ಕನ್ನಡದಲ್ಲಿ ಅವಿನಾಶ್ ಎಂದರೆ ಮೊದಲಿಗೆ ನೆನಪಿಗೆ ಬರುವುದು ಹಿರಿಯ ನಟ ಯಳಂದೂರು ಅವಿನಾಶ್. ಕಳೆದ ನಾಲ್ಕು ದಶಕಗಳಿಂದ ನೂರಾರು ಚಿತ್ರಗಳಲ್ಲಿ ನಟಿಸಿರುವ ಅವಿನಾಶ್, ಕನ್ನಡದ ಬೇಡಿಕೆಯ ನಟರಲ್ಲೊಬ್ಬರು. ಈಗ ಇನ್ನೊಬ್ಬ ಅವಿನಾಶ್, ಕನ್ನಡಕ್ಕಿಂತ ಬೇರೆ ಭಾಷೆಯ ಚಿತ್ರಗಳಲ್ಲೇ ಹೆಚ್ಚು ನಟಿಸುತ್ತಿದ್ದಾರೆ.
ಈ ಅವಿನಾಶ್, ‘ಕೆಜಿಎಫ್’ ಚಿತ್ರದಲ್ಲಿ ಆ್ಯಂಡ್ರೂಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಚಿತ್ರದಲ್ಲೇ ತಮ್ಮ ಪಾತ್ರದಿಂದ ಗಮನ ಸೆಳೆದ ಅವಿನಾಶ್, ‘ಕೆಜಿಎಫ್’ ನಂತರ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ನಟಿಸಿರುವ ಅವಿನಾಶ್ ನಟಿಸಿದರು. ಇದೀಗ ಅವರು ಪರಭಾಷೆಯ ಚಿತ್ರಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ.
ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’, ಚಿರಂಜೀವಿ ಅಭಿನಯದ ‘ವಾಲ್ಟರ್ ವೀರಯ್ಯ’, ತಮಿಳಿನಲ್ಲಿ ರಜನಿಕಾಂತ್ ಅಭಿನಯದ ‘ವೆಟ್ಟಯಾನ್’, ಸೂರ್ಯ ಅಭಿನಯದ ‘ಕಂಗುವಾ, ಆರ್ಯ ಅಭಿನಯದ ‘ಕಾದರ್ ಭಾಷ ಎಂದ್ರ ಮುತ್ತುರಾಮಲಿಂಗಂ’, ಮಲಯಾಳಂನಲ್ಲಿ ಸುರೇಶ್ ಗೋಪಿ ಅಭಿನಯದ ‘ಒರು ಪೆರುಂ ಕಲಿಯಟ್ಟಂ’, ಹಿಂದಿಯ ‘ಬೇಬಿ ಜಾನ್’ ಚಿತ್ರಗಳಲ್ಲಿ ಅವಿನಾಶ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ತಮಗೆ ಚಿತ್ರರಂಗದಲ್ಲಿ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವ ಆಸೆ ಎನ್ನುವ ಅವಿನಾಶ್, ‘ಒಳ್ಳೆಯ ವಿಲನ್ ಪಾತ್ರಗಳು, ಅರ್ಥಪೂರ್ಣ ಪೋಷಕ ಪಾತ್ರಗಳಿಗೆ ಎದುರು ನೋಡುತ್ತಿದ್ದೇನೆ. ಅಭಿನಯಕ್ಕೆ ಪ್ರಾಮುಖ್ಯತೆ ಇರಬೇಕು. ‘ಗುರುದೇವ್ ಹೊಯ್ಸಳ’ ಚಿತ್ರದಲ್ಲೊಂದು ಒಳ್ಳೆಯ ಪಾತ್ರ ಸಿಕ್ಕಿತ್ತು. ‘ಕಂಗುವ’ ಚಿತ್ರದಲ್ಲಿ ಸೂರ್ಯ ತಂದೆಯಾಗಿ ಅಭಿನಯಿಸಿದ್ದೇನೆ. ಒಬ್ಬ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವಾಸೆ ಇದೆ. ಒಳ್ಳೆಯ ಪಾತ್ರಗಳಿಗಾಗಿ ಎದುರುನೋಡುತ್ತಿದ್ದೇನೆ’ ಎನ್ನುತ್ತಾರೆ.
ಮುಂಬರುವ ವಿಜಯ್ ಸೇತುಪತಿ ಅಭಿನಯದ ‘ಏಸ್’, ಅಜಿತ್ ಅಭಿನಯದ ‘ಗುಡ್ ಬ್ಯಾಡ್ ಅಗ್ಲ’, ‘ಕಿಂಗ್ಡಮ್’, ‘ಬುಲೆಟ್’, ‘ನಾಗಬಂಧಂ’ ಮುಂತಾದ ಚಿತ್ರಗಳಲ್ಲಿ ಅವಿನಾಶ್ ಈಗಾಗಲೇ ಅಭಿನಯಿಸಿದ್ದು, ಆ ಚಿತ್ರಗಳ ಬಿಡುಗಡೆಗೆ ಕಾಯುತ್ತಿದ್ದಾರೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…