ಮನರಂಜನೆ

ಆನೆ ಕಾಲು ರೋಗದ ಕುರಿತು ಹೀಗೊಂದು ಚಿತ್ರ; ಶ್ರೀಮುರಳಿಯಿಂದ ಪೋಸ್ಟರ್ ಬಿಡುಗಡೆ

ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡಿ ಕೊಟ್ಟಿದ್ದಾರೆ.

ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರದ ಹೆಸರು ‘ಈ ಪಾದ ಪುಣ್ಯಪಾದ’. ಹೆಸರು ಕೇಳುತ್ತಿದ್ದಂತೆಯೇ ‘ಶ್ರೀ ಮಂಜುನಾಥ’ ಚಿತ್ರದ ಹಾಡು ನೆನಪಾಗುತ್ತದೆ. ಹಾಡಿನ ಮೊದಲ ಸಾಲುಗಳನ್ನೇ ಈ ಚಿತ್ರದ ಶೀರ್ಷಿಕೆಯನ್ನಾಗಿ ಮಾಡಿರುವ ಸಿದ್ದು, ಈ ಚಿತ್ರದಲ್ಲಿ ಆನೆ ಕಾಲು ರೋಗಿಯ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸಿದ್ದು ಪೂರ್ಣಚಂದ್ರ, ‘ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆ. ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ, ಚಿತ್ರಕಥೆ ಮಾಡಿದ್ದೇನೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದು ಹೇಳಿದ್ದಾರೆ.

ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ ಆಟೋ ನಾಗರಾಜ್‍. ಕಳೆದ 18 ವರ್ಷಗಳಿಂದ ಆಟೋಗಳ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾ ಬಂದಿರುವ ಅವರು, ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಜೊತೆಗೆ ಚಿತ್ರದಲ್ಲಿ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್ ಮುಂತಾದವರು ನಟಿಸಿದ್ದಾರೆ.

ಅನಂತ್‍ ಆರ್ಯನ್‍ ಸಂಗೀತ ಮತ್ತು ಹಿನ್ನೆಲೆ ಸಂಗೀತವಿರುವ ಈ ಚಿತ್ರವು ಸೆನ್ಸಾರ್ ‍ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಪಡೆದಿದ್ದು, ಹಲವು ಚಿತ್ರೋತ್ಸವಗಳಲ್ಲಿ ಸ್ಪರ್ಧಿಸುತ್ತಿದೆ.

ಭೂಮಿಕಾ

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

6 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

6 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

7 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

16 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago