ಮನರಂಜನೆ

ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳುಮಾಡಿಕೊಂಡ್ರು : ದರ್ಶನ್‌ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ ರಮ್ಯಾ

ಬೆಂಗಳೂರು : ನಟ ದರ್ಶನ್‌ ಅವರು ಲೈಟ್ಬಾಯ್‌ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದರೆ ಜೀವನ ಹಾಳುಮಾಡಿಕೊಂಡ್ರು ಎಂದು ನಟಿ ರಮ್ಯಾ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್‌ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ ಅವರು, ನಾನು ಹೇಳಬೇಕಾದ್ದನ್ನೆಲ್ಲ ಹೇಳಿದ್ದೀನಿ. ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದವರಾಗಿದ್ದರೂ ಕಷ್ಟಪಟ್ಟು ಈ ಹಂತಕ್ಕೆ ಬಂದಿದ್ರು. ಆದ್ರೆ ಜೀವನ ಹಾಳು ಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳಿಯಬಹುದಿತ್ತು ಎಂದರಲ್ಲದೇ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಹೇಳಿದರು.

ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ.

ಸಿನಿಮಾ ಗೆಲ್ಲಲೂ ಸ್ಟಾರ್‌ ನಟರೇ ಬೇಕಿಲ್ಲಿ
ದುಬಾರಿ ಬಜೆಟ್, ಸ್ಟಾರ್ ನಟರು ಇಲ್ಲದೇ ಸಿನಿಮಾ ಗೆಲ್ಲಿಸಬಹುದು ಎನ್ನುವುದಕ್ಕೆ ಸು ಫ್ರಂ ಸೋ ಸಿನಿಮಾ ಸಾಕ್ಷಿ ಎಂದಿದ್ದಾರೆ ನಟಿ ರಮ್ಯಾ. ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂದು ಕೇಳಲಾದ ಪ್ರಶ್ನೆಗೆ ರಮ್ಯಾ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ? ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಅಂದಿದ್ದಾರೆ ರಮ್ಯಾ.

ಆಂದೋಲನ ಡೆಸ್ಕ್

Recent Posts

ರಾಮಮಂದಿರದಲ್ಲಿ ಅಕ್ರಮ; ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ

ಉತ್ತರ ಪ್ರದೇಶದ ಅಯೋಧ್ಯಾ ರಾಮಮಂದಿರದಲ್ಲಿ ಕಾಣಿಕೆ ಹಣ ಹಾಗೂ ದೇಣಿಗೆಯನ್ನು ದುರ್ಬಳಕೆ ಮಾಡಿರುವುದು ಅನೂಹ್ಯ ಪ್ರಕರಣ. ಇದರಿಂದ ಕೋಟ್ಯಂತರ ಜನರ…

1 hour ago

ರಾಜ್ಯದಲ್ಲಿ ಭಾರತೀಯ ಜನತಾ ಪಕ್ಷಕ್ಕೆ ಮೇಜರ್ ಸರ್ಜರಿಗೆ ಕೇಂದ್ರ ವರಿಷ್ಠರ ಚಿಂತನೆ

ಬೆಂಗಳೂರು ಡೈರಿ  ಆರ್.ಟಿ.ವಿಠ್ಠಲಮೂರ್ತಿ  ಹಲವು ಲಿಂಗಾಯತ ಮಠಗಳಿಗೆ ಮುಖ್ಯಮಂತ್ರಿ ಡಿಕೆಶಿ ಅವರು ಆಪ್ಯಾಯಮಾನ ಕರ್ನಾಟಕದಲ್ಲಿ ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು…

1 hour ago

ಅವನತಿಯತ್ತ ಸಾಗಿದ ಅಗಸನ ಕೆರೆಯ ಪುನಶ್ಚೇತನ

ಭೇರ್ಯ ಮಹೇಶ್ ಕೆ.ಆರ್.ನಗರ: ಧರ್ಮಸ್ಥಳ ಸಂಸ್ಥೆಯಿಂದ ಕೆರೆ ಅಭಿವೃದ್ಧಿ; ಗ್ರಾಮಸ್ಥರು, ರೈತರಿಂದಲೂ ಸಹಕಾರ  ಕೆ.ಆರ್.ನಗರ: ಹೂಳು ತುಂಬಿ ಅವನತಿಯ ಹಾದಿ…

1 hour ago

2 ವರ್ಷಗಳಿಂದ ಕಬ್ಬು ಅರೆಯದ ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ

ಆನಂದ್ ಹೊಸೂರು ಕಬ್ಬಿಗೆ ಕಾರ್ಖಾನೆಗಳಿಂದ ಬೇಡಿಕೆಯಿದ್ದರೂ ರೈತರಿಗೆ ದುಬಾರಿ ಸಾಗಣೆ ವೆಚ್ಚ ಭರಿಸುವ ಅನಿವಾರ್ಯತೆ  ಹೊಸೂರು: ಮಾಜಿ ಶಾಸಕ ದಿವಂಗತ…

1 hour ago

ಸಾಹಿತ್ಯದಲ್ಲೂ ಹೋರಾಟದ ಛಾಪು ಮೂಡಿಸಿದ ಮುಳ್ಳೂರು: ಎಸ್.ಜಿ.ಸಿದ್ದರಾಮಯ್ಯ ಬಣ್ಣನೆ

ಮುಳ್ಳೂರು ನಾಗರಾಜ ಕಾವ್ಯ ಪ್ರಶಸ್ತಿ, ರಾಜಶೇಖರ ಕೋಟಿ ನೆನಪು ಕಾರ್ಯಕ್ರಮ ಪತ್ರಿಕಾರಂಗ ಸೇರಿ ಬಹುತೇಕ ಕ್ಷೇತ್ರಗಳಿಗೆ ಕೋಟಿ ಕೊಡುಗೆ:ಮಹದೇವಸ್ವಾಮಿ ಮೈಸೂರು:…

1 hour ago