ಮನರಂಜನೆ

ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ: ರವಿಚಂದ್ರನ್‍

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬಂದು ಮಾತನಾಡಿರುವ ರವಿಚಂದ್ರನ್‍, ‘ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ. ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಒಂದು ಚಿತ್ರ ಯಶಸ್ವಿ 25 ದಿನ ಪ್ರದರ್ಶನವಾಗಿರುವುದು ಖುಷಿಯ ವಿಚಾರ. ಜನ ಚಿತ್ರ ನೋಡುವುದಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ಬರುತ್ತಾರೆ ಅಷ್ಟೇ. ಜನ ಚಿತ್ರ ನೋಡುತ್ತಿಲ್ಲ ಎಂದು ಗೋಳಾಡಿದರೆ ಅವರು ಯಾವತ್ತೂ ಸಿನಿಮಾ ನೋಡುವುದಿಲ್ಲ’ ಎಂದರು ರವಿಚಂದ್ರನ್‍.

ಇತ್ತೀಚಿನ ವರ್ಷಗಳಲ್ಲಿ ನಾವು ಶೀಲ್ಡ್ಗಳನ್ನು ನೋಡುವುದೇ ಮರೆತುಬಿಟ್ಟಿದ್ದೇವೆ ಎಂದಿರುವ ಅವರು, ‘ಈಗ 25 ದಿನಗಳಿಗೇ ಶೀಲ್ಡ್ ಕೊಡುವ ಪರಿಪಾಠ ಶುರುವಾಗಿದೆ. ಆಗ 25 ವಾರಕ್ಕೆ ಇತ್ತು. ಈಗ 25 ದಿನ ನೋಡಿದರೆ ಸಾಕು ಎನ್ನುವಂತಾಗಿದೆ. ಅದರಲ್ಲಿ ತಪ್ಪೇನಿಲ್ಲ. ಆಗ ಚಿತ್ರ ಬಿಡುಗಡೆ ಮಾಡುತ್ತಿದ್ದುದಕ್ಕೂ, ಈಗ ಮಾಡುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಕೆಲವು ಚಿತ್ರಮಂದಿರಗಳಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗುತ್ತಿತ್ತು. ಈಗ ಏಕಕಾಲಕ್ಕೆ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ 25 ದಿನ ಓಡುವುದು ಸಹ ದೊಡ್ಡ ವಿಷಯ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಭುವನಂ ಗಗನಂ’ ಚಿತ್ರದಲ್ಲಿ ಪ್ರಮೋದ್‍ಗೆ ನಾಯಕಿಯಾಗಿ ರಾಚೆಲ್‍ ಡೇವಿಡ್‍ ಮತ್ತು ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಮಿಕ್ಕಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ‘ಸಿದ್ಲಿಂಗು’ ಶ್ರೀಧರ್, ಮುಂತಾದವರು ನಟಿಸಿದ್ದಾರೆ. ಈ ಹಿಂದೆ ‘ರಾಜರು’ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್‍ ಮೂಲಿಮನಿ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅಮೇರಿಕಾದಲ್ಲಿ ಕಾಣೆಯಾಗಿದ್ದ ಕರ್ನಾಟಕ ಮೂಲದ ವಿದ್ಯಾರ್ಥಿ ಮೃತದೇಹ ಪತ್ತೆ

ನ್ಯೂಯಾರ್ಕ್: ಅಮೆರಿಕದ ಕ್ಯಾಲಿಫೋರ್ನಿಯಾದ ಬರ್ಕ್ಲಿಯಲ್ಲಿ ಕಾಣೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ (22) ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಯಾನ್…

2 hours ago

ವಿವಾಹಪೂರ್ವ ದೈಹಿಕ ಸಂಬಂಧದಲ್ಲಿ ಎಚ್ಚರಿಕೆ ಅಗತ್ಯ : ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ವಿವಾಹಪೂರ್ವ ದೈಹಿಕ ಸಂಬಂಧಗಳಲ್ಲಿ ಅತ್ಯಂತ ಜಾಗರೂಕತೆ ವಹಿಸಬೇಕು ಎಂದು ಸುಪ್ರೀಂ ಕೋರ್ಟ್‌ ಎಚ್ಚರಿಕೆ ನೀಡಿದೆ. ಮದುವೆಯ ಸುಳ್ಳು…

3 hours ago

ಎಕ್ಸ್‌ ವೆಬ್‌ಸೈಟ್‌ ಸ್ಥಗಿತ : ಜಾಗತಿಕ ಬಳಕೆದಾರರ ಪರದಾಟ

ಮೈಸೂರು : ಎಲಾನ್ ಮಸ್ಕ್ ಒಡೆತನದ ಸಾಮಾಜಿಕ ಜಾಲತಾಣ ಎಕ್ಸ್ (X, ಹಿಂದಿನ ಟ್ವಿಟರ್) ಇಂದು ಸಂಜೆ (ಫೆಬ್ರವರಿ 16)…

3 hours ago

ರಾಹುಲ್‌ ಗಾಂಧಿ ಪ್ರಶ್ನೆಗೆ ಪ್ರಾಮಾಣಿಕವಾಗಿ ಉತ್ತರಿಸಿ : ಪ್ರಧಾನಿಗೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ರೈತರ ಮೇಲೆ ಪರಿಣಾಮ ಬೀರುವ ಭಾರತ-ಅಮೆರಿಕ ವ್ಯಾಪಾರ…

4 hours ago

ಕಾಡಾನೆಗಳ ದಾಳಿ ; ಗುಡಿಸಲು, ಸೋಲಾರ್ ತಂತಿಬೇಲಿ ನಾಶ

ಮಲ್ಕುಂಡಿ : ಕಾಡಾನೆಗಳ ದಾಳಿಯಿಂದ ಗುಡಿಸಲು ಹಾಗೂ ಸೋಲಾರ್ ತಂತಿ ಬೇಲಿ ನಾಶವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಾಯಶೆಟ್ಟಿಪುರ ಗ್ರಾಮದಲ್ಲಿ…

4 hours ago

ಮೈಸೂರು | ಅಪರಾಧ ನಿಯಂತ್ರಣ ಕುರಿತು ಎಡಿಜಿಪಿ ಸಭೆ

ಮೈಸೂರು : ನಗರದಲ್ಲಿ ಅಪರಾಧ ನಿಯಂತ್ರಣ ಮತ್ತು ಪತ್ತೆ ಸಂಬಂಧ ರಾಜ್ಯ ಪೊಲೀಸ್ ಇಲಾಖೆಯ ಅಪರಾಧ ಮತ್ತು ತಾಂತ್ರಿಕ ಸೇವೆ…

4 hours ago