ಮನರಂಜನೆ

ಜೂನ್‍.27ರಂದು ಬಿಡುಗಡೆ ಆಗಲಿದೆ ‘ತಿಮ್ಮನ ಮೊಟ್ಟೆಗಳು’

ಈ ಹಿಂದೆ ‘ಹೊಂಬಣ್ಣ’ ಮತ್ತು ‘ಎಂಥಾ ಕಥೆ ಮಾರಾಯ’ ಎಂಬ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ರಕ್ಷಿತ್‍ ತೀರ್ಥಹಳ್ಳಿ, ತಮ್ಮ ಮೂರನೆಯ ಚಿತ್ರದೊಂದಿಗೆ ವಾಪಸ್ಸಾಗಿದ್ದಾರೆ. ಈ ಬಾರಿ ಸಹ ಅವರು ತಮ್ಮದೇ ಕಥೆಗೆ ದೃಶ್ಯರೂಪ ನೀಡಿದ್ದಾರೆ. ಅದೇ ‘ತಿಮ್ಮನ ಮೊಟ್ಟೆಗಳು’.

‘ತಿಮ್ಮನ ಮೊಟ್ಟೆಗಳು’ ಚಿತ್ರವು ಈಗಾಗಲೇ ಹಲವು ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಪ್ರದರ್ಶನವಾಗುತ್ತಿದ್ದು, ರಾಜ್ಯದಲ್ಲಿ ಬಿಡುಗಡೆ ಆಗುವುದಕ್ಕೆ ಸಜ್ಜಾಗಿದೆ. ಚಿತ್ರವು ಜೂನ್‍.27ರಂದು ಬಿಡುಗಡೆ ಆಗುತ್ತಿದ್ದು, ಅದಕ್ಕೂ ಮೊದಲು ಇತ್ತೀಚೆಗೆ ಟ್ರೇಲರ್‍ ಬಿಡುಗಡೆ ಆಗಿದೆ. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದ್ದಾರೆ.

ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶೇಷಾದ್ರಿ, ‘ನಾನು ಈ ಚಿತ್ರವನ್ನು ಕೊಲ್ಕತ್ತಾ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ನೋಡಿದ್ದೇನೆ. ಈಗಿನ ಪರಿಸ್ಥಿತಿಗೆ ತಕ್ಕಂತೆ ಕಥಾವಸ್ತುವನ್ನು ನಿರ್ದೇಶಕರು ಆಯ್ಕೆ ಮಾಡಿಕೊಂಡಿದ್ದಾರೆ‌. ಚಿತ್ರ ಚೆನ್ನಾಗಿ ಮೂಡಿಬಂದಿದೆ. ಈಗ ದಿನಕ್ಕೊಂದು ಚಿತ್ರದಂತೆ ವರ್ಷಕ್ಕೆ 360 ಚಿತ್ರಗಳು ಬಿಡುಗಡೆಯಾಗುತ್ತಿದೆ. ಆದರಿಂದ ಚಿತ್ರಮಂದಿರಕ್ಕೆ ಜನರು ಬರುವ ಸಂಖ್ಯೆ ಕಡಿಮೆಯಾಗಿದೆ. ಚಿತ್ರ ಬಿಡುಗಡೆ ಸಂಖ್ಯೆ ಕಡಿಮೆಯಾಗಬೇಕು. ಆಗ ಇಂತಹ ಸದಭಿರುಚಿಯ ಚಿತ್ರಗಳನ್ನು ನೋಡಲು ಜನರು ಚಿತ್ರಮಂದಿರಗಳಿಗೆ ಬರುತ್ತಾರೆ’ ಎಂದರು.

ಚಿತ್ರದ ಕುರಿತು ಮಾತನಾಡುವ ರಕ್ಷಿತ್‍ ತೀರ್ಥಹಳ್ಳಿ, ‘ಈ ಚಿತ್ರವು ನಾನು ಬರೆದಿರುವ ‘ಕಾಡಿನ ನೆಂಟರು’ ಕಥಾಸಂಕಲನದಲ್ಲಿರುವ ‘ತಿಮ್ಮನ ಮೊಟ್ಟೆಗಳು’ ಕಥೆಯನ್ನು ಆಧರಿಸಿದೆ. ಪಶ್ಚಿಮ ಘಟ್ಟದ ಕಾಡುಗಳಲ್ಲಿ ಹೆಚ್ಚು ಕಾಣಿಸಿಕೊಳ್ಳುವ ಕಾಳಿಂಗ ಸರ್ಪದ ಕುರಿತು ಚಿತ್ರ ಸಾಗುತ್ತದೆ. ಮನುಷ್ಯ ಮತ್ತು ಪ್ರಾಣಿಗಳ ನಡುವಿನ ಬಾಂಧವ್ಯದ ಕುರಿತಾದ ಕಥೆ ಇದಾಗಿದ್ದು, ಅಮೇರಿಕಾದ ಡಲ್ಲಾಸ್‍ ನಗರದಲ್ಲಿ ಇತ್ತೀಚೆಗೆ ಚಿತ್ರದ ಪ್ರಿಮೀಯರ್ ನಡೆದಿದೆ. ಅಲ್ಲಿನ ಜನರು ಚಿತ್ರವನ್ನು ಬಹಳ ಇಷ್ಟಪಟ್ಟಿದ್ದಾರೆ. ಪ್ರಸಿದ್ದ ಅಂತರರಾಷ್ಟ್ರೀಯ ಚಿತ್ರೋತ್ಸವಗಳಲ್ಲೂ ಪ್ರದರ್ಶನವಾಗಿರುವ ನಮ್ಮ ಚಿತ್ರ ಜೂನ್ 27 ರಂದು ಬಿಡುಗಡೆಯಾಗುತ್ತಿದೆ’ ಎಂದರು.

ಚಿತ್ರದಲ್ಲಿ ಸುಚೇಂದ್ರ ಪ್ರಸಾದ್‍ ಒಂದು ಮುಖ್ಯ ಪಾತ್ರ ನಿರ್ವಹಿಸಿದ್ದು, ‘ಪ್ರಕೃತಿ ಮತ್ತು ಮನುಷ್ಯನ ನಡುವಿನ ಸೂಕ್ಷ್ಮ ಸಂವೇದನೆಗಳು ಈ ಚಿತ್ರದಲ್ಲಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಎಲ್ಲರೂ ನೋಡಿ ಪ್ರೋತ್ಸಾಹಿಸಿ ಎಂದರು.

ಶ್ರೀಕೃಷ್ಣ ಪ್ರೊಡಕ್ಷನ್ಸ್ ಬ್ಯಾನರ್ ಅಡಿಯಲ್ಲಿ ಆದರ್ಶ ಅಯ್ಯಂಗಾರ್ ನಿರ್ಮಿಸಿರುವ ಈ ಚಿತ್ರದಲ್ಲಿ ಕೇಶವ್, ಆಶಿಕಾ ಸೋಮಶೇಖರ್, ಪ್ರಗತಿ ಪ್ರಭು, ರಾಘು ರಾಮನಕೊಪ್ಪ ಮುಂತಾದವರು ನಟಿಸಿದ್ದಾರೆ. ಚಿತ್ರಕ್ಕೆ ಹೇಮಂತ್‍ ಜೋಯಿಸ್‍ ಸಂಗೀತ ಸಂಯೋಜಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು: ಅಲಗುಮೂಲೆ ಗ್ರಾಮದಲ್ಲಿ ವಿಜೃಂಭಣೆಯಿಂದ ನಡೆದ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಲಗುಮೂಲೆ ಗ್ರಾಮದಲ್ಲಿ 3 ವರ್ಷಕ್ಕೊಮ್ಮೆ ನಡೆಯುವ ಶ್ರೀ ಬಸವೇಶ್ವರ…

2 hours ago

ನಂಜನಗೂಡು: 6.2 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ನಂಜನಗೂಡು: ಗ್ಯಾರಂಟಿ ಯೋಜನೆಗಳ ಜೊತೆ ಅಭಿವೃದ್ಧಿ ಕೆಲಸಗಳಿಗೂ ಆದ್ಯತೆ ನೀಡಲಾಗುತ್ತಿದ್ದು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು…

2 hours ago

ಎಸ್‌ಎಸ್‌ಎಲ್‌ಸಿ 2ನೇ ಪರೀಕ್ಷೆಗೆ ಸರ್ಕಾರದಿಂದಲೇ ಶುಲ್ಕ ಪಾವತಿ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಅನುತ್ತೀರ್ಣರಾಗಿರುವ ಎಲ್ಲಾ ವಿದ್ಯಾರ್ಥಿಗಳನ್ನು ಮುಂಬರುವ ಪರೀಕ್ಷೆ-2ಕ್ಕೆ ಕಡ್ಡಾಯವಾಗಿ ನೋಂದಾಯಿಸಿ, ಅವರನ್ನು ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಗತ್ಯ…

3 hours ago

ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಸಿಎಂ ಆಗೋದು ಫಿಕ್ಸ್‌: ಇಕ್ಬಾಲ್‌ ಹುಸೇನ್‌

ರಾಮನಗರ: ಮೇ.15ಕ್ಕೆ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗುವುದು ಫಿಕ್ಸ್‌ ಎಂದು ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು,…

4 hours ago

ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರ ಸಹೋದರ ನಿಧನ: ಸಚಿವ ಚಲುವರಾಯಸ್ವಾಮಿ ಸಂತಾಪ

ಮಂಡ್ಯ: ಮಳವಳ್ಳಿ ಕ್ಷೇತ್ರದ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರ ಸಹೋದರ ಪಿ.ಎಂ. ಪರಶಿವಮೂರ್ತಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಪರಶಿವಮೂರ್ತಿ ಅವರ…

4 hours ago

ದಾವೂದ್‌ ಆಪ್ತ, ಡ್ರಗ್ಸ್‌ ಕಿಂಗ್‌ಪಿನ್‌ ಸಲೀಂ ಡೋಲಾ ಟರ್ಕಿಯಿಂದ ಭಾರತಕ್ಕೆ ಗಡಿಪಾರು

ನವದೆಹಲಿ: ಭಾರತದ ಮೋಸ್ಟ್ ವಾಂಟೆಡ್ ಭೂಗತಪಾತಕಿ ಹಾಗೂ ಮುಂಬೈ ಸರಣಿ ಬಾಂಬ್ ಸ್ಫೋಟದ ಪ್ರಮುಖ ರೂವಾರಿ ದಾವುದ್ ಇಬ್ರಾಹಿಂನ ಆಪ್ತ…

4 hours ago