ಮನರಂಜನೆ

‘ತುರ್ರಾ’ ಹಾಡಿಗೆ ಸ್ಫೂರ್ತಿಯಾದ ಹುಚ್ಚನ ‘ಬೊಂಬುವೈ ಟುರ್ರವೈ’ ಪದಗಳು

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

‘ತುರ್ರಾ’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ.

‘ತುರ್ರಾ’ ಒಂದು ಅರ್ಥವಿಲ್ಲದ ಹಾಡು. ಯೋಗರಾಜ್‍ ಭಟ್‍ ಹಾಗೂ ವಿ. ಹರಿಕೃಷ್ಣ ಅವರ ಕಾಂಬಿನೇಷನ್‍ನಲ್ಲಿ ಕೆಲವು ಈ ತರಹದ ಅರ್ಥವಿಲ್ಲದ ಹಾಡುಗಳು ಮೂಡಿಬಮದಿರುವುದಷ್ಟೇ ಅಲ್ಲ, ಜನಪ್ರಿಯವೂ ಆಗಿವೆ. ಆ ಅನರ್ಥದ ಹಾಡಗಳಿಗೆ ಈ ‘ತುರ್ರಾ’ ಸೇರ್ಪಡೆಯಾಗಿದೆ.

ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್‍ ಭಟ್‍, ‘ನನ್ನ‌ ಬಾಲ್ಯದಲ್ಲಿ‌ ನಮ್ಮೂರಿನಲ್ಲಿ ಅಲಿಮಾ‌ ಎಂಬ ಹುಚ್ಚ ಇದ್ದ. ಆತ‌ನಿಗೆ ಮಕ್ಕಳೆಂದರೆ ಪ್ರೀತಿ. ನಾವೆಲ್ಲಾ‌ ಆತನ ಹಿಂದೆ ಸುತ್ತುತ್ತಿದ್ದೆವು. ಆತ ‘ಬೊಂಬುವೈ ಟುರ್ರವೈ’ ಎಂಬ ಪದ ಬಳಸುತ್ತಿದ್ದ.‌ ಆ ಪದವೇ ಈ ‘ತುರ್ರಾ’ ಹಾಡು ಬರೆಯಲು ಸ್ಪೂರ್ತಿ. ವಿ. ಹರಿಕೃಷ್ಣ ಅವರ ಧ್ವನಿ ಈ ಹಾಡಿಗೆ ಸೂಕ್ತವಾಗಿದೆ. ಅವರ ಜೊತೆಗೆ ಸಂಜಿತ್ ಹೆಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ಕನ್ನಡ ಕಲಾಭಿಮಾನಿಗಳು ಈ ಹಾಡನ್ನು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆ ಇದೆ’ ಎಂದರು.

ವಿಶೇಷವೆಂದರೆ, ಚಿತ್ರ ಪ್ರಾರಂಭವಾಗಿದ್ದು, ನಿರ್ಮಾಪಕ ಇ. ಕೃಷ್ಣಪ್ಪ ಅವರ ನೆಲಮಂಗಲದ ತೋಟದಲ್ಲಿ. ಈಗ ಅಲ್ಲೇ ಮುಕ್ತಾಯವಾಗಿದೆ. ಈ ಕುರಿತು ಮಾತನಾಡುವ ಭಟ್, ‘ಚಿತ್ರ ಅರಂಭವಾಗಿದ್ದು, ಈಗ ಮುಕ್ತಾಯವಾಗಿದ್ದು ಇದೇ ಸ್ಥಳದಲ್ಲಿ. ಹಾಗಾಗಿ, ಚಿತ್ರದ ಎರಡನೇ‌ ಹಾಡನ್ನು ಇಲ್ಲೇ ಬಿಡುಗಡೆ ಮಾಡಲಾಗಿದೆ’ ಎಂದರು.

ವಿ. ಹರಿಕೃಷ್ಣ ಸ್ಟುಡಿಯೋದಲ್ಲಿ ತುಂಬಾ ಹೊತ್ತು ಹಾಡಿರುವ ಹಾಡು ಇದಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ‘ಒಂದೊಂದು ಪದ ಹಾಡುವಾಗಲೂ ಬಹಳ ಹೊತ್ತಾಗುತ್ತಿತ್ತು. ಇಂತಹ ಕಷ್ಟದ ಹಾಗೂ ವಿರಳವಾದ ಪದಗಳನ್ನು ಬಳಸಿ ಯೋಗರಾಜ್ ಭಟ್ ಅವರು ಒಂದೊಳ್ಳೆಯ ಹಾಡು ಬರೆದಿದ್ದಾರೆ’ ಎಂದು ವಿ. ಹರಿಕೃಷ್ಣ ತಿಳಿಸಿದರು.

‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಮಿಕ್ಕಂತೆ ಹಿರಿಯ ನಟರಾದ ದತ್ತಣ್ಣ, ರಂಗಾಯಣ ರಘು, ಸಾಧು ಕೋಕಿಲ ಮುಂತಾದವರು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

ಮಾಡೆಲ್‌ ಟ್ವಿಶಾ ಶರ್ಮಾ ಸಾವಿನ ಕೇಸ್‌ ತನಿಖೆ ಸಿಬಿಐ ಹೆಗಲಿಗೆ

ನವದೆಹಲಿ : ಮಾಡೆಲ್ ತ್ವಿಶಾ ಶರ್ಮಾ ಸಾವು ಪ್ರಕರಣ ಇದೀಗ ಸುಪ್ರೀಂಕೋರ್ಟ್​ ತಲುಪಿದ್ದು, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಕೇಂದ್ರ ತನಿಖಾ…

1 hour ago

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

3 hours ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

5 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

6 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

7 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

7 hours ago