ಕಳೆದ ವರ್ಷ ಬಿಡುಗಡೆಯಾದ ‘ಉಪಾಧ್ಯಕ್ಷ’ ಚಿತ್ರದಲ್ಲಿ ನಾಯಕರಾಗಿದ್ದರು ಚಿಕ್ಕಣ್ಣ. ನಂತರ ಅವರು ಯಾವೊಂದು ಚಿತ್ರದಲ್ಲೂ ನಾಯಕನಾಗಿರಲಿಲ್ಲ. ಒಂದೇ ಚಿತ್ರಕ್ಕೆ ಅವರ ನಾಯಕತ್ವ ಸೀಮಿತವಾಯ್ತಾ? ಎಂಬ ಪ್ರಶ್ನೆ ಬರುವ ಹೊತ್ತಿನಲ್ಲೇ ಅವರು, ಇದೀಗ ಇನ್ನೊಂದು ಚಿತ್ರಕ್ಕೆ ಹೀರೋ ಆಗಿದ್ದಾರೆ. ಹೆಸರು ‘ಲಕ್ಷ್ಮೀ ಪುತ್ರ’.
ಕನ್ನಡ ಚಿತ್ರರಂಗದ ಬಿಡುಗಡೆಯಾಗಿ, ಸೋಲನುಭವಿಸಿದ್ದ ‘ಮಾರ್ಟಿನ್’ ಚಿತ್ರದ ನಿರ್ದೇಶಕ ಎ.ಪಿ. ಅರ್ಜುನ್, ‘ಲಕ್ಷ್ಮೀ ಪುತ್ರ’ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಈಗಾಗಲೇ ಅವರು ‘ಕಿಸ್’ ಚಿತ್ರವನ್ನು ತಮ್ಮ ಸಂಸ್ಥೆಯ ಮೂಲಕ ನಿರ್ಮಿಸಿದ್ದರು. ಅದರ ನಂತರ ವಿರಾಟ್ ಅಭಿನಯದಲ್ಲಿ ‘ಅದ್ಧೂರಿ ಲವ್ವರ್’ ಎಂಬ ಚಿತ್ರವನ್ನು ಘೋಷಿಸಿದ್ದರು. ಈ ಚಿತ್ರ ಬಿಡುಗಡೆಗೆ ಮುನ್ನವೇ, ‘ಲಕ್ಷ್ಮೀ ಪುತ್ರ’ ಚಿತ್ರದ ನಿರ್ಮಾಣಕ್ಕೆ ಕೈಹಾಕಿದ್ದಾರೆ ಅರ್ಜುನ್.
‘ಲಕ್ಷ್ಮೀಪುತ್ರ’ ಚಿತ್ರಕ್ಕೆ ಅರ್ಜುನ್ ಕಥೆ ಹಾಗೂ ಸಾಹಿತ್ಯ ಬರೆದಿದ್ದಾರೆ. ಅರ್ಜುನ್ ಚಿತ್ರಕ್ಕೆ ಕೆಲಸ ಮಾಡಿದ್ದ ವಿಜಯ್ ಎಸ್. ಸ್ವಾಮಿ, ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ ಕೆಲವು ಸಿನಿಮಾಗಳಿಗೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ವಿಜಯ್ಗೆ ನಿರ್ದೇಶಕರಾಗಿ ಇದು ಮೊದಲ ಪ್ರಯತ್ನ.
ಈ ಚಿತ್ರವನ್ನು ಅರ್ಜುನ್ ಅವರ ಪತ್ನಿ ಅನ್ನಪೂರ್ಣ, ಎ.ಪಿ ಅರ್ಜುನ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿವ ಸಂತೋಷ್ ಲಾಡ್, ‘ಲಕ್ಷ್ಮೀಪುತ್ರ’ ಚಿತ್ರವನ್ನು ಅರ್ಪಿಸುತ್ತಿದ್ದಾರೆ. ಗಿರೀಶ್ ಆರ್. ಗೌಡ ಛಾಯಾಗ್ರಹಣ, ಅರ್ಜುನ್ ಜನ್ಯ ಸಂಗೀತ, ದೀಪು ಎಸ್ ಕುಮಾರ್ ಸಂಕಲನ ‘ಲಕ್ಷ್ಮೀಪುತ್ರ’ ಚಿತ್ರಕ್ಕಿದೆ.
ಇದೇ ತಿಂಗಳ 24ಕ್ಕೆ ಚಿತ್ರದ ಮುಹೂರ್ತ ನೆರವೇರಿಸಲು ಚಿತ್ರತಂಡ ಸಜ್ಜಾಗಿದೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…