೆ’ ಎಂದರು.

ವಿಶೇಷವೆಂದರೆ, ಚಿತ್ರ ಪ್ರಾರಂಭವಾಗಿದ್ದು, ನಿರ್ಮಾಪಕ ಇ. ಕೃಷ್ಣಪ್ಪ ಅವರ ನೆಲಮಂಗಲದ ತೋಟದಲ್ಲಿ. ಈಗ ಅಲ್ಲೇ ಮುಕ್ತಾಯವಾಗಿದೆ. ಈ ಕುರಿತು ಮಾತನಾಡುವ ಭಟ್, ‘ಚಿತ್ರ ಅರಂಭವಾಗಿದ್ದು, ಈಗ ಮುಕ್ತಾಯವಾಗಿದ್ದು ಇದೇ ಸ್ಥಳದಲ್ಲಿ. ಹಾಗಾಗಿ, ಚಿತ್ರದ ಎರಡನೇ‌ ಹಾಡನ್ನು ಇಲ್ಲೇ ಬಿಡುಗಡೆ ಮಾಡಲಾಗಿದೆ’ ಎಂದರು.

ವಿ. ಹರಿಕೃಷ್ಣ ಸ್ಟುಡಿಯೋದಲ್ಲಿ ತುಂಬಾ ಹೊತ್ತು ಹಾಡಿರುವ ಹಾಡು ಇದಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ‘ಒಂದೊಂದು ಪದ ಹಾಡುವಾಗಲೂ ಬಹಳ ಹೊತ್ತಾಗುತ್ತಿತ್ತು. ಇಂತಹ ಕಷ್ಟದ ಹಾಗೂ ವಿರಳವಾದ ಪದಗಳನ್ನು ಬಳಸಿ ಯೋಗರಾಜ್ ಭಟ್ ಅವರು ಒಂದೊಳ್ಳೆಯ ಹಾಡು ಬರೆದಿದ್ದಾರೆ’ ಎಂದು ವಿ. ಹರಿಕೃಷ್ಣ ತಿಳಿಸಿದರು.

‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಮಿಕ್ಕಂತೆ ಹಿರಿಯ ನಟರಾದ ದತ್ತಣ್ಣ, ರಂಗಾಯಣ ರಘು, ಸಾಧು ಕೋಕಿಲ ಮುಂತಾದವರು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 23.8 ಕೋಟಿ ಮೌಲ್ಯದ ಕೊಕೇನ್‌ ಜಪ್ತಿ

ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 23.8 ಕೋಟಿ ರೂ ಮೌಲ್ಯದ ಕೊಕೇನ್‌ ಸೀಜ್‌ ಮಾಡಲಾಗಿದೆ. ಎನ್‌ಸಿಬಿ ಅಧಿಕಾರಿಗಳು…

35 mins ago

ನಾಳೆ ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ ಟಾಕ್ಸಿಕ್‌ ಚಿತ್ರದ 2ನೇ ಟೀಸರ್‌ ರಿಲೀಸ್‌

ಬೆಂಗಳೂರು: ಕೆಜಿಎಫ್‌-2 ಯಶಸ್ಸಿನ ನಂತರ ಇಡೀ ದೇಶದ ಕಾತುರದಿಂದ ಕಾಯುತ್ತಿರುವ ಸಿನಿಮಾ ಎಂದರೆ ಅದು ರಾಕಿಂಗ್‌ ಸ್ಟಾರ್‌ ಯಶ್‌ ಅಭಿನಯದ…

2 hours ago

ದಲಿತರು ಯಾಕೆ ಮುಖ್ಯಮಂತ್ರಿಯಾಗಬಾರದು?: ಮಾಜಿ ಸಚಿವ ಕೆ.ಎನ್.ರಾಜಣ್ಣ

ತುಮಕೂರು: ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಸ್ತಾಂತರ ಚರ್ಚೆ ನಡುವೆಯೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮತ್ತೆ ದಲಿತ ಸಿಎಂ ವಿಚಾರ ಪ್ರಸ್ತಾಪಿಸಿದ್ದಾರೆ.…

3 hours ago

ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರು ಪ್ರವಾಸದಲ್ಲಿದ್ದ ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಡಾ.ವಾಲ್ಮೀಕಿ ಪ್ರಸನ್ನಾನಂದ ಪುರಿ ಸ್ವಾಮೀಜಿಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.…

3 hours ago

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಗ್ರೀನ್‌ಸಿಗ್ನಲ್:‌ ಅನ್ನದಾತರ ಆಕ್ರೋಶ

ಚಾಮರಾಜನಗರ: ಕಳೆದ ಮೂರು ತಿಂಗಳಿನಿಂದಲೂ ಬಂದ್‌ ಆಗಿದ್ದ ನಾಗರಹೊಳೆ ಹಾಗೂ ಬಂಡೀಪುರ ಸಫಾರಿ ಆರಂಭಕ್ಕೆ ಸರ್ಕಾರ ಗ್ರೀನ್‌ ಸಿಗ್ನಲ್‌ ನೀಡಿದೆ.…

3 hours ago

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

ಹಾಸನ: ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಹನುಮಂತಪುರ ಬಳಿ ನಡೆದಿದೆ. 27 ವರ್ಷ…

3 hours ago