ಮನರಂಜನೆ

ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ: ರವಿಚಂದ್ರನ್‍

ಕಳೆದ ತಿಂಗಳು ಬಿಡುಗಡೆಯಾದ ಪೃಥ್ವಿ ಅಂಬಾರ್‍ ಮತ್ತು ಪ್ರಮೋದ್‍ ಅಭಿನಯದ ‘ಭುವನಂ ಗಗನಂ’ ಚಿತ್ರವು 25 ದಿನಗಳನ್ನು ಪೂರೈಸಿದೆ. ಈ ಸಂಭ್ರಮವನ್ನು ಹಂಚಿಕೊಳ್ಳುವುದಕ್ಕೆ ಚಿತ್ರದ ನಿರ್ಮಾಪಕ ಮುನೇಗೌಡ, ಸಮಾರಂಭ ಆಯೋಜಿಸಿ ಚಿತ್ರಕ್ಕೆ ದುಡಿದ ಕಲಾವಿದರು ಮತ್ತು ತಂತ್ರಜ್ಞರನ್ನು ಗೌರವಿಸಿದ್ದಾರೆ.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಬಂದು ಮಾತನಾಡಿರುವ ರವಿಚಂದ್ರನ್‍, ‘ಕನ್ನಡ ಚಿತ್ರರಂಗದಲ್ಲಿ ಸದ್ಯಕ್ಕೆ ನಗುವಿಲ್ಲ. ಜನ ಚಿತ್ರಮಂದಿರಕ್ಕೆ ಬರುತ್ತಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಒಂದು ಚಿತ್ರ ಯಶಸ್ವಿ 25 ದಿನ ಪ್ರದರ್ಶನವಾಗಿರುವುದು ಖುಷಿಯ ವಿಚಾರ. ಜನ ಚಿತ್ರ ನೋಡುವುದಿಲ್ಲ ಎಂದು ಆರೋಪ ಮಾಡುವುದು ಸರಿಯಲ್ಲ. ಸಿನಿಮಾ ಚೆನ್ನಾಗಿದ್ದರೆ ಜನ ಬರುತ್ತಾರೆ ಅಷ್ಟೇ. ಜನ ಚಿತ್ರ ನೋಡುತ್ತಿಲ್ಲ ಎಂದು ಗೋಳಾಡಿದರೆ ಅವರು ಯಾವತ್ತೂ ಸಿನಿಮಾ ನೋಡುವುದಿಲ್ಲ’ ಎಂದರು ರವಿಚಂದ್ರನ್‍.

ಇತ್ತೀಚಿನ ವರ್ಷಗಳಲ್ಲಿ ನಾವು ಶೀಲ್ಡ್ಗಳನ್ನು ನೋಡುವುದೇ ಮರೆತುಬಿಟ್ಟಿದ್ದೇವೆ ಎಂದಿರುವ ಅವರು, ‘ಈಗ 25 ದಿನಗಳಿಗೇ ಶೀಲ್ಡ್ ಕೊಡುವ ಪರಿಪಾಠ ಶುರುವಾಗಿದೆ. ಆಗ 25 ವಾರಕ್ಕೆ ಇತ್ತು. ಈಗ 25 ದಿನ ನೋಡಿದರೆ ಸಾಕು ಎನ್ನುವಂತಾಗಿದೆ. ಅದರಲ್ಲಿ ತಪ್ಪೇನಿಲ್ಲ. ಆಗ ಚಿತ್ರ ಬಿಡುಗಡೆ ಮಾಡುತ್ತಿದ್ದುದಕ್ಕೂ, ಈಗ ಮಾಡುತ್ತಿರುವುದಕ್ಕೂ ಸಾಕಷ್ಟು ವ್ಯತ್ಯಾಸವಿದೆ. ಆಗ ಕೆಲವು ಚಿತ್ರಮಂದಿರಗಳಲ್ಲಿ ಮಾತ್ರ ಚಿತ್ರ ಬಿಡುಗಡೆಯಾಗುತ್ತಿತ್ತು. ಈಗ ಏಕಕಾಲಕ್ಕೆ ಸಾವಿರಾರು ಚಿತ್ರಮಂದಿರಗಳಲ್ಲಿ ಚಿತ್ರ ಬಿಡುಗಡೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ 25 ದಿನ ಓಡುವುದು ಸಹ ದೊಡ್ಡ ವಿಷಯ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಭುವನಂ ಗಗನಂ’ ಚಿತ್ರದಲ್ಲಿ ಪ್ರಮೋದ್‍ಗೆ ನಾಯಕಿಯಾಗಿ ರಾಚೆಲ್‍ ಡೇವಿಡ್‍ ಮತ್ತು ಪೃಥ್ವಿಗೆ ಜೋಡಿಯಾಗಿ ಅಶ್ವಥಿ ನಟಿಸ್ತಿದ್ದಾರೆ. ಮಿಕ್ಕಂತೆ ಅಚ್ಯುತ್ ಕುಮಾರ್, ಶರತ್ ಲೋಹಿತಾಶ್ವ, ಪ್ರಕಾಶ್ ತುಮ್ಮಿನಾಡು, ‘ಸಿದ್ಲಿಂಗು’ ಶ್ರೀಧರ್, ಮುಂತಾದವರು ನಟಿಸಿದ್ದಾರೆ. ಈ ಹಿಂದೆ ‘ರಾಜರು’ ಚಿತ್ರವನ್ನು ನಿರ್ದೇಶಿಸಿದ್ದ ಗಿರೀಶ್‍ ಮೂಲಿಮನಿ ಈ ಚಿತ್ರದ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಂಡ್ಯದಲ್ಲಿ ಭಿಕ್ಷುಕಿ ನಿಧನ : ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆ; ಊರಿಗೂರೇ ಶಾಕ್!

ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…

8 hours ago

ಜಿಲ್ಲೆಗೊಂದು ಕೈಗಾರಿಕೆ ತರುತ್ತೇನೆ : ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಭರವಸೆ

ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…

10 hours ago

ನಕಲಿ ಔಷಧ ತಯಾರಿಕಾ, ಮಾರಾಟ ಜಾಲ ; ವಿದೇಶದಲ್ಲಿ ಕಿಂಗ್‌ಪಿನ್ ಬಂಧನ

ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…

11 hours ago

ಗೋಣಿಕೊಪ್ಪ | ಮಾರುಕಟ್ಟೆಯಲ್ಲಿ ಗಸ್ತು ತಿರುಗಿದ ಪೊಲೀಸರು ; ಅಕ್ರಮ ಚಟುವಟಿಕೆ ಮೇಲೆ ನಿಗಾ

ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…

11 hours ago

ಪಾರದೀಪ್ ಕರಾವಳಿಯಲ್ಲಿ ಹಡಗು ಮುಳುಗಡೆ ; ಇಬ್ಬರ ರಕ್ಷಣೆ, 22 ಮಂದಿ ನಾಪತ್ತೆ

72,100 ಟನ್‌ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…

13 hours ago

ಐಎಎಸ್‌ ಅಧಿಕಾರಿ ಜ್ಞಾನೇಂದ್ರ ಕುಮಾರ್ ಮನೆ ಬಾಗಿಲು ಒಡೆದು ಇಡಿ ದಾಳಿ

ಬೆಂಗಳೂರು : ಕೆಪಿಎಸ್‌ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…

14 hours ago