ಮನರಂಜನೆ

ಕನ್ನಡದ ಮೊದಲ Zombie ಚಿತ್ರಕ್ಕೆ ‘ಬ್ರೋ ಗೌಡ’ ನಾಯಕ

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್‍ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್‍ ಶಮಂತ್‍ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್‍ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್‍ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ.

ಹೌದು, ‘ಬಿಗ್‍ ಬಾಸ್‍ – ಸೀಸನ್‍ 8’ರ ಖ್ಯಾತಿಯ ಶಮಂತ್‍ ಅಲಿಯಾಸ್‍ ಬ್ರೋ ಗೌಡ, ಇದೀಗ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಶಮಂತ್ ಅಭಿನಯದ ಹೊಸ ಚಿತ್ರದ ಅಧಿಕೃತ ಘೋಷಣೆ ಇತ್ತೀಚೆಗೆ ಆಗಿದ್ದು, ಈ ಚಿತ್ರದಲ್ಲಿ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಹೆಸರೇನು? ಈ ವಿಷಯದ ಬಗ್ಗೆ ಚಿತ್ರತಂಡ ಬಾಯಿಬಿಟ್ಟಿಲ್ಲ. ಆದರೆ, ಇದು ಕನ್ನಡದ ಮೊದಲ Zombie (ಪ್ರೇತ) ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರಕ್ಕೆ ಆನಂದ್‍ ರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಅನಿರುದ್ಧ್ ಅಭಿನಯದ ‘ಚೆಫ್‍ ಚಿದಂಬರ’ ಮತ್ತು ವಿಜಯ್‍ ರಾಘವೇಂದ್ರ ಅಭಿನಯದ ‘ರಾಘು’ ಚಿತ್ರಗಳನ್ನು ಆನಂದ್‍ ರಾಜ್‍ ನಿರ್ದೇಶನ ಮಾಡಿದ್ದರು. ಎರಡೂ ಕ್ರೈಂ ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈ ಬಾರಿ ಬೇರೆ ತರಹದ ಪ್ರಯತ್ನವೊಂನ್ನು ಮಾಡುತ್ತಿದ್ದಾರೆ ಆನಂದ್ ರಾಜ್‍.

ಈ ಚಿತ್ರದಲ್ಲಿ ಬ್ರೋ ಗೌಡ ನಾಯಕನಾಗಿ ನಟಿಸುತ್ತಿರುದರ ಜೊತೆಗೆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅವರು ಬ್ರೋ ಮೀಡಿಯಾ ಪ್ರೊಡಕ್ಷನ್ಸ್ ಎಂಬ ಸಂಸ್ಥೆಯಡಿ ನಿರ್ಮಿಸುತ್ತಿದ್ದಾರೆ. ಸನ್‍ರೈಸ್‍ ಸಿನಿಮಾಸ್‍ ಎಂಬ ಸಂಸ್ಥೆ ಸಹ ಚಿತ್ರ ನಿರ್ಮಾಣದಲ್ಲಿ ಕೈಜೋಡಿಸಿದೆ.

ಏಪ್ರಿಲ್‍ ತಿಂಗಳನಿಂದ ಪ್ರಾರಂಭವಾಗಲಿರುವ ಈ ಚಿತ್ರಕ್ಕೆ ಉದಯ್‍ ಲೀಲಾ ಅವರ ಛಾಯಾಗ್ರಹಣ ಮತ್ತು ವಿಜೇತ್‍ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದ್ದು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ.

ಭೂಮಿಕಾ

Recent Posts

ಮಹಾತ್ಮ ಗಾಂಧಿ ಪುಣ್ಯತಿಥಿ | ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ನಮನ

ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…

22 mins ago

ಡ್ರಗ್ಸ್‌ ಗುಮಾನಿ | ಎನ್‌ಸಿಬಿ ಅಧಿಕಾರಿಗಳ ದಾಳಿ ಫಾಲೋಅಪ್‌ ಅಷ್ಟೇ : ಗೃಹ ಸಚಿವ

ಮೈಸೂರು : ಮೈಸೂರಿನಲ್ಲಿ ಡ್ರಗ್ಸ್‌ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್‌.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್‌…

57 mins ago

ಓದುಗರ ಪತ್ರ: ಮಾನಸ ಗಂಗೋತ್ರಿಯಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಿ

ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ವಿವಿಯ ಆವರಣದಲ್ಲಿ ವಿದ್ಯಾರ್ಥಿ ನಿಲಯಗಳ ವ್ಯವಸ್ಥೆಯೂ ಇದೆ. ಸ್ಥಳೀಯ…

5 hours ago

ಓದುಗರ ಪತ್ರ: ಶಾಂತಿ, ಸೌಹಾರ್ದ ಸಭೆಗಳು ಹೆಚ್ಚು ಹೆಚ್ಚು ನಡೆಯಲಿ

ಇತ್ತೀಚಿನ ದಿನಗಳಲ್ಲಿ ಅಲ್ಲಲ್ಲಿ ಜಾತಿ ಸಂಘರ್ಷ, ಧರ್ಮ ಸಂಘರ್ಷ, ಜನಾಂಗೀಯ ಸಂಘರ್ಷಗಳು ನಡೆಯುತ್ತಲೇ ಇವೆ. ‘ಸರ್ವ ಜನಾಂಗದ ಶಾಂತಿಯ ತೋಟ’…

5 hours ago

ಓದುಗರ ಪತ್ರ: ಶ್ರೇಷ್ಠ ಕಾರ್ಮಿಕ ಧುರೀಣ ಅನಂತ ಸುಬ್ಬರಾವ್

ಹಿರಿಯ ಕಾರ್ಮಿಕ ಧುರೀಣ, ಕಮ್ಯುನಿಸ್ಟ್ ಪಕ್ಷದ ಹಿರಿಯ ನಾಯಕ ಅನಂತ ಸುಬ್ಬರಾವ್ ಕಳೆದ ಸುಮಾರು ೪-೫ ದಶಕಗಳಿಂದ ಕಾರ್ಮಿಕ ಚಳವಳಿಗಳಲ್ಲಿ…

5 hours ago

ಬಾಪೂಜಿ ನೆನಪಲ್ಲಿ; ಖಾದಿ ಕೇಂದ್ರದ ಅಂಗಳದಲ್ಲಿ…

ಕೆ.ಎಸ್. ಚಂದ್ರಶೇಖರ್ ಮೂರ್ತಿ ದುಸ್ಥಿತಿಯಲ್ಲಿ ದೇಶದ ಪ್ರಪ್ರಥಮ ತಗಡೂರು ಖಾದಿ ಕೇಂದ್ರ  ಜ.೩೦, ೧೯೪೮ರಂದು ಅಹಿಂಸಾ ಪ್ರತಿಪಾದಕ, ಸ್ವಾತಂತ್ರ್ಯ ಹೋರಾಟಗಾರ…

5 hours ago