ಈ ಹಿಂದೆ ‘ತಾರಿಣಿ’ ಚಿತ್ರದ ಮೂಲ ಭ್ರೂಣಹತ್ಯೆ ಮಾಫಿಯಾ ಕುರಿತು ಬೆಳಕು ಚೆಲ್ಲಿದ್ದ ನಿರ್ದೇಶಕ ಸಿದ್ದು ಪೂರ್ಣಚಂದ್ರ, ಇದೀಗ ಸದ್ದಿಲ್ಲದೆ ಇನ್ನೊಂದು ಚಿತ್ರ ಮಾಡಿಮುಗಿಸಿದ್ದಾರೆ. ಈ ಬಾರಿ, ನಟ ಶ್ರೀಮುರಳಿ ಅವರ ಪ್ರಯತ್ನಕ್ಕೆ ಬೆಂಬಲ ನೀಡಿದ್ದು, ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿ ಕೊಟ್ಟಿದ್ದಾರೆ.
ಸಿದ್ದು ಪೂರ್ಣಚಂದ್ರ ನಿರ್ದೇಶನದ ಹೊಸ ಚಿತ್ರದ ಹೆಸರು ‘ಈ ಪಾದ ಪುಣ್ಯಪಾದ’. ಹೆಸರು ಕೇಳುತ್ತಿದ್ದಂತೆಯೇ ‘ಶ್ರೀ ಮಂಜುನಾಥ’ ಚಿತ್ರದ ಹಾಡು ನೆನಪಾಗುತ್ತದೆ. ಹಾಡಿನ ಮೊದಲ ಸಾಲುಗಳನ್ನೇ ಈ ಚಿತ್ರದ ಶೀರ್ಷಿಕೆಯನ್ನಾಗಿ ಮಾಡಿರುವ ಸಿದ್ದು, ಈ ಚಿತ್ರದಲ್ಲಿ ಆನೆ ಕಾಲು ರೋಗಿಯ ಕಥೆಯನ್ನು ಹೇಳುವುದಕ್ಕೆ ಮುಂದಾಗಿದ್ದಾರೆ.
ಈ ಚಿತ್ರದ ಕುರಿತು ಮಾತನಾಡುವ ಸಿದ್ದು ಪೂರ್ಣಚಂದ್ರ, ‘ಪ್ರತಿಯೊಬ್ಬ ಮನುಷ್ಯನಿಗೂ ಒಂದಲ್ಲ ಒಂದು ರೀತಿಯ ಖಾಯಿಲೆಗಳು ಸಂಭವಿಸಿದಾಗ ಆ ರೋಗಕ್ಕಿಂತ ಮಾನಸಿಕವಾಗಿಯೇ ಯಾತನೆ ಪಡುವುದು ಜಾಸ್ತಿ ಆಗಿರುತ್ತದೆ. ಯಾವುದೇ ರೋಗ ಬಂದರೂ ಕೂಡ ನಾವು ಎದೆಗುಂದದೆ ತಾಳ್ಮೆಯಿಂದ ಅದನ್ನು ಎದುರಿಸಬೇಕು ಎಂಬುದೇ ಈ ಚಿತ್ರದ ಕಥೆ. ಈ ಕಥೆಯನ್ನು ಹಲವು ವರ್ಷಗಳಿಂದ ಅಧ್ಯಯನ ಮಾಡಿ, ಚಿತ್ರಕಥೆ ಮಾಡಿದ್ದೇನೆ. ಯಾವುದೇ ರೋಗ ಬಂದಿರುವ ವ್ಯಕ್ತಿಯನ್ನು ಯಾವ ರೀತಿ ಪ್ರೀತಿಯಿಂದ ನೋಡಿಕೊಳ್ಳಬೇಕು, ಸಾಂತ್ವನ ಹೇಳಬೇಕು ಎಂಬುದು ಈ ಚಿತ್ರದ ಮುಖಾಂತರ ಹೇಳುವ ಪ್ರಯತ್ನ ಮಾಡಿದ್ದೇವೆ’ ಎಂದು ಹೇಳಿದ್ದಾರೆ.
ಈ ಚಿತ್ರದ ಮೂಲಕ ಹೀರೋ ಆಗುತ್ತಿದ್ದಾರೆ ಆಟೋ ನಾಗರಾಜ್. ಕಳೆದ 18 ವರ್ಷಗಳಿಂದ ಆಟೋಗಳ ಮೂಲಕ ಸಿನಿಮಾ ಪ್ರಚಾರ ಮಾಡುತ್ತಾ ಬಂದಿರುವ ಅವರು, ಮೊದಲ ಬಾರಿಗೆ ನಾಯಕ ನಟರಾಗಿ ಈ ಪಾತ್ರವನ್ನು ನಿರ್ವಹಿಸಿದ್ದಾರೆ. ಅವರ ಜೊತೆಗೆ ಚಿತ್ರದಲ್ಲಿ ರಶ್ಮಿ, ಚೈತ್ರ, ಪ್ರಮೀಳಾ ಸುಬ್ರಹ್ಮಣ್ಯ, ಮನೋಜ್, ಹರೀಶ್ ಕುಂದೂರು, ಬೇಬಿ ರಿದಿ, ಪವಿತ್ರ, ಬಾಲರಾಜ್ ವಾಡಿ, ರೋಹಿಣಿ, ಶಂಕರ್ ಭಟ್ ಮುಂತಾದವರು ನಟಿಸಿದ್ದಾರೆ.
ಅನಂತ್ ಆರ್ಯನ್ ಸಂಗೀತ ಮತ್ತು ಹಿನ್ನೆಲೆ ಸಂಗೀತವಿರುವ ಈ ಚಿತ್ರವು ಸೆನ್ಸಾರ್ ಮಂಡಳಿಯಿಂದ ‘ಯು/ಎ’ ಪ್ರಮಾಣಪತ್ರ ಪಡೆದಿದ್ದು, ಹಲವು ಚಿತ್ರೋತ್ಸವಗಳಲ್ಲಿ ಸ್ಪರ್ಧಿಸುತ್ತಿದೆ.
ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…
ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…
ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…
ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…
ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…
ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ ಮಡಿಕೇರಿ: ಅಶ್ಲೀಲ…