ಮನರಂಜನೆ

ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ: ರವಿಚಂದ್ರನ್‍

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬಂದು ಮಾತನಾಡಿರುವ ರವಿಚಂದ್ರನ್‍, ‘ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ. ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಒಂದು ಚಿತ್ರ ಯಶಸ್ವಿ 25 ದಿನ ಪ್ರದರ್ಶನವಾಗಿರುವುದು ಖುಷಿಯ ವಿಚಾರ. ಜನ ಚಿತ್ರ ನೋಡುವುದಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ಬರುತ್ತಾರೆ ಅಷ್ಟೇ. ಜನ ಚಿತ್ರ ನೋಡುತ್ತಿಲ್ಲ ಎಂದು ಗೋಳಾಡಿದರೆ ಅವರು ಯಾವತ್ತೂ ಸಿನಿಮಾ ನೋಡುವುದಿಲ್ಲ’ ಎಂದರು ರವಿಚಂದ್ರನ್‍.

ಇತ್ತೀಚಿನ ವರ್ಷಗಳಲ್ಲಿ ನಾವು ಶೀಲ್ಡ್ಗಳನ್ನು ನೋಡುವುದೇ ಮರೆತುಬಿಟ್ಟಿದ್ದೇವೆ ಎಂದಿರುವ ಅವರು, ‘ಈಗ 25 ದಿನಗಳಿಗೇ ಶೀಲ್ಡ್ ಕೊಡುವ ಪರಿಪಾಠ ಶುರುವಾಗಿದೆ. ಆಗ 25 ವಾರಕ್ಕೆ ಇತ್ತು. ಈಗ 25 ದಿನ ನೋಡಿದರೆ ಸಾಕು ಎನ್ನುವಂತಾಗಿದೆ. ಅದರಲ್ಲಿ ತಪ್ಪೇನಿಲ್ಲ. ಆಗ ಚಿತ್ರ ಬಿಡುಗಡೆ ಮಾಡುತ್ತಿದ್ದುದಕ್ಕೂ, ಈಗ ಮಾಡುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಕೆಲವು ಚಿತ್ರಮಂದಿರಗಳಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗುತ್ತಿತ್ತು. ಈಗ ಏಕಕಾಲಕ್ಕೆ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ 25 ದಿನ ಓಡುವುದು ಸಹ ದೊಡ್ಡ ವಿಷಯ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಭುವನಂ ಗಗನಂ’ ಚಿತ್ರದಲ್ಲಿ ಪ್ರಮೋದ್‍ಗೆ ನಾಯಕಿಯಾಗಿ ರಾಚೆಲ್‍ ಡೇವಿಡ್‍ ಮತ್ತು ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಮಿಕ್ಕಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ‘ಸಿದ್ಲಿಂಗು’ ಶ್ರೀಧರ್, ಮುಂತಾದವರು ನಟಿಸಿದ್ದಾರೆ. ಈ ಹಿಂದೆ ‘ರಾಜರು’ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್‍ ಮೂಲಿಮನಿ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬೆಟ್ಟಗಳು ಯಾವತ್ತೂ ಸುಳ್ಳು ಹೇಳುವುದಿಲ್ಲ!

ಪ್ರತ್ಯಕ್ಷ ವರದಿ ಕೆ.ಪಿ.ನಾಗರಾಜ್‌ ಪಬ್ಲಿಕ್‌ ಟಿವಿ ಕೇರಳ ರಾಜ್ಯದ ವಯನಾಡಿನಲ್ಲಿ ಮತ್ತೆ ಬೆಟ್ಟ ಕುಸಿದಿದೆ. ಸುದ್ದಿ ವಾಹಿನಿಗಳು ಇದನ್ನು ‘ಭೂ…

16 hours ago

ಮೈಸೂರು ನೃತ್ಯ ಪರಂಪರೆಯ ತವರೂರು

ಮೈಸೂರಿನ ನೃತ್ಯ ಪರಂಪರೆಯ ವೈಭವಕ್ಕೆ ಪ್ರೇರಕ ಶಕ್ತಿ ಹಲವು ಕೆ.ರಾಮಮೂರ್ತಿ‌ ರಾವ್ ಮೈಸೂರು ಪ್ರಾಚೀನ ಕಾಲದಿಂದಲೂ ಲಲಿತಕಲೆಗಳಿಗೆ ನೆಲೆಯಾಗಿದ್ದ ಸ್ಥಳ.…

17 hours ago

ʼಮಾನವೀಯತೆ ಎಂಬುದು ನನ್ನಂಥ ಜನರಿಗೆ ಸಿಗದ ಸವಲತ್ತುʼ

ವಿಚಾರಣೆ ಇಲ್ಲದೆ ಆರು ವರ್ಷಗಳಿಂದ ಜೈಲುವಾಸದಲ್ಲಿರುವ ಉಮರ್‌ ಖಾಲಿದ್‌ ಪ್ರಥಮ ಸಂದರ್ಶನ ಈಶಾನ್ಯ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ೨೦೨೦ರಲ್ಲಿ ಜೈಲು…

17 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 9 ಗುರುವಾರ

20 hours ago

ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ: ಭಾಗಮಂಡಲ, ತ್ರಿವೇಣಿ ಸಂಗಮದಲ್ಲಿ ನೀರಿನ ಪ್ರಮಾಣ ಏರಿಕೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಬ್ರಹ್ಮಗಿರಿ ತಪ್ಪಲಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವ ಪರಿಣಾಮ ಭಾಗಮಂಡಲ…

1 day ago

ದಟ್ಟವಾದ ತೋಟದಲ್ಲಿ ಅಡಗಿದ್ದ ಓರ್ವ ಲಷ್ಕರ್‌ ಉಗ್ರನ ಹತ್ಯೆ

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಐದು ದಿನಗಳಿಂದ ಭದ್ರತಾ ಪಡೆಗಳ ಕಣ್ಣಿಗೆ ಮಣ್ಣೆರಚಿ ತಪ್ಪಿಸಿಕೊಳ್ಳುತ್ತಿದ್ದ ಶಂಕಿತ ಲಷ್ಕರ್‌ ಎ ತೊಯ್ಬಾ ಉಗ್ರನನ್ನು ಭದ್ರತಾ…

1 day ago