ಮನರಂಜನೆ

ಇದು ಏಳನೇ ತರಗತಿ ಹುಡುಗಿಯ ಹೋರಾಟದ ಕಥೆ …

ಈ ಹಿಂದೆ ಹರ್ಷಿಕಾ ಪೂಣಾಚ್ಚ ಅಭಿನಯದ ‘ಚಿಟ್ಟೆ’ ಎಂಬ ಹಾರರ್‍ ಚಿತ್ರವನ್ನು ನಿರ್ದೇಶಿಸಿದ್ದ ಸಂಭಾಷಣೆಕಾರ ಎಂ.ಎಲ್‍. ಪ್ರಸನ್ನ, ಈ ಬಾರಿ ಮಕ್ಕಳ ಚಿತ್ರವೊಂದನ್ನು ಕೈಗೆತ್ತಿಕೊಂಡಿದ್ದಾರೆ. ಹೆಸರು ‘ಭಾರತಿ ಟೀಚರ್ ಏಳನೇ ತರಗತಿ’. ಈ ಚಿತ್ರದ ಒಂದು ಹಾಡು ಮತ್ತು ಕೆಲವು ದೃಶ್ಯಗಳನ್ನು ಹೊರತುಪಡಿಸಿ, ಮಿಕ್ಕಂತೆ ಅವರು ಬಹುತೇಕ ಚಿತ್ರೀಕರಣ ಮುಗಿಸಿದ್ದಾರೆ. ವಿಶೇಷವೆಂದರೆ, ಈ ಚಿತ್ರದಲ್ಲಿ ಸಚಿವ ಸಂತೋಷ್‍ ಲಾಡ್‍, ಜಿಲ್ಲಾಧಿಕಾರಿಯಾಗಿ ನಟಿಸುತ್ತಿದ್ದಾರೆ. ಅವರ ಭಾಗದ ಚಿತ್ರೀಕರಣ ಮತ್ತು ‘ಕನ್ನಡಿಗ’ ಎಂಬ ಹಾಡೊಂದರ ಚಿತ್ರೀಕರಣ ಮಾತ್ರ ಬಾಕಿ ಇದೆ.

ಅದಕ್ಕೂ ಮೊದಲು ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ವಿ. ನಾಗೇಂದ್ರ ಪ್ರಸಾದ್ ಒಡೆತನದ ಮ್ಯೂಸಿಕ್ ಬಜಾರ್‍ನಲ್ಲಿ ಚಿತ್ರದ ಹಾಡುಗಳು ಬಿಡುಗಡೆಯಾಗಿವೆ. ಈ ಹಾಡುಗಳ ಬಿಡುಗಡೆ ಕಾರ್ಯಕ್ರಮ ಶಾಲಾ ಮಕ್ಕಳ ಸಮ್ಮುಖದಲ್ಲೇ ನಡೆದಿದ್ದು ವಿಶೇಷ. ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ದಾವಣಗೆರೆ ಮೂಲದ ಡಾ.ವಿ.ವಿಜಯಲಕ್ಷೀ ಮತ್ತು ಉದ್ಯಮಿ ವೀರಕಪುತ್ರ ಶ್ರೀನಿವಾಸ್ ತಲಾ ಒಂದೊಂದು ಹಾಡುಗಳನ್ನು ಲೋಕಾರ್ಪಣೆಗೊಳಿಸಿ ತಂಡಕ್ಕೆ ಶುಭ ಹಾರೈಸಿದರು.

ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆಯುವುದರ ಜೊತೆಗೆ ಸಂಗೀತ ಸಂಯೋಜಿಸಿ, ನಿರ್ದೇಶನದ ಜವಾಬ್ದಾರಿಯನ್ನೂ ಪ್ರಸನ್ನ ಹೊತ್ತಿದ್ದಾರೆ. ಚಿತ್ರದ ಕುರಿತು ಮಾತನಾಡುವ ಅವರು, ‘ಭಾರತಿ ಎನ್ನುವ ಏಳನೇ ತರಗತಿ ವಿದ್ಯಾರ್ಥಿಯೊಬ್ಬಳು ತನ್ನ ಊರಿನವರೆಲ್ಲರನ್ನು ಸಾಕ್ಷರನ್ನಾಗಿ ಮಾಡಬೇಕೆಂದು ಕನಸು ಕಾಣುತ್ತಾಳೆ. ಈ ಹಾದಿಯಲ್ಲಿ ಆಕೆ ಎದುರಿಸುವ ನೋವು, ಅವಮಾನ ಮತ್ತು ಇದೆಲ್ಲವನ್ನೂ ಮೀರಿ ಆಕೆ ಹೇಗೆ ಗೆದ್ದು ನಿಲ್ಲುತ್ತಾಳೆ ಎಂಬುದು ಚಿತ್ರದ ಕಥೆ. ಇಲ್ಲಿಯವರೆಗೂ 34 ದಿನಗಳ ಚಿತ್ರೀಕರಣ ನಡೆಸಲಾಗಿದೆ. ಕಾರ್ಮಿಕ ಸಚಿವ ಸಂತೋಷ್ ಲಾಡ್ ಜಿಲ್ಲಾದಿಕಾರಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರದಲ್ಲಿ ಒಟ್ಟು 10 ಗೀತೆಗಳು ಇರಲಿದ್ದು, ಎಲ್ಲವನ್ನು ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ’ ಎಂದರು.

ಸಿರಗುಪ್ಪ ಮೂಲದ ಉದ್ಯಮಿ ರಾಘವೇಂದ್ರ ರೆಡ್ಡಿ ಅವರು ಪೂಜ್ಯಾಯ ಫಿಲಂಸ್ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಚಿತ್ರದಲ್ಲಿ ಶಿಕ್ಷಕರಾಗಿ ಸಿಹಿಕಹಿ ಚಂದ್ರು, ಟೈಟಲ್ ರೋಲ್‌ದಲ್ಲಿ ಕು.ಯಶಿಕಾ, ಗೋವಿಂದೇಗೌಡ, ಅಶ್ವಿನ್‌ ಹಾಸನ್, ‘ಕಾಮಿಡಿ ಕಿಲಾಡಿಗಳು’ ಖ್ಯಾತಿಯ ದಿವ್ಯಾ ಅಂಚನ್, ಬೆನಕಾ ನಂಜಪ್ಪ, ರೋಹಿತ್‌ ರಾಘವೇಂದ್ರ, ಸೌಜನ್ಯ ಸುನಿಲ್, ಎಂ.ಜೆ. ರಂಗಸ್ವಾಮಿ ಮುಂತಾದವರು ನಟಿಸಿದ್ದಾರೆ. ಎಂ.ಬಿ.ಹಳ್ಳಿಕಟ್ಟಿ ಛಾಯಾಗ್ರಹಣ ಈ ಚಿತ್ರಕ್ಕಿದೆ.

ಆಂದೋಲನ ಡೆಸ್ಕ್

Recent Posts

‘ಧಮ್ಮಪಯಣ’ ಪ್ರಚಾರ ವಾಹನಗಳಿಗೆ ಎಆರ್‌ಕೆ ಚಾಲನೆ

ಚಾ.ನಗರದಲ್ಲಿ ಅಂತಾರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯಲಿರುವ ಹಿನ್ನೆಲೆಯಲ್ಲಿ ಪ್ರಚಾರ ಮಾಡಲಿರುವ ವಾಹನಗಳು ಚಾಮರಾಜನಗರ : ಧಮ್ಮ ಪಯಣ ಜಾಗೃತಿ ಜಾಥಾದ…

51 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಮೈಸೂರು ದಸರಾ ಚಲನಚಿತ್ರೋತ್ಸವಕ್ಕೆ ಕೊಕ್?!

ಮೈಸೂರು ದಸರಾ ಎಂದರೆ ಜಂಬೂಸವಾರಿ, ಅರಮನೆಯ ದೀಪಾಲಂಕಾರ, ಸಂಗೀತ-ನೃತ್ಯ ಕಾರ್ಯಕ್ರಮಗಳು, ಯುವ ದಸರಾ, ಆಹಾರ ಮೇಳ, ವಸ್ತುಪ್ರದರ್ಶನ ಮಾತ್ರವಲ್ಲ. ಕಳೆದ…

1 hour ago

ಜಂಬೂಸವಾರಿ ; ಯಾರು ಹೊಸ ರಾಯಭಾರಿ?

ಕೆ. ಬಿ. ರಮೇಶನಾಯಕ ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಜಂಬೂಸವಾರಿ ಮೆರವಣಿಗೆಯಲ್ಲಿ ಸಾಗಲಿರುವ ಗಜಪಡೆಯ ಹೊಸ ಸಾರಥಿಯ ಆಯ್ಕೆಗಾಗಿ…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌  4 ಶುಕ್ರವಾರ

1 hour ago

ಕೆಪಿಎಸ್‌ಸಿ ಹಗರಣ | ಜ್ಞಾನೇಂದ್ರ ಕುಮಾರ್ ಅಮಾನತ್ತು

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ 2016ನೇ ಬ್ಯಾಚ್‌ನ…

11 hours ago

ವ್ಯಾಪಕ ಟೀಕೆ : ವಿವಾದಾತ್ಮಕ ʼಉದ್ಯಾನ ಮಸೂದೆʼ ಹಿಂಪಡೆಯಲು ಸರ್ಕಾರ ನಿರ್ಧಾರ

​ಬೆಂಗಳೂರು : ಸಾರ್ವಜನಿಕರಿಂದ ವ್ಯಕ್ತವಾದ ತೀವ್ರ ವಿರೋಧ ಹಾಗೂ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ವಿವಾದಿತ ‘ಸರ್ಕಾರಿ ಉದ್ಯಾನವನಗಳ (ಸಂರಕ್ಷಣೆ) (ತಿದ್ದುಪಡಿ)…

12 hours ago