ಮನರಂಜನೆ

‘ತುರ್ರಾ’ ಹಾಡಿಗೆ ಸ್ಫೂರ್ತಿಯಾದ ಹುಚ್ಚನ ‘ಬೊಂಬುವೈ ಟುರ್ರವೈ’ ಪದಗಳು

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

‘ತುರ್ರಾ’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ.

‘ತುರ್ರಾ’ ಒಂದು ಅರ್ಥವಿಲ್ಲದ ಹಾಡು. ಯೋಗರಾಜ್‍ ಭಟ್‍ ಹಾಗೂ ವಿ. ಹರಿಕೃಷ್ಣ ಅವರ ಕಾಂಬಿನೇಷನ್‍ನಲ್ಲಿ ಕೆಲವು ಈ ತರಹದ ಅರ್ಥವಿಲ್ಲದ ಹಾಡುಗಳು ಮೂಡಿಬಮದಿರುವುದಷ್ಟೇ ಅಲ್ಲ, ಜನಪ್ರಿಯವೂ ಆಗಿವೆ. ಆ ಅನರ್ಥದ ಹಾಡಗಳಿಗೆ ಈ ‘ತುರ್ರಾ’ ಸೇರ್ಪಡೆಯಾಗಿದೆ.

ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್‍ ಭಟ್‍, ‘ನನ್ನ‌ ಬಾಲ್ಯದಲ್ಲಿ‌ ನಮ್ಮೂರಿನಲ್ಲಿ ಅಲಿಮಾ‌ ಎಂಬ ಹುಚ್ಚ ಇದ್ದ. ಆತ‌ನಿಗೆ ಮಕ್ಕಳೆಂದರೆ ಪ್ರೀತಿ. ನಾವೆಲ್ಲಾ‌ ಆತನ ಹಿಂದೆ ಸುತ್ತುತ್ತಿದ್ದೆವು. ಆತ ‘ಬೊಂಬುವೈ ಟುರ್ರವೈ’ ಎಂಬ ಪದ ಬಳಸುತ್ತಿದ್ದ.‌ ಆ ಪದವೇ ಈ ‘ತುರ್ರಾ’ ಹಾಡು ಬರೆಯಲು ಸ್ಪೂರ್ತಿ. ವಿ. ಹರಿಕೃಷ್ಣ ಅವರ ಧ್ವನಿ ಈ ಹಾಡಿಗೆ ಸೂಕ್ತವಾಗಿದೆ. ಅವರ ಜೊತೆಗೆ ಸಂಜಿತ್ ಹೆಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ಕನ್ನಡ ಕಲಾಭಿಮಾನಿಗಳು ಈ ಹಾಡನ್ನು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆ ಇದೆ’ ಎಂದರು.

ವಿಶೇಷವೆಂದರೆ, ಚಿತ್ರ ಪ್ರಾರಂಭವಾಗಿದ್ದು, ನಿರ್ಮಾಪಕ ಇ. ಕೃಷ್ಣಪ್ಪ ಅವರ ನೆಲಮಂಗಲದ ತೋಟದಲ್ಲಿ. ಈಗ ಅಲ್ಲೇ ಮುಕ್ತಾಯವಾಗಿದೆ. ಈ ಕುರಿತು ಮಾತನಾಡುವ ಭಟ್, ‘ಚಿತ್ರ ಅರಂಭವಾಗಿದ್ದು, ಈಗ ಮುಕ್ತಾಯವಾಗಿದ್ದು ಇದೇ ಸ್ಥಳದಲ್ಲಿ. ಹಾಗಾಗಿ, ಚಿತ್ರದ ಎರಡನೇ‌ ಹಾಡನ್ನು ಇಲ್ಲೇ ಬಿಡುಗಡೆ ಮಾಡಲಾಗಿದೆ’ ಎಂದರು.

ವಿ. ಹರಿಕೃಷ್ಣ ಸ್ಟುಡಿಯೋದಲ್ಲಿ ತುಂಬಾ ಹೊತ್ತು ಹಾಡಿರುವ ಹಾಡು ಇದಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ‘ಒಂದೊಂದು ಪದ ಹಾಡುವಾಗಲೂ ಬಹಳ ಹೊತ್ತಾಗುತ್ತಿತ್ತು. ಇಂತಹ ಕಷ್ಟದ ಹಾಗೂ ವಿರಳವಾದ ಪದಗಳನ್ನು ಬಳಸಿ ಯೋಗರಾಜ್ ಭಟ್ ಅವರು ಒಂದೊಳ್ಳೆಯ ಹಾಡು ಬರೆದಿದ್ದಾರೆ’ ಎಂದು ವಿ. ಹರಿಕೃಷ್ಣ ತಿಳಿಸಿದರು.

‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಮಿಕ್ಕಂತೆ ಹಿರಿಯ ನಟರಾದ ದತ್ತಣ್ಣ, ರಂಗಾಯಣ ರಘು, ಸಾಧು ಕೋಕಿಲ ಮುಂತಾದವರು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

5 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

6 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

6 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

7 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

7 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 hours ago