ಮನರಂಜನೆ

ಆನೆ ಕಾಲು ರೋಗದ ಕುರಿತು ಹೀಗೊಂದು ಚಿತ್ರ; ಶ್ರೀಮುರಳಿಯಿಂದ ಪೋಸ್ಟರ್ ಬಿಡುಗಡೆ

ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್‍ ಬಿಡುಗಡೆ ಮಾಡಿ ಕೊಟ್ಟಿದ್ದಾರೆ.

ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರದ ಹೆಸರು ‘ಈ ಪಾದ ಪುಣ್ಯಪಾದ’. ಹೆಸರು ಕೇಳುತ್ತಿದ್ದಂತೆಯೇ ‘ಶ್ರೀ ಮಂಜುನಾಥ’ ಚಿತ್ರದ ಹಾಡು ನೆನಪಾಗುತ್ತದೆ. ಹಾಡಿನ ಮೊದಲ ಸಾಲುಗಳನ್ನೇ ಈ ಚಿತ್ರದ ಶೀರ್ಷಿಕೆಯನ್ನಾಗಿ ಮಾಡಿರುವ ಸಿದ್ದು, ಈ ಚಿತ್ರದಲ್ಲಿ ಆನೆ ಕಾಲು ರೋಗಿಯ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ.

ಈ ಚಿತ್ರದ ಕುರಿತು ಮಾತನಾಡುವ ಸಿದ್ದು ಪೂರ್ಣಚಂದ್ರ, ‘ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆ. ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ, ಚಿತ್ರಕಥೆ ಮಾಡಿದ್ದೇನೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದು ಹೇಳಿದ್ದಾರೆ.

ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ ಆಟೋ ನಾಗರಾಜ್‍. ಕಳೆದ 18 ವರ್ಷಗಳಿಂದ ಆಟೋಗಳ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾ ಬಂದಿರುವ ಅವರು, ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಜೊತೆಗೆ ಚಿತ್ರದಲ್ಲಿ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್ ಮುಂತಾದವರು ನಟಿಸಿದ್ದಾರೆ.

ಅನಂತ್‍ ಆರ್ಯನ್‍ ಸಂಗೀತ ಮತ್ತು ಹಿನ್ನೆಲೆ ಸಂಗೀತವಿರುವ ಈ ಚಿತ್ರವು ಸೆನ್ಸಾರ್ ‍ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಪಡೆದಿದ್ದು, ಹಲವು ಚಿತ್ರೋತ್ಸವಗಳಲ್ಲಿ ಸ್ಪರ್ಧಿಸುತ್ತಿದೆ.

ಭೂಮಿಕಾ

Recent Posts

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

2 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

2 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

6 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

11 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

11 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

11 hours ago