ಮನರಂಜನೆ

ಕನ್ನಡದ ಮೊದಲ Zombie ಚಿತ್ರಕ್ಕೆ ‘ಬ್ರೋ ಗೌಡ’ ನಾಯಕ

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್‍ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್‍ ಶಮಂತ್‍ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್‍ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್‍ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ.

ಹೌದು, ‘ಬಿಗ್‍ ಬಾಸ್‍ – ಸೀಸನ್‍ 8’ರ ಖ್ಯಾತಿಯ ಶಮಂತ್‍ ಅಲಿಯಾಸ್‍ ಬ್ರೋ ಗೌಡ, ಇದೀಗ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಶಮಂತ್ ಅಭಿನಯದ ಹೊಸ ಚಿತ್ರದ ಅಧಿಕೃತ ಘೋಷಣೆ ಇತ್ತೀಚೆಗೆ ಆಗಿದ್ದು, ಈ ಚಿತ್ರದಲ್ಲಿ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಹೆಸರೇನು? ಈ ವಿಷಯದ ಬಗ್ಗೆ ಚಿತ್ರತಂಡ ಬಾಯಿಬಿಟ್ಟಿಲ್ಲ. ಆದರೆ, ಇದು ಕನ್ನಡದ ಮೊದಲ Zombie (ಪ್ರೇತ) ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರಕ್ಕೆ ಆನಂದ್‍ ರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಅನಿರುದ್ಧ್ ಅಭಿನಯದ ‘ಚೆಫ್‍ ಚಿದಂಬರ’ ಮತ್ತು ವಿಜಯ್‍ ರಾಘವೇಂದ್ರ ಅಭಿನಯದ ‘ರಾಘು’ ಚಿತ್ರಗಳನ್ನು ಆನಂದ್‍ ರಾಜ್‍ ನಿರ್ದೇಶನ ಮಾಡಿದ್ದರು. ಎರಡೂ ಕ್ರೈಂ ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈ ಬಾರಿ ಬೇರೆ ತರಹದ ಪ್ರಯತ್ನವೊಂನ್ನು ಮಾಡುತ್ತಿದ್ದಾರೆ ಆನಂದ್ ರಾಜ್‍.

ಈ ಚಿತ್ರದಲ್ಲಿ ಬ್ರೋ ಗೌಡ ನಾಯಕನಾಗಿ ನಟಿಸುತ್ತಿರುದರ ಜೊತೆಗೆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅವರು ಬ್ರೋ ಮೀಡಿಯಾ ಪ್ರೊಡಕ್ಷನ್ಸ್ ಎಂಬ ಸಂಸ್ಥೆಯಡಿ ನಿರ್ಮಿಸುತ್ತಿದ್ದಾರೆ. ಸನ್‍ರೈಸ್‍ ಸಿನಿಮಾಸ್‍ ಎಂಬ ಸಂಸ್ಥೆ ಸಹ ಚಿತ್ರ ನಿರ್ಮಾಣದಲ್ಲಿ ಕೈಜೋಡಿಸಿದೆ.

ಏಪ್ರಿಲ್‍ ತಿಂಗಳನಿಂದ ಪ್ರಾರಂಭವಾಗಲಿರುವ ಈ ಚಿತ್ರಕ್ಕೆ ಉದಯ್‍ ಲೀಲಾ ಅವರ ಛಾಯಾಗ್ರಹಣ ಮತ್ತು ವಿಜೇತ್‍ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದ್ದು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ.

ಭೂಮಿಕಾ

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

46 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

2 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

7 hours ago