ಮನರಂಜನೆ

ಈ ಅವಿನಾಶ್‍ ಆ ಅವಿನಾಶ್ ಅಲ್ಲ; ‘ಕೆಜಿಎಫ್‍’ ನಟನಿಗೆ ಹೆಚ್ಚಿದ ಬೇಡಿಕೆ

ಕನ್ನಡದಲ್ಲಿ ಅವಿನಾಶ್‍ ಎಂದರೆ ಮೊದಲಿಗೆ ನೆನಪಿಗೆ ಬರುವುದು ಹಿರಿಯ ನಟ ಯಳಂದೂರು ಅವಿನಾಶ್‍. ಕಳೆದ ನಾಲ್ಕು ದಶಕಗಳಿಂದ ನೂರಾರು ಚಿತ್ರಗಳಲ್ಲಿ ನಟಿಸಿರುವ ಅವಿನಾಶ್‍, ಕನ್ನಡದ ಬೇಡಿಕೆಯ ನಟರಲ್ಲೊಬ್ಬರು. ಈಗ ಇನ್ನೊಬ್ಬ ಅವಿನಾಶ್‍, ಕನ್ನಡಕ್ಕಿಂತ ಬೇರೆ ಭಾಷೆಯ ಚಿತ್ರಗಳಲ್ಲೇ ಹೆಚ್ಚು ನಟಿಸುತ್ತಿದ್ದಾರೆ.

ಈ ಅವಿನಾಶ್‍, ‘ಕೆಜಿಎಫ್‍’ ಚಿತ್ರದಲ್ಲಿ ಆ್ಯಂಡ್ರೂಸ್‍ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಮೊದಲ ಚಿತ್ರದಲ್ಲೇ ತಮ್ಮ ಪಾತ್ರದಿಂದ ಗಮನ ಸೆಳೆದ ಅವಿನಾಶ್‍, ‘ಕೆಜಿಎಫ್‍’ ನಂತರ ‘ಗುರುದೇವ್ ಹೊಯ್ಸಳ’ ಚಿತ್ರದಲ್ಲಿ ನಟಿಸಿರುವ ಅವಿನಾಶ್‍ ನಟಿಸಿದರು. ಇದೀಗ ಅವರು ಪರಭಾಷೆಯ ಚಿತ್ರಗಳಲ್ಲಿ ಬೇಡಿಕೆಯ ನಟರಾಗಿದ್ದಾರೆ.

ತೆಲುಗಿನಲ್ಲಿ ನಂದಮೂರಿ ಬಾಲಕೃಷ್ಣ ಅಭಿನಯದ ‘ವೀರ ಸಿಂಹ ರೆಡ್ಡಿ’, ಚಿರಂಜೀವಿ ಅಭಿನಯದ ‘ವಾಲ್ಟರ್ ವೀರಯ್ಯ’, ತಮಿಳಿನಲ್ಲಿ ರಜನಿಕಾಂತ್‍ ಅಭಿನಯದ ‘ವೆಟ್ಟಯಾನ್‍’, ಸೂರ್ಯ ಅಭಿನಯದ ‘ಕಂಗುವಾ, ಆರ್ಯ ಅಭಿನಯದ ‘ಕಾದರ್ ಭಾಷ ಎಂದ್ರ ಮುತ್ತುರಾಮಲಿಂಗಂ’, ಮಲಯಾಳಂನಲ್ಲಿ ಸುರೇಶ್ ಗೋಪಿ ಅಭಿನಯದ ‘ಒರು ಪೆರುಂ ಕಲಿಯಟ್ಟಂ’, ಹಿಂದಿಯ ‘ಬೇಬಿ ಜಾನ್‍’ ಚಿತ್ರಗಳಲ್ಲಿ ಅವಿನಾಶ್‍ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.

ತಮಗೆ ಚಿತ್ರರಂಗದಲ್ಲಿ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವ ಆಸೆ ಎನ್ನುವ ಅವಿನಾಶ್‍, ‘ಒಳ್ಳೆಯ ವಿಲನ್‍ ಪಾತ್ರಗಳು, ಅರ್ಥಪೂರ್ಣ ಪೋಷಕ ಪಾತ್ರಗಳಿಗೆ ಎದುರು ನೋಡುತ್ತಿದ್ದೇನೆ. ಅಭಿನಯಕ್ಕೆ ಪ್ರಾಮುಖ್ಯತೆ ಇರಬೇಕು. ‘ಗುರುದೇವ್‍ ಹೊಯ್ಸಳ’ ಚಿತ್ರದಲ್ಲೊಂದು ಒಳ್ಳೆಯ ಪಾತ್ರ ಸಿಕ್ಕಿತ್ತು. ‘ಕಂಗುವ’ ಚಿತ್ರದಲ್ಲಿ ಸೂರ್ಯ ತಂದೆಯಾಗಿ ಅಭಿನಯಿಸಿದ್ದೇನೆ. ಒಬ್ಬ ಒಳ್ಳೆಯ ಪೋಷಕ ನಟನಾಗಿ ಗುರುತಿಸಿಕೊಳ್ಳುವಾಸೆ ಇದೆ. ಒಳ್ಳೆಯ ಪಾತ್ರಗಳಿಗಾಗಿ ಎದುರುನೋಡುತ್ತಿದ್ದೇನೆ’ ಎನ್ನುತ್ತಾರೆ.

ಮುಂಬರುವ ವಿಜಯ್ ಸೇತುಪತಿ ಅಭಿನಯದ ‘ಏಸ್’, ಅಜಿತ್‍ ಅಭಿನಯದ ‘ಗುಡ್‍ ಬ್ಯಾಡ್‍ ಅಗ್ಲ’, ‘ಕಿಂಗ್ಡಮ್’, ‘ಬುಲೆಟ್’, ‘ನಾಗಬಂಧಂ’ ಮುಂತಾದ ಚಿತ್ರಗಳಲ್ಲಿ ಅವಿನಾಶ್‍ ಈಗಾಗಲೇ ಅಭಿನಯಿಸಿದ್ದು, ಆ ಚಿತ್ರಗಳ ಬಿಡುಗಡೆಗೆ ಕಾಯುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೂರು ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ ; ಉಭಯ ಸದನಗಳು ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ಬೆಂಗಳೂರು : ವಾಲ್ಮೀಕಿ ನಿಗಮ ಹಗರಣ ಸಂಬಂಧ ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಪಕ್ಷಗಳ ತೀವ್ರ ಪ್ರತಿಭಟನೆಗೆ ಸಾಕ್ಷಿಯಾದ…

2 hours ago

ರಾಜ್ಯಕ್ಕೆ ಮತ್ತೆ ಕಾವೇರಿ ಆಘಾತ ; ತಮಿಳುನಾಡಿಗೆ 9,000 ಕ್ಯುಸೆಕ್‌ ನೀರು ಹರಿಸಲು ಆದೇಶ

ಬೆಂಗಳೂರು : ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಸವಾಲು ಎದುರಾಗಿದೆ. ತಮಿಳುನಾಡಿಗೆ ಬಿಳಿಗುಂಡ್ಲುವಿನಲ್ಲಿ ಮುಂದಿನ 15 ದಿನಗಳ…

5 hours ago

ಮಳೆ ಕೊರತೆ ನೀಗಿಸಲು ಕೃತಕ ಮಳೆ ಅಸ್ತ್ರ : ಮೋಡ ಬಿತ್ತನೆಗೆ ಸರ್ಕಾರ ಗ್ರೀನ್ ಸಿಗ್ನಲ್

ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ಜಲಾಶಯಗಳಲ್ಲಿ ನೀರು ಕುಸಿತ - ನಾಳೆಯೇ ಏಜೆನ್ಸಿ ಅಂತಿಮ ಬೆಂಗಳೂರು : ರಾಜ್ಯದ…

7 hours ago

ವರ್ಷಕ್ಕೆ ಮೂರು ಸಿಲಿಂಡರ್ ಉಚಿತ – ತಮಿಳುನಾಡು ಜನರಿಗೆ ವಿಜಯ್‌ ಸರ್ಕಾರದ ಬಂಪರ್‌ ಆಫರ್‌!

ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್‌ ಸರ್ಕಾರದಿಂದ ಭರ್ಜರಿ ಗುಡ್‌ನ್ಯೂಸ್‌ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್‌ಗಳ ವಿಚಾರದಲ್ಲಿ ಮಹತ್ವದ…

12 hours ago

ತಮಿಳುನಾಡಿಗೆ ಕಾವೇರಿ ನೀರು: ಸೋಮವಾರಕ್ಕೆ ವಿಚಾರಣೆ ಮುಂದೂಡಿಕೆ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…

12 hours ago

ಕಲಾಪಗಳೇ ನಡೆಯದ ಅಧಿವೇಶನ

ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…

13 hours ago