ಮನರಂಜನೆ

ಉಡಾಳ ಮಗನ ಕಥೆ ಇದು; ‘ರಾಜರತ್ನಾಕರ’ನಾದ ಚಂದನ್ ರಾಜ್

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಥಗ್ಸ್ ಆಫ್ ರಾಮಘಡ’ ಹೆಚ್ಚು ಸುದ್ದಿ ಮಾಡದಿದ್ದರೂ, ಆ ಚಿತ್ರದಲ್ಲಿ ನಟಿಸಿದ್ದ ಚಂದನ್‍ ರಾಜ್‍, ತಮ್ಮ ಪ್ರತಿಭೆಯಿಂದ ಗಮನಸೆಳೆದರು. ಈಗ ಅವರು ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜೂನ್‍.27ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಚಂದನ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರದ ಹೆಸರು ‘ರಾಜರತ್ನಾಕರ’. ಚೌಮುದ ಬ್ಯಾನರ್ ಅಡಿ ಜಯರಾಮ ಸಿ. ಮಾಲೂರು ಈ ಚಿತ್ರವನ್ನು ನಿರ್ಮಿಸಿದ್ದು, ವೀರೇಶ್‍ ಬೊಮ್ಮಸಾಗರ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ. ಹರ್ಷವರ್ಧನ್‍ ರಾಜ್‍ ಸಂಗೀತ ಮತ್ತು ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿರುವ ಈ ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ.

ಉಡಾಳನ ಕಥೆಯಾಗಿದ್ದು, ದುಡ್ಡು ಮಾಡುವುದಕ್ಕೆ ಆತ ಏನೆಲ್ಲಾ ಮಾಡುತ್ತಾನೆ ಎನ್ನುವುದು ಚಿತ್ರದ ಕಥೆಯಂತೆ. ಈ ಚಿತ್ರದ ಕುರಿತು ಮಾತನಾಡುವ ವೀರೇಶ್ ಬೊಮ್ಮ ಸಾಗರ, ‘ಇದು ನನ್ನ ಮೊದಲ ಸಿನಿಮಾ. ಎಲ್ಲರ ಮನೆಯಲ್ಲೂ ಇಂಥವನೊಬ್ಬ ಇರುತ್ತಾನೆ. ಅವನಿಂದ ಕುಟುಂಬದವರು ಹೇಗೆ ಇಕ್ಕಟ್ಟಿಗೆ ಸಿಲುಕುತ್ತಾರೆ ಮತ್ತು ಅವನ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ’ ಎಂದರು.

ಇದನ್ನೂ ಓದಿ: ಎರಡು ಪಾತ್ರಗಳ ಸುತ್ತ ಸುತ್ತುವ ʼಎಲ್ಟು ಮುತ್ತಾʼ ಬಿಡುಗಡೆಗೆ ಸಿದ್ಧ

ಈ ರೀತಿಯ ಕಥೆ ಸಿಕ್ಕಿದ್ದು ಅದೃಷ್ಟ ಎನ್ನುವ ಚಂದನ್‍ ರಾಜ್‍, ನಮ್ಮ ನೇಟಿವಿಟಿ ಕಥೆಗಳನ್ನ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ನಾನು ಬೆಂಗಳೂರಿನ ಹುಟ್ಟಿ ಬೆಳೆದ ಕಾರಣ ಇಲ್ಲಿನ ಕಥೆಯನ್ನೇ ಮಾಡಬೇಕು ಎಂದುಕೊಂಡಿದ್ದೆ’ ಎಂದಿದ್ದಾರೆ.

ಚಿತ್ರದಲ್ಲಿ ಚಂದನ್‍ ರಾಜ್‍ ತಾಯಿ ಪತ್ರ ಮಾಡಿರುವ ಯಮುನಾ ಶ್ರೀನಿಧಿ ಮಾತನಾಡಿ, ‘ವೀರೇಶ್ ಅವರು ನನಗೆ ಕಥೆ ವಿವರಿಸಿದ ರೀತಿಗೆ ನಾನು ಸಿನಿಮಾ ಒಪ್ಪಿಕೊಂಡೆ. ನಾನು ಸಾಕಷ್ಟು ಚಿತ್ರಗಳಲ್ಲಿ ತಾಯಿ‌ ಪಾತ್ರ ಮಾಡಿದ್ದರೂ ಕೂಡ ಇದು ವಿಭಿನ್ನವಾಗಿದೆ. ತೆರೆಯ ಮೇಲೆ ನೋಡಿದಾಗ ಸಿನಿಮಾ ಎಲ್ಲರಿಗೂ ಕನೆಕ್ಟ್ ಆಗಲಿದೆ’ ಎಂದರು. ಎಂದರು.

‘ರಾಜರತ್ನಾಕರ’ ಚಿತ್ರದಲ್ಲಿ ಚೇತನ್‍ ದುರ್ಗಾ, ನಾಗರಾಜ ರಾವ್, ಸಿದ್ದು, ಡಿಂಗ್ರಿ ನರೇಶ್ ಮುಂತಾದವರು ನಟಿಸಿದ್ದಾರೆ. ಚಿತ್ರದ ನಾಯಕಿಯಾಗಿ ಅಪ್ಸರಾ ನಟಿಸಿದ್ದಾರೆ. ಈ ಚಿತ್ರದ ಬಿಡುಗಡೆಗೂ ಮೊದಲೇ ಅವರು ಇನ್ನಿಲ್ಲವಾಗಿದ್ದಾರೆ. ಇಡೀ ತಂಡ ಅಪ್ಸರಾ ಅವರಿಗೆ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

8 mins ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

19 mins ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

1 hour ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

2 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

3 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

3 hours ago