ಮನರಂಜನೆ

ಈ ತರಹದ ಘಟನೆ ಯಾವ ಕಲಾವಿದರಿಗೂ ಆಗಬಾರದು: ದರ್ಶನ್‍ ಕುರಿತು ಸುದೀಪ್‍

ರೇಣುಕಾಸ್ವಾಮಿ ಕೊಲೆ ಕೇಸಿನಲ್ಲಿ ಬಂಧನವಾಗಿರುವ ನಟ ದರ್ಶನ್‍ ಅವರ ಕುರಿತು ಸುದೀಪ್‍ ಕೆಲವು ತಿಂಗಳಗಳ ಹಿಂದೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದರು. ದರ್ಶನ್‍ ಅವರನ್ನು ಚಿತ್ರರಂಗದಿಂದ ಬ್ಯಾನ್‍ ಮಾಡಬೇಕು ಎನ್ನುವುದಕ್ಕಿಂತ ನೊಂದಿರುವ ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು ಎಂದು ಅವರು ಹೇಳಿದ್ದರು.

ಈಗ ಈ ವಿಷಯವಾಗಿ ಸುದೀಪ್‍ ಇನ್ನಷ್ಟು ಮಾತನಾಡಿದ್ದಾರೆ. ಶನಿವಾರ ಬೆಳಿಗ್ಗೆ ತಮ್ಮ ಹುಟ್ಟುಹಬ್ಬದ ಕುರಿತು ಮಾಹಿತಿ ನೀಡುವ ಸಲುವಾಗಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಸುದೀಪ್‍, ತಮ್ಮ ಹಾಗೂ ದರ್ಶನ್‍ ಸಂಬಂಧದ ಕುರಿತು ಇನ್ನಷ್ಟು ಹೇಳಿದ್ದಾರೆ.

ತಮಗೆ ಕಾನೂನಿನ ಮೇಲೆ ನಂಬಿಕೆ ಇದೆ ಎಂದು ಹೇಳಿರುವ ಸುದೀಪ್, ‘ನಾನು ದರ್ಶನ್‍ ವಿಚಾರವಾಗಿ ಏನು ಹೇಳಬೇಕಿತ್ತೋ ಅವೆಲ್ಲವನ್ನೂ ಈ ಹಿಂದೆಯೇ ಹೇಳಾಗಿದೆ. ದರ್ಶನ್ ಅವರಿಗೆ ರಾಜ್ಯಾದ್ಯ ಉದ್ಧಗಲಕ್ಕೂ ಅಭಿಮಾನಿಗಳು ಇದ್ದಾರೆ. ಅವರಿಗೆ ಕುಟುಂಬ ಇದೆ. ನಾನು ಮಾತನಾಡುವುದರಿಂದ ಅವರಿಗೆ ನೋವಾಗುವುದು ಬೇಡ. ಈ ದೇಶದಲ್ಲಿ ಇದೀವಿ ಅಂದರೆ ಕಾನೂನಿನ ಮೇಲೆ ನಂಬಿಕೆ ಇರಬೇಕು. ನನಗೆ ಕಾನೂನು, ಸರ್ಕಾರದ ಮೇಲೆ ನಂಬಿಕೆಯಿದೆ. ಆಗಬೇಕಾಗಿರೋದು ಆಗಿಯೇ ಆಗುತ್ತದೆ’ ಎಂದು ಸುದೀಪ್‍ ಹೇಳಿದರು.

ದರ್ಶನ್‍ ಅವರನ್ನು ಭೇಟಿಯಾಗುವುದಕ್ಕೆ ಜೈಲಿಗೆ ಹೋಗುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ನಾನು ಅವರ ಜೊತೆಗೆ ಮಾತನಾಡಬೇಕಿದ್ದರೆ ಆಗಲೇ ಮಾತನಾಡಿರುತ್ತಿದ್ದೆ. ಕೆಲವರಿಂದ ನಾವು ಯಾಕೆ ಅಂತರ ಕಾಪಾಡಿಕೊಳ್ಳುತ್ತೇವೆ ಎಂದರೆ, ನಾವು ಸರಿ ಇಲ್ಲಅಥವಾ ಅವರು ಸರಿ ಇಲ್ಲ ಎಂದರ್ಥವಲ್ಲ. ನಾವಿಬ್ಬರೂ ಒಟ್ಟಿಗೆ ಸರಿ ಇಲ್ಲ ಎಂದರ್ಥ. ಸೂರ್ಯ ಬೆಳಿಗ್ಗೆ ಬಂದರೇನೇ ಒಳ್ಳೆಯದು, ಚಂದ್ರ ರಾತ್ರಿ ಬಂದರಷ್ಟೇ ಒಳ್ಳೆಯದು. ಎರಡೂ ಒಟ್ಟಿಗೆ ಸೇರಿದರೆ ಸಮಸ್ಯೆ ಆಗುತ್ತದೆ. ನಾವಿಬ್ಬರೂ ವಿಭಿನ್ನವಾದ ವ್ಯಕ್ತಿಗಳು. ಹಾಗಂತ ಸಹಬಾಳ್ವೆ ನಡೆಸುವುದಕ್ಕೆ ಸಾಧ‍್ಯವಿಲ್ಲವಾ? ನಾಟಕೀಯವಾಗಿ ಇರೋಕೆ ನನಗೆ ಬರುವುದಿಲ್ಲ. ಯಾರೋ ಹೇಳುತ್ತಾರೆ ಎಂದು ನನಗೆ ಸಂಬಂಧ ಬೆಸೆಯೋಕೆ ಇಷ್ಟವಿಲ್ಲ. ಅದು ಹೃದಯದಿಂದ ಬಂದರೆ, ಯಾರೇನಂದುಕೊಂಡರೂ ನಾನು ಹೋಗುತ್ತೀನಿ’ ಎಂದರು.

ಈ ವಿಷಯವಾಗಿ ಇನ್ನಷ್ಟು ಮಾತನಾಡಿದಾಗ, ‘ದರ್ಶನ್‍ ಅವರಿಗೆ ಅವಮಾನವಾದಾಗ, ಎಲ್ಲರೂ ಟ್ವೀಟ್ ಮಾಡಿ ಖಂಡಿಸಿದಾಗ, ನಾನು ಆ ಬಗ್ಗೆ ದೊಡ್ಡ ಪತ್ರವೇ ಬರೆದಿದ್ದೆ. ಅದನ್ನು ಯಾರನ್ನೋ ಮೆಚ್ಚಿಸುವುದಕ್ಕೆ ಮಾಡಿದ್ದಲ್ಲ. ನನ್ನ ಮನಸ್ಸಿಗೆ ಬಂತು. ಈ ತರಹದ ಘಟನೆ ಯಾವ ಕಲಾವಿದರಿಗೂ ಆಗಬಾರದು. ಎಷ್ಟೇ ಕೋಪವಿದ್ದರೂ ಆ ತರಹದ ಘಟನೆ ನಡೆಯಬಾರದು. ಅದು ನಮ್ಮ ಸಂಸ್ಕೃತಿ ಅಲ್ಲ. ಈ ತರಹದ ಘಟನೆಗಳಿಂದ ನಾಳೆ ಪಬ್ಲಿಕ್‍ನಲ್ಲಿ ಯಾರೂ ನಿಲ್ಲುವುದಕ್ಕೆ ಹೆದರಬಾರದು’ ಎಂದರು.

ಇನ್ನು, ನಾನು ಅವರ ಜೊತೆಗೆ ಇದ್ದಿದ್ದರೆ ಅವರನ್ನು ತಿದ್ದುತ್ತಿದ್ದೆ ಎಂಬುದೆಲ್ಲಾ ಸುಳ‍್ಳು ಎಂದ ಸುದೀಪ್, ‘ಒಬ್ಬ ವ್ಯಕ್ತಿ ಸಮಾಜದಲ್ಲಿ ಅಷ್ಟು ದೊಡ್ಡದಾಗಿ ಬೆಳೆದಿದ್ದಾರೆ ಎಂದರೆ ಅವರಿಗೂ ಒಂದು ಸ್ವಂತಿಕೆ ಇರುತ್ತದೆ. ಇನ್ನೊಬ್ಬರ ತಿದ್ದುವ ಶಕ್ತಿ ನನಗೆಲ್ಲಿಂದ ಬರಬೇಕು. ಅವರೇನಾದರೂ ನನ್ನ ಮಾತು ಕೇಳಿದರೆ ಓಕೆ. ತಿದ್ದುವಷ್ಟು ದೊಡ್ಡವನಲ್ಲ ನಾನು’ ಎಂದರು.

ಭೂಮಿಕಾ

Recent Posts

ಓದುಗರ ಪತ್ರ: ನದಿ ಮಾಲಿನ್ಯ ತಡೆಗಟ್ಟಿ

ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…

2 hours ago

ಓದುಗರ ಪತ್ರ: ಸಚಿವ ಸೋಮಣ್ಣ ಹೇಳಿಕೆ ಸ್ವಾಗತಾರ್ಹ

ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…

2 hours ago

ಓದುಗರ ಪತ್ರ: ಅಪಾಯಕಾರಿ ಮರದ ಕೊಂಬೆ ತೆರವುಗೊಳಿಸಿ

ಮೈಸೂರಿನ ಮಾನಸಗಂಗೋತ್ರಿಯಿಂದ ಶ್ರೀ ಜಯಚಾಮರಾಜೇಂದ್ರ ಇಂಜಿನಿಯರಿಂಗ್ ಕಾಲೇಜಿಗೆ (ಎಸ್‌ಜೆಸಿಇ) ಸಂಪರ್ಕ ಕಲ್ಪಿಸುವ ರಸ್ತೆಯ ಎಡ ಬದಿಯಲ್ಲಿ ಇರುವ ಮರವೊಂದರ ಕೊಂಬೆ…

2 hours ago

ಓದುಗರ ಪತ್ರ: ನವ ಭಾರತದ ನಿರ್ಮಾತೃ ಡಾ.ಅಂಬೇಡ್ಕರ್

ಶ್ರೇಷ್ಠ ಸಂವಿಧಾನದ ಮೂಲಕ ಶೋಷಿತ ಸಮುದಾಯಗಳಿಗೆ ಶಿಕ್ಷಣ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಮೀಸಲು ಸೌಲಭ್ಯ ಕಲ್ಪಿಸುವ ಮೂಲಕ ಅವರ ಬಾಳಿಗೆ…

2 hours ago

ಆಂತರಿಕ ಕ್ಲೋಭೆಯಿಂದ ಭಾರತ ರಕ್ಷಿಸಿದ ಅಂಬೇಡ್ಕರ್

ಸಿ.ಹರಕುಮಾರ್, ಬರಹಗಾರ ಬಾಬಾ ಸಾಹೇಬ್‌ರ ಧಾರ್ಮಿಕ ನಿಲುವು ಅರಿಯಲು ಬಹುತೇಕರು ವಿಫಲ ಭಾರತದ ಭಾಗ್ಯವಿಧಾತ ಮತ್ತು ಸಂವಿಧಾನ ಕರ್ತೃ ಡಾ.ಬಿ.ಆರ್.ಅಂಬೇಡ್ಕರ್…

2 hours ago

ಕೊಡಗು ಜಿಲ್ಲೆಯಲ್ಲೂ ಹೆಚ್ಚುತ್ತಿರುವ ತಾಪಮಾನ

ನವೀನ್ ಡಿಸೋಜ ಬಳಲಿಕೆಯೊಂದಿಗೆ ಆರೋಗ್ಯ ಹದಗೆಡುವ ಸಾಧ್ಯತೆ; ಅಗತ್ಯ ಮುನ್ನೆಚ್ಚರಿಕೆಗೆ ಆರೋಗ್ಯ ಇಲಾಖೆ ಸಲಹೆ  ಮಡಿಕೇರಿ: ಅಚ್ಚ ಹಸಿರಿನ ಪರಿಸರದೊಂದಿಗೆ…

2 hours ago