ಮನರಂಜನೆ

ಉಡಾಳ ಮಗನ ಕಥೆ ಇದು; ‘ರಾಜರತ್ನಾಕರ’ನಾದ ಚಂದನ್ ರಾಜ್

ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ ‘ಥಗ್ಸ್ ಆಫ್ ರಾಮಘಡ’ ಹೆಚ್ಚು ಸುದ್ದಿ ಮಾಡದಿದ್ದರೂ, ಆ ಚಿತ್ರದಲ್ಲಿ ನಟಿಸಿದ್ದ ಚಂದನ್‍ ರಾಜ್‍, ತಮ್ಮ ಪ್ರತಿಭೆಯಿಂದ ಗಮನಸೆಳೆದರು. ಈಗ ಅವರು ಇನ್ನೊಂದು ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರವು ಜೂನ್‍.27ರಂದು ರಾಜ್ಯಾದ್ಯಂತ ಬಿಡುಗಡೆ ಆಗುತ್ತಿದೆ.

ಚಂದನ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡಿರುವ ಚಿತ್ರದ ಹೆಸರು ‘ರಾಜರತ್ನಾಕರ’. ಚೌಮುದ ಬ್ಯಾನರ್ ಅಡಿ ಜಯರಾಮ ಸಿ. ಮಾಲೂರು ಈ ಚಿತ್ರವನ್ನು ನಿರ್ಮಿಸಿದ್ದು, ವೀರೇಶ್‍ ಬೊಮ್ಮಸಾಗರ ಕಥೆ, ಚಿತ್ರಕಥೆ ಬರೆಯುವುದರ ಜೊತೆಗೆ ನಿರ್ದೇಶನ ಮಾಡಿದ್ದಾರೆ. ಹರ್ಷವರ್ಧನ್‍ ರಾಜ್‍ ಸಂಗೀತ ಮತ್ತು ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿರುವ ಈ ಚಿತ್ರದ ಟ್ರೇಲರ್‍ ಇತ್ತೀಚೆಗೆ ಬಿಡುಗಡೆಯಾಗಿದೆ.

ಉಡಾಳನ ಕಥೆಯಾಗಿದ್ದು, ದುಡ್ಡು ಮಾಡುವುದಕ್ಕೆ ಆತ ಏನೆಲ್ಲಾ ಮಾಡುತ್ತಾನೆ ಎನ್ನುವುದು ಚಿತ್ರದ ಕಥೆಯಂತೆ. ಈ ಚಿತ್ರದ ಕುರಿತು ಮಾತನಾಡುವ ವೀರೇಶ್ ಬೊಮ್ಮ ಸಾಗರ, ‘ಇದು ನನ್ನ ಮೊದಲ ಸಿನಿಮಾ. ಎಲ್ಲರ ಮನೆಯಲ್ಲೂ ಇಂಥವನೊಬ್ಬ ಇರುತ್ತಾನೆ. ಅವನಿಂದ ಕುಟುಂಬದವರು ಹೇಗೆ ಇಕ್ಕಟ್ಟಿಗೆ ಸಿಲುಕುತ್ತಾರೆ ಮತ್ತು ಅವನ ಜೀವನದಲ್ಲಿ ಏನೆಲ್ಲಾ ಬದಲಾವಣೆಗಳಾಗುತ್ತವೆ ಎಂಬುದನ್ನು ಈ ಚಿತ್ರದ ಮೂಲಕ ಹೇಳುವ ಪ್ರಯತ್ನ ಮಾಡಿದ್ದೇನೆ’ ಎಂದರು.

ಇದನ್ನೂ ಓದಿ: ಎರಡು ಪಾತ್ರಗಳ ಸುತ್ತ ಸುತ್ತುವ ʼಎಲ್ಟು ಮುತ್ತಾʼ ಬಿಡುಗಡೆಗೆ ಸಿದ್ಧ

ಈ ರೀತಿಯ ಕಥೆ ಸಿಕ್ಕಿದ್ದು ಅದೃಷ್ಟ ಎನ್ನುವ ಚಂದನ್‍ ರಾಜ್‍, ನಮ್ಮ ನೇಟಿವಿಟಿ ಕಥೆಗಳನ್ನ ಮಾಡಬೇಕು ಎಂಬುದು ನನ್ನ ಆಸೆಯಾಗಿತ್ತು. ನಾನು ಬೆಂಗಳೂರಿನ ಹುಟ್ಟಿ ಬೆಳೆದ ಕಾರಣ ಇಲ್ಲಿನ ಕಥೆಯನ್ನೇ ಮಾಡಬೇಕು ಎಂದುಕೊಂಡಿದ್ದೆ’ ಎಂದಿದ್ದಾರೆ.

ಚಿತ್ರದಲ್ಲಿ ಚಂದನ್‍ ರಾಜ್‍ ತಾಯಿ ಪತ್ರ ಮಾಡಿರುವ ಯಮುನಾ ಶ್ರೀನಿಧಿ ಮಾತನಾಡಿ, ‘ವೀರೇಶ್ ಅವರು ನನಗೆ ಕಥೆ ವಿವರಿಸಿದ ರೀತಿಗೆ ನಾನು ಸಿನಿಮಾ ಒಪ್ಪಿಕೊಂಡೆ. ನಾನು ಸಾಕಷ್ಟು ಚಿತ್ರಗಳಲ್ಲಿ ತಾಯಿ‌ ಪಾತ್ರ ಮಾಡಿದ್ದರೂ ಕೂಡ ಇದು ವಿಭಿನ್ನವಾಗಿದೆ. ತೆರೆಯ ಮೇಲೆ ನೋಡಿದಾಗ ಸಿನಿಮಾ ಎಲ್ಲರಿಗೂ ಕನೆಕ್ಟ್ ಆಗಲಿದೆ’ ಎಂದರು. ಎಂದರು.

‘ರಾಜರತ್ನಾಕರ’ ಚಿತ್ರದಲ್ಲಿ ಚೇತನ್‍ ದುರ್ಗಾ, ನಾಗರಾಜ ರಾವ್, ಸಿದ್ದು, ಡಿಂಗ್ರಿ ನರೇಶ್ ಮುಂತಾದವರು ನಟಿಸಿದ್ದಾರೆ. ಚಿತ್ರದ ನಾಯಕಿಯಾಗಿ ಅಪ್ಸರಾ ನಟಿಸಿದ್ದಾರೆ. ಈ ಚಿತ್ರದ ಬಿಡುಗಡೆಗೂ ಮೊದಲೇ ಅವರು ಇನ್ನಿಲ್ಲವಾಗಿದ್ದಾರೆ. ಇಡೀ ತಂಡ ಅಪ್ಸರಾ ಅವರಿಗೆ ಕಂಬನಿ ಮಿಡಿದಿದೆ.

ಆಂದೋಲನ ಡೆಸ್ಕ್

Recent Posts

ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಜಿ.ಎಸ್.ಪಾಟೀಲ್‌ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.‌ಅಶೋಕ್‌ ಹಾಗೂ ಸಿಎಂ ಡಿ.ಕೆ.ಶಿವಕುಮಾರ್‌…

8 mins ago

ಉತ್ತರಾಖಂಡದಲ್ಲಿ ನಿರ್ಮಾಣ ಹಂತದ ಸುರಂಗಕ್ಕೆ ನುಗ್ಗಿದ ನೀರು: 7 ಮಂದಿ ಕಾರ್ಮಿಕರು ಸಾವು

ಡೆಹ್ರಾಡೂನ್:‌ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್‌ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…

2 hours ago

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

5 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

5 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

5 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

5 hours ago