ಮನರಂಜನೆ

ಆನೆ ಕಾಲು ರೋಗದ ಕುರಿತು ಹೀಗೊಂದು ಚಿತ್ರ; ಶ್ರೀಮುರಳಿಯಿಂದ ಪೋಸ್ಟರ್ ಬಿಡುಗಡೆ

ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡಿ ಕೊಟ್ಟಿದ್ದಾರೆ.

ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರದ ಹೆಸರು ‘ಈ ಪಾದ ಪುಣ್ಯಪಾದ’. ಹೆಸರು ಕೇಳುತ್ತಿದ್ದಂತೆಯೇ ‘ಶ್ರೀ ಮಂಜುನಾಥ’ ಚಿತ್ರದ ಹಾಡು ನೆನಪಾಗುತ್ತದೆ. ಹಾಡಿನ ಮೊದಲ ಸಾಲುಗಳನ್ನೇ ಈ ಚಿತ್ರದ ಶೀರ್ಷಿಕೆಯನ್ನಾಗಿ ಮಾಡಿರುವ ಸಿದ್ದು, ಈ ಚಿತ್ರದಲ್ಲಿ ಆನೆ ಕಾಲು ರೋಗಿಯ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸಿದ್ದು ಪೂರ್ಣಚಂದ್ರ, ‘ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆ. ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ, ಚಿತ್ರಕಥೆ ಮಾಡಿದ್ದೇನೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದು ಹೇಳಿದ್ದಾರೆ.

ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ ಆಟೋ ನಾಗರಾಜ್‍. ಕಳೆದ 18 ವರ್ಷಗಳಿಂದ ಆಟೋಗಳ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾ ಬಂದಿರುವ ಅವರು, ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಜೊತೆಗೆ ಚಿತ್ರದಲ್ಲಿ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್ ಮುಂತಾದವರು ನಟಿಸಿದ್ದಾರೆ.

ಅನಂತ್‍ ಆರ್ಯನ್‍ ಸಂಗೀತ ಮತ್ತು ಹಿನ್ನೆಲೆ ಸಂಗೀತವಿರುವ ಈ ಚಿತ್ರವು ಸೆನ್ಸಾರ್ ‍ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಪಡೆದಿದ್ದು, ಹಲವು ಚಿತ್ರೋತ್ಸವಗಳಲ್ಲಿ ಸ್ಪರ್ಧಿಸುತ್ತಿದೆ.

ಭೂಮಿಕಾ

Recent Posts

ಮೈಸೂರು ಸ್ಯಾಂಡಲ್‌ ಸೋಪ್‌ಗೆ ತಮನ್ನಾ ರಾಯಭಾರಿ ; ವಿಪಕ್ಷಗಳ ವಿರೋಧ

ಬೆಂಗಳೂರು : ಕರ್ನಾಟಕ ಸೋಪ್ಸ್ ಅಂಡ್ ಡಿಟರ್ಜೆಂಟ್ಸ್ ಲಿಮಿಟೆಡ್ (ಕೆಎಸ್‌ಡಿಎಲ್) ನ ಐತಿಹಾಸಿಕ ಬ್ರ್ಯಾಂಡ್ ಮೈಸೂರು ಸ್ಯಾಂಡಲ್ ಸೋಪ್‌ಗೆ ನಟಿ…

8 hours ago

ಮೈಸೂರಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ

ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದ ಸಂಸದ ಯದುವೀರ್ ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರು ಈಗ ಅತ್ಯಂತ ವೇಗವಾಗಿ ಬೆಳೆಯುತ್ತಿರುವ…

9 hours ago

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಕ್ಕೆ ಅನುಮತಿ ಸುಳಿವು

ಕುನ್ಹಾ ಆಯೋಗದ ವರದಿ ಆಧರಿಸಿ ಕ್ರಮ : ಪರಮೇಶ್ವರ್ ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗಳನ್ನು ನಡೆಸಲು…

9 hours ago

ಬಜೆಟ್‌ ದಿನಾಂಕ ಸದ್ಯದಲ್ಲೇ ನಿಗದಿ : ಸಿಎಂ

ಬೆಂಗಳೂರು : ವಿವಿಧ ಇಲಾಖೆಗಳೊಂದಿಗೆ ಸಭೆಗಳನ್ನು ನಡೆಸಲಾಗುತ್ತಿದ್ದು, ಆಯವ್ಯಯದ ದಿನಾಂಕವನ್ನು ಸದ್ಯದಲ್ಲಿಯೇ ತಿಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬುಧವಾರ…

9 hours ago

T20 World Cup : ಡಬಲ್‌ ಸೂಪರ್‌ ಓವರ್‌ : 2 ಬಾರಿ ಟೈ ಆದ ಪಂದ್ಯದಲ್ಲಿ ಹರಿಣಗಳ ಮೇಲುಗೈ

ಅಹಮದಾಬಾದ್ : ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಬುಧವಾರ ಅಪ್ಘಾನಿಸ್ತಾನ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಲೀಗ್ ಪಂದ್ಯವು ಎರಡು…

10 hours ago

ಮುಂದುವರೆದ ಡ್ರಗ್ಸ್‌ ಸಮರ : ಮಾದಕ ವಸ್ತು ವಶಕ್ಕೆ ; ಐವರ ಬಂಧನ

ಮೈಸೂರು : ನಗರದಲ್ಲಿ ಮಾದಕ ವಸ್ತು ಅಕ್ರಮ ಮಾರಾಟ ಮತ್ತು ಸಾಗಾಟದ ಮೇಲೆ ಸಿಸಿಬಿ ಮತ್ತು ಮಂಡಿ ಠಾಣಾ ಪೊಲೀಸರಿಂದ…

10 hours ago