ಮನರಂಜನೆ

‘ಸಾಲಗಾರರ ಸಹಕಾರ ಸಂಘ’ ಎಂಬುದೊಂದಿದೆ; ನಿಮಗೆ ಗೊತ್ತಿದೆಯಾ?

ನಮ್ಮಲ್ಲಿ ಹಲವು ಸಂಘಗಳಿವೆ. ಅದರಲ್ಲಿ ‘ಸಾಲಗಾರರ ಸಹಕಾರ ಸಂಘ’ ಎಂಬ ಸಂಘವೊಂದಿದೆ. ಅದರ ಬಗ್ಗೆ ಗೊತ್ತಿದೆಯಾ? ಗೊತ್ತಿಲ್ಲದಿದ್ದರೆ ಇಲ್ಲಿ ಕೇಳಿ. ಸಾಲಗಾರರ ಕುರಿತು ವಿಕ್ರಮ್‍ ಧನಂಜಯ್‍ ಕಥೆ, ಚಿತ್ರಕಥೆ, ಸಂಭಾಷಣೆ ಮತ್ತು ಸಾಹಿತ್ಯ ಬರೆದು ‘ಸಾಲಗಾರರ ಸಹಕಾರ ಸಂಘ’ ಎಂಬ ಚಿತ್ರವೊಂದನ್ನು ನಿರ್ದೇಶನ ಮಾಡಿದ್ದಾರೆ. ಸಾಲ ಕೊಡಿಸುವ ಕೆಂಪೇಗೌಡ, ದೊಡ್ಡ ಸಾಲಗಾರನಾಗಿ ‘ಜಾಲಿ ಜಾಲಿ’ ಜಾಕ್ ಮತ್ತು ಸಾಲ ಮಾಡಿ ವ್ಯಥೆ ಪಡುವ ‘ಕಾಮಿಡಿ ಕಿಲಾಡಿಗಳು’ ಲೋಕೇಶ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆ.

’ಸಾಲಗಾರರ ಸಹಕಾರ ಸಂಘ’ ಚಿತ್ರಕ್ಕೆ ಇತ್ತೀಚೆಗೆ ಶರಣ್ ಹಾಡಿರುವ ಹಾಡೊಂದು ಬಿಡುಗಡೆಯಾಗಿದೆ. ಈ ಹಾಡಿಗೆ ಎಂ.ಎಸ್‍. ತ್ಯಾಗರಾಜ್‍ ಸಾಹಿತ್ಯ ಬರೆದು ಸಂಗೀತ ಸಂಯೋಜಿಸಿದ್ದಾರೆ. ಈ ಹಾಡನ್ನು ಜ್ಯೋತಿಷಿ ವಿದ್ವಾನ್ ಡಾ.ಶ್ರೀಧರ್ ಗುರೂಜಿ ಮತ್ತು ನಟಿ ಬೃಂದಾ ಆಚಾರ್ಯ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.

SLNLS ಎಂಟರ್ಟೈನರ್ಸ್ ಹಾಗೂ ಹವಿಶ್ ಸಿನಿ ಕ್ರಿಯೇಶನ್ಸ್ ಅಡಿಯಲ್ಲಿ ಕುಮರೇಶ್ ಎ ಮತ್ತು ಸುನೀಲ್‌ಕುಮಾರ್ (ಪಟ್ಟಣಗೆರೆ) ಜಂಟಿಯಾಗಿ ನಿರ್ಮಾಣ ಮಾಡಿದ್ದಾರೆ. ಈ ಹಿಂದೆ, ’ಪಂಟ್ರು’ ಮತ್ತು ’ಗೆಳೆಯ’ ಚಿತ್ರಗಳನ್ನು ನಿರ್ದೇಶಿಸಿರುವ ವಿಕ್ರಮ್ ಧನಂಜಯ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.

ಇದನ್ನೂ ಓದಿ:-25 ವರ್ಷಗಳ ನಂತರ ನ.7ರಂದು ‘ಯಜಮಾನ’ ಮರು ಬಿಡುಗಡೆ

ಈ ಸಂದರ್ಭದಲ್ಲಿ ಮಾತನಾಡಿದ ನಿರ್ದೇಶಕರು, ‘ಪ್ರಾರಂಭದಲ್ಲಿ ಟೈಟಲ್ ನೋಂದಣಿ ಮಾಡಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದಾಗ ಎಲ್ಲಾ ತರಹದ ಪ್ರತಿಕ್ರಿಯೆಗಳು ಬಂದವು. ಇದನ್ನೇ ಬಂಡವಾಳವಾಗಿಸಿಕೊಂಡು ಒನ್ ಲೈನ್ ಎಳೆ ಸಿದ್ದಪಡಿಸಿಕೊಂಡೆ. ನಾಲ್ಕು ನಿರುದ್ಯೋಗಿ ಯುವಕರು ಕಾರಣ ಇಲ್ಲದೆ ಸಾಲ ಮಾಡುತ್ತಾರೆ. ನಂತರ ಬಡ್ಡಿ ಕಟ್ಟಲು ಮತ್ತೆ ಸಾಲದ ಹಿಂದೆ ಹೋಗುತ್ತಾರೆ. ಕೊನೆಗೆ ಅಸಹಾಯಕ ಪರಿಸ್ಥಿತಿ ಬಂದಾಗ ನಮ್ಮಂತೆ ಸಾಲ ಮಾಡಿರುವವರನ್ನು ಒಗ್ಗೂಡಿಸಿ ಸಂಘ ಶುರು ಮಾಡಿ ಸರ್ಕಾರಕ್ಕೆ ಒಂದಷ್ಟು ಬೇಡಿಕೆ ಇಡುತ್ತಾರೆ. ಅದು ಏನು? ಸರ್ಕಾರವು ಯಾವ ರೀತಿ ಸ್ಪಂದಿಸುತ್ತದೆ? ಎಂಬುದೇ ಚಿತ್ರದ ಕಥೆ. ಎಲ್ಲಾ ಸನ್ನಿವೇಶಗಳು ಹಾಸ್ಯದಿಂದ ಕೂಡಿದೆ. ಶರಣ್ ಅವರೊಂದಿಗೆ ಒಂದು ಹಂತದ ಮಾತುಕತೆ ನಡೆದಿದೆ. ಅವರು ಒಪ್ಪಿದರೆ, ಒಂದು ಹಾಡನ್ನು ಶೂಟ್ ಮಾಡಲಾಗುವುದು’ ಎಂದರು.

‘ಸಾಲಗಾರರ ಸಹಕಾರ ಸಂಘ’ ಚಿತ್ರದಲ್ಲಿ ರಂಗಾಯಣ ರಘು, ಹೊನ್ನವಳ್ಳಿ ಕೃಷ್ಣ, ಲಕ್ಷೀ ಸಿದ್ದಯ್ಯ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಅನಿರುದ್ದ್ ಛಾಯಾಗ್ರಹಣವಿದ್ದು, ಬೆಂಗಳೂರು, ತೀರ್ಥಹಳ್ಳಿ, ಚಿಕ್ಕಮಗಳೂರು ಮಂತಾದ ಕಡೆ 45 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಹಣ ದ್ವಿಗುಣಗೊಳಿಸುವುದಾಗಿ ೨೮ ಲಕ್ಷ ರೂ. ವಂಚನೆ; ದೂರು ದಾಖಲು

ಕೊಳ್ಳೇಗಾಲ: ಹಣ ದ್ವಿಗುಣಗೊಳಿಸಿಕೊಡುವುದಾಗಿ ಆಮಿಷ ಒಡ್ಡಿ, ಒಟ್ಟು ೨೮.೮೮ ಲಕ್ಷ ರೂ.ಗಳನ್ನು ವಂಚಿಸಿರುವ ಬಗ್ಗೆ ಪಟ್ಟಣ ಪೊಲೀಸ್ ಠಾಣೆಯಲ್ಲಿ ಮಮತಾ…

5 hours ago

ಅಂಬಳೆ: ಚಾಮುಂಡೇಶ್ವರಿ ದೇಗುಲದಲ್ಲಿ ಕಳ್ಳತನ

ಯಳಂದೂರು:ತಾಲ್ಲೂಕಿನ ಅಂಬಳೆ ಗ್ರಾಮದಲ್ಲಿರುವ ಸುವರ್ಣಾವತಿ ನದಿ ದಡಲ್ಲಿರುವ ಐತಿಹಾಸಿಕ ಚಾಮುಂಡೇಶ್ವರಿ ದೇಗುದಲ್ಲಿ ಗುರುವಾರ ರಾತ್ರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂ.…

5 hours ago

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಬೆನ್ನಲ್ಲೇ ಪೈಲಟ್‌ಗಳ ರಜಾ ನಿಯಮ ಸಡಿಲಿಸಿದ ಡಿಜಿಸಿಎ

ನವದೆಹಲಿ: ದೇಶಾದ್ಯಂತ ಇಂಡಿಗೋ ವಿಮಾನದ ಹಾರಾಟದಲ್ಲಿ ಭಾರೀ ವ್ಯತ್ಯಯ ಉಂಟಾದ ಬೆನ್ನಲ್ಲೇ ಕೇಂದ್ರ ನಾಗರಿಕ ವಿಮಾನಯಾನ ನಿರ್ದೇಶನಾಲಯ ಪೈಲಟ್‌ಗಳ ರಜಾ…

6 hours ago

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ: ಸತೀಶ್‌ ಜಾರಕಿಹೊಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…

7 hours ago

ಶಾಲಾ ಪಠ್ಯದಲ್ಲಿ ಭಗವದ್ಗೀತೆ ಬೋಧನೆ: ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ಗೆ ಎಚ್‌ಡಿಕೆ ಪತ್ರ

ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…

9 hours ago

ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ: ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು

ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್‌ ಶಿವಕುಮಾರ್‌ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…

9 hours ago