ಮನರಂಜನೆ

ದರ್ಶನ್‌-ಪ್ರೇಮ್‌ ಸಿನಿಮಾ ಮಾಡ್ತಾರೆ ಡೌಟೇ ಇಲ್ಲ: ರಕ್ಷಿತಾ

ಬೆಂಗಳೂರು: ಯಾವ ಬ್ಯಾನರ್‌ ಆದರೂ ಸರೀನೆ ದರ್ಶನ್‌ ಹಾಗೂ ಪ್ರೇಮ್‌ ಸಿನಿಮಾ ಮಾಡೇ ಮಾಡ್ತಾರೆ ಅದರ ಬಗ್ಗೆ ಡೌಟೇ ಇಲ್ಲ ಎಂದು ಸ್ಯಾಂಡಲ್‌ವುಡ್‌ ಕ್ರೇಜಿಕ್ವೀನ್‌ ರಕ್ಷಿತಾ ಹೇಳಿದ್ದಾರೆ.

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವ ವೇಳೆ ಮಾತನಾಡಿದ ರಕ್ಷಿತಾ, ಇಬ್ಬರ ಮಧ್ಯ ಯಾವುದೇ ಬಿನ್ನಭಿಪ್ರಾಯವಿಲ್ಲ. ಇಬ್ಬರು ಒಟ್ಟಿಗೆ ಮುಂದಿನ ದಿನಗಳಲ್ಲಿ ಸಿನಿಮಾ ಮಾಡ್ತಾರೆ ಎಂದು ಹೇಳಿದರು.

ಇದೇ ವೇಳೆ ಮಗ ರಾಣಾ ಮದುವೆಗೆ ಬರುವಂತೆ ಇನ್ವಿಟೇಷನ್‌ ಕಾರ್ಡ್‌ ಕೊಟ್ಟಿದ್ದೀನಿ. ಮದುವೆಗೆ ಬರ್ತೀನಿ ಅಂತ ಹೇಳಿದ್ದಾನೆ ಎಂದು ತಿಳಿಸಿದರು.

ರೇಣುಕಸ್ವಾಮಿ ಕೊಲೆ ಪ್ರಕರಣದ ಬಗ್ಗೆ ಮಾತನಾಡಿದ ರಕ್ಷಿತಾ, ಅದೊಂದು ಕೆಟ್ಟಗಳಿಗೆ ಅದರಿಂದ ಮೊದಲು ಆಚೆ ಬರಲಿ. ದರ್ಶನ್‌ಗಾಗಿ ವಿಜಯಲಕ್ಷ್ಮೀ ತುಂಬಾ ಕಷ್ಟಪಟ್ಟಿದ್ದಾರೆ ಎಂದು ತಿಳಿಸಿದರು.

ಸೊಶಿಯಲ್‌ ಮೀಡಿಯಾ ಒಳ್ಳೆದಕ್ಕೂ ಇದೆ ಕೆಟ್ಟದಕ್ಕೂ ಇದೆ. ನಾವು ಹೇಗೆ ಬಳಸಿಕೊಳ್ಳುತ್ತೇವೆ ಎಂಬುದರ ಮೇಲೆ ನಿಂತಿರುತ್ತದೆ. ನಾನು ಏನಾದರೂ ಹೇಳಬೇಕು ಅಂದರೆ ಸಾಮಾಜಿಕ ಜಾಲತಾಣ ಬಳಸಿಕೊಳ್ಳುತ್ತೇನೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ಮೂರು ದಿನ ಮಳೆ ಮುನ್ಸೂಚನೆ: ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದಲ್ಲಿ ಮೂರು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.1ರಂದು ರಾಯಚೂರು, ಕೊಪ್ಪಳ,…

13 mins ago

ಯಾಲಕ್ಕೂರು, ಸುತ್ತಲಿನ ಗ್ರಾಮಗಳಿಗೆ ಬಂತು ಸಾರಿಗೆ ಬಸ್ಸು!

ಚಾಮರಾಜನಗರ: ತಾಲ್ಲೂಕಿನ ಯಾಲಕ್ಕೂರು ಹಾಗೂ ಸುತ್ತಮುತ್ತಲಿನ ಆರು ಗ್ರಾಮಗಳಿಗೆ ಸಾರಿಗೆ ಬಸ್ಸೇ ಇಲ್ಲ ಎಂದು ‘ಆಂದೋಲನ ಪತ್ರಿಕೆ’ಯಲ್ಲಿ ಈಚೆಗೆ ಪ್ರಕಟವಾಗಿದ್ದ…

4 hours ago

ಓದುಗರ ಪತ್ರ: ಬಿಸಿಲಲ್ಲೋ ಅಣ್ಣಾ..!

ಬಿಸಿಲಲ್ಲೋ ಅಣ್ಣ ಇದು ಬರಿ ಬಿಸಿಲಲ್ಲೋ ! ಯಾರು ಹೆಸರಿಟ್ಟರೋ? ಇದಕ್ಕೆ ‘ನಿಲ್ಲೋ ಎಲ್ಲೋ’ ನಿಂತಲ್ಲಿ ನಿಲ್ಲಲು, ಕುಂತಲ್ಲಿ ಕೂರಲು…

4 hours ago

ಓದುಗರ ಪತ್ರ: ಸರ್ಕಾರಿ ಶಾಲೆಗಳ ಅಭಿವೃದ್ಧಿ ಸ್ವಾಗತಾರ್ಹ

ರಾಜ್ಯದ ಸರ್ಕಾರಿ ಶಾಲೆಗಳು ಮತ್ತು ಪದವಿಪೂರ್ವ ಕಾಲೇಜುಗಳ ಬಲವರ್ಧನೆಗೆ ಸರ್ಕಾರ ಮುಂದಾಗಿರುವುದು ಅತ್ಯಂತ ಸಂತೋಷ ಮತ್ತು ಹೆಮ್ಮೆಯ ಸಂಗತಿ. ಮೂಲಸೌಕರ್ಯದ…

4 hours ago

ಓದುಗರ ಪತ್ರ: ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗುವ ಇಂಟರ್ನಲ್ಸ್ ಅಂಕಗಳು

ಮಕ್ಕಳು ಬೋರ್ಡ್ ಪರೀಕ್ಷೆಗಳಲ್ಲಿ ಅಂಕಗಳನ್ನು ತೆಗೆಯುವ ಅರ್ಹತೆ ಇದ್ದರೂ, ಇಂಟರ್ನಲ್ಸ್ ಮಾರ್ಕ್ಸ್(ಆಂತರಿಕ ಅಂಕ) ಎಂಬ ಭೂತದಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಇತ್ತೀಚೆಗೆ…

4 hours ago

ನಾವಿಕನೇ ಇಲ್ಲದ ಕೊಡಗು ಪ್ರವಾಸೋದ್ಯಮ ಇಲಾಖೆ..!

ಪುನೀತ್ ಮಡಿಕೇರಿ ಇಲಾಖೆಯಲ್ಲಿ ಸಿಬ್ಬಂದಿ ನೇಮಕಕ್ಕೆ ಪ್ರವಾಸೋದ್ಯಮಿಗಳ ಆಗ್ರಹ  ಮಡಿಕೇರಿ: ಕೊಡಗಿನಲ್ಲಿ ಪ್ರವಾಸೋದ್ಯಮ ಇಲಾಖೆಯನ್ನು ಮುನ್ನಡೆಸಲು ನಾವಿಕನೇ ಇಲ್ಲದಾಗಿದ್ದು, ಕಳೆದ ಒಂದು ವರ್ಷದಿಂದ…

4 hours ago