ಮನರಂಜನೆ

ಕನ್ನಡದ ಮೊದಲ Zombie ಚಿತ್ರಕ್ಕೆ ‘ಬ್ರೋ ಗೌಡ’ ನಾಯಕ

‘ಲಕ್ಷ್ಮೀ ಬಾರಮ್ಮ’ ಧಾರಾವಾಹಿಯಲ್ಲಿ ವೈಷ್ಣವ್‍ ಪಾತ್ರ ಮಾಡುತ್ತಿರುವ ‘ಬ್ರೋ ಗೌಡ’ ಅಲಿಯಾಸ್‍ ಶಮಂತ್‍ ಗೌಡ ಜೀವನದಲ್ಲಿ ದಿನಕ್ಕೊಂದು ತಿರುವು, ದಿನಕ್ಕೊಂದು ಸಮಸ್ಯೆ. ಆದರೆ, ನಿಜಜೀವನದಲ್ಲಿ ಶಮಂತ್‍ ಬಹಳ ಖುಷಿಯಾಗಿದ್ದಾರೆ. ಅದಕ್ಕೆ ಕಾರಣ, ಶಮಂತ್‍ ಇದೇ ಮೊದಲ ಬಾರಿಗೆ ಹೀರೋ ಆಗುವುದಕ್ಕೆ ಸಜ್ಜಾಗಿದ್ದಾರೆ.

ಹೌದು, ‘ಬಿಗ್‍ ಬಾಸ್‍ – ಸೀಸನ್‍ 8’ರ ಖ್ಯಾತಿಯ ಶಮಂತ್‍ ಅಲಿಯಾಸ್‍ ಬ್ರೋ ಗೌಡ, ಇದೀಗ ಸಿನಿಮಾಗೆ ಎಂಟ್ರಿ ಕೊಟ್ಟಿದ್ದಾರೆ. ಶಮಂತ್ ಅಭಿನಯದ ಹೊಸ ಚಿತ್ರದ ಅಧಿಕೃತ ಘೋಷಣೆ ಇತ್ತೀಚೆಗೆ ಆಗಿದ್ದು, ಈ ಚಿತ್ರದಲ್ಲಿ ಅವರು ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.

ಚಿತ್ರದ ಹೆಸರೇನು? ಈ ವಿಷಯದ ಬಗ್ಗೆ ಚಿತ್ರತಂಡ ಬಾಯಿಬಿಟ್ಟಿಲ್ಲ. ಆದರೆ, ಇದು ಕನ್ನಡದ ಮೊದಲ Zombie (ಪ್ರೇತ) ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಈ ಚಿತ್ರಕ್ಕೆ ಆನಂದ್‍ ರಾಜ್‍ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಈ ಹಿಂದೆ ಅನಿರುದ್ಧ್ ಅಭಿನಯದ ‘ಚೆಫ್‍ ಚಿದಂಬರ’ ಮತ್ತು ವಿಜಯ್‍ ರಾಘವೇಂದ್ರ ಅಭಿನಯದ ‘ರಾಘು’ ಚಿತ್ರಗಳನ್ನು ಆನಂದ್‍ ರಾಜ್‍ ನಿರ್ದೇಶನ ಮಾಡಿದ್ದರು. ಎರಡೂ ಕ್ರೈಂ ಥ್ರಿಲ್ಲರ್‍ ಚಿತ್ರಗಳಾಗಿದ್ದವು. ಈ ಬಾರಿ ಬೇರೆ ತರಹದ ಪ್ರಯತ್ನವೊಂನ್ನು ಮಾಡುತ್ತಿದ್ದಾರೆ ಆನಂದ್ ರಾಜ್‍.

ಈ ಚಿತ್ರದಲ್ಲಿ ಬ್ರೋ ಗೌಡ ನಾಯಕನಾಗಿ ನಟಿಸುತ್ತಿರುದರ ಜೊತೆಗೆ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದಾರೆ. ಈ ಚಿತ್ರವನ್ನು ಅವರು ಬ್ರೋ ಮೀಡಿಯಾ ಪ್ರೊಡಕ್ಷನ್ಸ್ ಎಂಬ ಸಂಸ್ಥೆಯಡಿ ನಿರ್ಮಿಸುತ್ತಿದ್ದಾರೆ. ಸನ್‍ರೈಸ್‍ ಸಿನಿಮಾಸ್‍ ಎಂಬ ಸಂಸ್ಥೆ ಸಹ ಚಿತ್ರ ನಿರ್ಮಾಣದಲ್ಲಿ ಕೈಜೋಡಿಸಿದೆ.

ಏಪ್ರಿಲ್‍ ತಿಂಗಳನಿಂದ ಪ್ರಾರಂಭವಾಗಲಿರುವ ಈ ಚಿತ್ರಕ್ಕೆ ಉದಯ್‍ ಲೀಲಾ ಅವರ ಛಾಯಾಗ್ರಹಣ ಮತ್ತು ವಿಜೇತ್‍ ಚಂದ್ರ ಸಂಕಲನ ಈ ಚಿತ್ರಕ್ಕಿದೆ. ಉಳಿದ ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದ್ದು, ಚಿತ್ರದಲ್ಲಿ ಯಾರೆಲ್ಲಾ ನಟಿಸುತ್ತಿದ್ದಾರೆ ಎಂಬ ವಿಷಯ ಸದ್ಯದಲ್ಲೇ ಹೊರಬೀಳಲಿದೆ.

ಭೂಮಿಕಾ

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

44 mins ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

1 hour ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

3 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

4 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

7 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

7 hours ago