ಮನರಂಜನೆ

‘ತುರ್ರಾ’ ಹಾಡಿಗೆ ಸ್ಫೂರ್ತಿಯಾದ ಹುಚ್ಚನ ‘ಬೊಂಬುವೈ ಟುರ್ರವೈ’ ಪದಗಳು

‘ಮನದ ಕಡಲು’ ಚಿತ್ರದ ‘ಹೂ ದುಂಬಿಯ ಕಥೆಯ’ ಎಂಬ ಹಾಡನ್ನು ಕೆಲವು ದಿನಗಳ ಹಿಂದಷ್ಟೇ ಬಿಡುಗಡೆ ಮಾಡಿದ್ದರು ನಿರ್ದೇಶಕ ಯೋಗರಾಜ್‍ ಭಟ್‍. ಈಗ ಅವರು ಇನ್ನೊಂದು ಹೊಸ ಹಾಡಿನೊಂದಿಗೆ ಬಂದಿದ್ದಾರೆ. ‘ತುರ್ರಾ’ ಎಂದು ಪ್ರಾರಂಭವಾಗುವ ಈ ಹಾಡನ್ನು ಯೂಟ್ಯೂಬ್‍ನ ಡಿಬೀಟ್ಸ್ ಚಾನಲ್‍ನಲ್ಲಿ ಬಿಡುಗಡೆಯಾಗಿದೆ.

‘ತುರ್ರಾ’ ಹಾಡಿಗೆ ಯೋಗರಾಜ್ ಭಟ್ ಸಾಹಿತ್ಯ ಬರೆದಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜಿಸಿದ್ದಾರೆ. ಇನ್ನು, ವಿ. ಹರಿಕೃಷ್ಣ, ಸಂಜಿತ್ ಹಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ.

‘ತುರ್ರಾ’ ಒಂದು ಅರ್ಥವಿಲ್ಲದ ಹಾಡು. ಯೋಗರಾಜ್‍ ಭಟ್‍ ಹಾಗೂ ವಿ. ಹರಿಕೃಷ್ಣ ಅವರ ಕಾಂಬಿನೇಷನ್‍ನಲ್ಲಿ ಕೆಲವು ಈ ತರಹದ ಅರ್ಥವಿಲ್ಲದ ಹಾಡುಗಳು ಮೂಡಿಬಮದಿರುವುದಷ್ಟೇ ಅಲ್ಲ, ಜನಪ್ರಿಯವೂ ಆಗಿವೆ. ಆ ಅನರ್ಥದ ಹಾಡಗಳಿಗೆ ಈ ‘ತುರ್ರಾ’ ಸೇರ್ಪಡೆಯಾಗಿದೆ.

ಈ ಹಾಡಿನ ಕುರಿತು ಮಾತನಾಡುವ ಯೋಗರಾಜ್‍ ಭಟ್‍, ‘ನನ್ನ‌ ಬಾಲ್ಯದಲ್ಲಿ‌ ನಮ್ಮೂರಿನಲ್ಲಿ ಅಲಿಮಾ‌ ಎಂಬ ಹುಚ್ಚ ಇದ್ದ. ಆತ‌ನಿಗೆ ಮಕ್ಕಳೆಂದರೆ ಪ್ರೀತಿ. ನಾವೆಲ್ಲಾ‌ ಆತನ ಹಿಂದೆ ಸುತ್ತುತ್ತಿದ್ದೆವು. ಆತ ‘ಬೊಂಬುವೈ ಟುರ್ರವೈ’ ಎಂಬ ಪದ ಬಳಸುತ್ತಿದ್ದ.‌ ಆ ಪದವೇ ಈ ‘ತುರ್ರಾ’ ಹಾಡು ಬರೆಯಲು ಸ್ಪೂರ್ತಿ. ವಿ. ಹರಿಕೃಷ್ಣ ಅವರ ಧ್ವನಿ ಈ ಹಾಡಿಗೆ ಸೂಕ್ತವಾಗಿದೆ. ಅವರ ಜೊತೆಗೆ ಸಂಜಿತ್ ಹೆಗ್ಡೆ ಹಾಗೂ ಪ್ರಾರ್ಥನಾ ಈ ಹಾಡನ್ನು ಹಾಡಿದ್ದಾರೆ. ಕನ್ನಡ ಕಲಾಭಿಮಾನಿಗಳು ಈ ಹಾಡನ್ನು ಮೆಚ್ಚಿಕೊಳ್ಳುತ್ತಾರೆ ಎಂಬ ಭರವಸೆ ಇದೆ’ ಎಂದರು.

ವಿಶೇಷವೆಂದರೆ, ಚಿತ್ರ ಪ್ರಾರಂಭವಾಗಿದ್ದು, ನಿರ್ಮಾಪಕ ಇ. ಕೃಷ್ಣಪ್ಪ ಅವರ ನೆಲಮಂಗಲದ ತೋಟದಲ್ಲಿ. ಈಗ ಅಲ್ಲೇ ಮುಕ್ತಾಯವಾಗಿದೆ. ಈ ಕುರಿತು ಮಾತನಾಡುವ ಭಟ್, ‘ಚಿತ್ರ ಅರಂಭವಾಗಿದ್ದು, ಈಗ ಮುಕ್ತಾಯವಾಗಿದ್ದು ಇದೇ ಸ್ಥಳದಲ್ಲಿ. ಹಾಗಾಗಿ, ಚಿತ್ರದ ಎರಡನೇ‌ ಹಾಡನ್ನು ಇಲ್ಲೇ ಬಿಡುಗಡೆ ಮಾಡಲಾಗಿದೆ’ ಎಂದರು.

ವಿ. ಹರಿಕೃಷ್ಣ ಸ್ಟುಡಿಯೋದಲ್ಲಿ ತುಂಬಾ ಹೊತ್ತು ಹಾಡಿರುವ ಹಾಡು ಇದಂತೆ. ಹಾಗಂತ ಅವರೇ ಹೇಳಿಕೊಂಡಿದ್ದಾರೆ. ‘ಒಂದೊಂದು ಪದ ಹಾಡುವಾಗಲೂ ಬಹಳ ಹೊತ್ತಾಗುತ್ತಿತ್ತು. ಇಂತಹ ಕಷ್ಟದ ಹಾಗೂ ವಿರಳವಾದ ಪದಗಳನ್ನು ಬಳಸಿ ಯೋಗರಾಜ್ ಭಟ್ ಅವರು ಒಂದೊಳ್ಳೆಯ ಹಾಡು ಬರೆದಿದ್ದಾರೆ’ ಎಂದು ವಿ. ಹರಿಕೃಷ್ಣ ತಿಳಿಸಿದರು.

‘ಮನದ ಕಡಲು’ ಚಿತ್ರದಲ್ಲಿ ಸುಮುಖ, ಅಂಜಲಿ ಅನೀಶ್‍ ಮತ್ತು ರಾಶಿಕಾ ಶೆಟ್ಟಿ ನಾಯಕ-ನಾಯಕಿಯರಾಗಿ ನಟಿಸಿದ್ದಾರೆ. ಮಿಕ್ಕಂತೆ ಹಿರಿಯ ನಟರಾದ ದತ್ತಣ್ಣ, ರಂಗಾಯಣ ರಘು, ಸಾಧು ಕೋಕಿಲ ಮುಂತಾದವರು ಚಿತ್ರದಲ್ಲಿದ್ದಾರೆ. ಚಿತ್ರಕ್ಕೆ ಸಂತೋಷ್‍ ರೈ ಪಾತಾಜೆ ಛಾಯಾಗ್ರಹಣವಿದೆ.

ಭೂಮಿಕಾ

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

10 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

11 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

11 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

12 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

17 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

17 hours ago