ಮನರಂಜನೆ

ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳುಮಾಡಿಕೊಂಡ್ರು : ದರ್ಶನ್‌ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ ರಮ್ಯಾ

ಬೆಂಗಳೂರು : ನಟ ದರ್ಶನ್‌ ಅವರು ಲೈಟ್ಬಾಯ್‌ ಆಗಿ ಬಂದ್ರೂ ಕಷ್ಟಪಟ್ಟು ಮೇಲೆ ಬಂದಿದ್ರು. ಆದರೆ ಜೀವನ ಹಾಳುಮಾಡಿಕೊಂಡ್ರು ಎಂದು ನಟಿ ರಮ್ಯಾ ಕೊಲೆ ಆರೋಪದ ಮೇಲೆ ಜೈಲು ಸೇರಿರುವ ದರ್ಶನ್‌ ಬಗ್ಗೆ ಸಾಫ್ಟ್‌ ಕಾರ್ನರ್‌ ತೋರಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ರಮ್ಯಾ ಅವರು, ನಾನು ಹೇಳಬೇಕಾದ್ದನ್ನೆಲ್ಲ ಹೇಳಿದ್ದೀನಿ. ದೂರು ಕೊಟ್ಮೇಲೆ ಬ್ಯಾಡ್ ಕಾಮೆಂಟ್ಸ್ ಬರ್ತಿಲ್ಲ. ಎಷ್ಟೋ ಜನ ಪೋನ್ ಸ್ವಿಚ್ ಆಫ್ ಮಾಡಿ ಮನೆ ಬಿಟ್ಟಿದ್ದಾರೆ. ಇನ್ನಷ್ಟು ಮಂದಿ ಅರೆಸ್ಟ್ ಆಗಿದ್ದಾರೆ. ದರ್ಶನ್ ಲೈಟ್ ಬಾಯ್ ಆಗಿ ಚಿತ್ರರಂಗಕ್ಕೆ ಬಂದವರಾಗಿದ್ದರೂ ಕಷ್ಟಪಟ್ಟು ಈ ಹಂತಕ್ಕೆ ಬಂದಿದ್ರು. ಆದ್ರೆ ಜೀವನ ಹಾಳು ಮಾಡಿಕೊಂಡ್ರು. ಹೀಗೆ ಆಗದೇ ಇದ್ದಿದ್ದರೇ ಇನ್ನಷ್ಟು ದೊಡ್ಡ ಮಟ್ಟಕ್ಕೆ ಬೆಳಿಯಬಹುದಿತ್ತು ಎಂದರಲ್ಲದೇ ಸುಪ್ರೀಂ ಕೋರ್ಟ್ ತೀರ್ಪು ಸ್ವಾಗತಿಸುವುದಾಗಿ ಹೇಳಿದರು.

ಸುಪ್ರೀಂ ತೀರ್ಪಿನಿಂದ ರೇಣುಕಾಸ್ವಾಮಿ ಹೆಂಡತಿ ಮಗುವಿಗೆ ನ್ಯಾಯ ಸಿಕ್ಕಿದೆ. ಈ ಬೆಳವಣಿಗೆಯಿಂದ ಹೆಣ್ಣುಮಕ್ಕಳಿಗೆ ಧೈರ್ಯ ಬಂದಿದೆ. ಎಲ್ಲ ಒಳ್ಳೆಯದಾಗಿದೆ ಅಂದುಕೊಳ್ತೀನಿ ಅಂತ ಹೇಳಿದ್ದಾರೆ.

ಸಿನಿಮಾ ಗೆಲ್ಲಲೂ ಸ್ಟಾರ್‌ ನಟರೇ ಬೇಕಿಲ್ಲಿ
ದುಬಾರಿ ಬಜೆಟ್, ಸ್ಟಾರ್ ನಟರು ಇಲ್ಲದೇ ಸಿನಿಮಾ ಗೆಲ್ಲಿಸಬಹುದು ಎನ್ನುವುದಕ್ಕೆ ಸು ಫ್ರಂ ಸೋ ಸಿನಿಮಾ ಸಾಕ್ಷಿ ಎಂದಿದ್ದಾರೆ ನಟಿ ರಮ್ಯಾ. ದರ್ಶನ್ ರೀತಿಯ ಸ್ಟಾರ್ ನಟರು ಜೈಲಿಗೆ ಹೋದಾಗ, ಸಿನಿಮಾ ರಂಗ ಪಾತಾಳಕ್ಕೆ ಬೀಳುತ್ತದೆ. ಸ್ಟಾರ್ ನಟರು ಸಿನಿಮಾ ಮಾಡದೇ ಇದ್ದರೆ ಸಿನಿಮಾ ರಂಗಕ್ಕೆ ನಷ್ಟಕ್ಕೆ ತಿರುಗುತ್ತಾ? ಎಂದು ಕೇಳಲಾದ ಪ್ರಶ್ನೆಗೆ ರಮ್ಯಾ ಖಡಕ್ ಆಗಿಯೇ ಉತ್ತರ ನೀಡಿದ್ದಾರೆ. ಸು ಫ್ರಂ ಸೋನಲ್ಲಿ ಯಾವ ಸ್ಟಾರ್ ನಟರು ಇದ್ದಾರೆ? ಕಂಟೆಂಟ್ ಚೆನ್ನಾಗಿದ್ದರೆ ಸಿನಿಮಾ ಗೆಲ್ಲುತ್ತದೆ ಅಂದಿದ್ದಾರೆ ರಮ್ಯಾ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

3 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

3 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

3 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

3 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

3 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

3 hours ago