ಮನರಂಜನೆ

ಈ ಬಾರಿ ‘ಬಿಗ್‍ ಬಾಸ್‍’ಗೆ ಸುದೀಪ್‍ ಬದಲು ಬೇರೆಯವರ ನಿರೂಪಣೆ?

ಆಗಸ್ಟ್ ತಿಂಗಳು ಬಂತಂದೆರೆ ‘ಬಿಗ್‍ ಬಾಸ್‍’ ಕುರಿತು ಚರ್ಚೆ ಶುರುವಾಗುತ್ತದೆ. ಅಕ್ಟೋಬರ್‍ನಲ್ಲಿ ಶುರುವಾಗುವ ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗವಹಿಸಬಹುದು, ಏನೆಲ್ಲಾ ಆಗಬಹುದು ಎಂಬ ವಿಷಯಗಳು ಎರಡು ತಿಂಗಳ ಮೊದಲೇ ಶುರುವಾಗುತ್ತದೆ. ಈ ಬಾರಿಯೂ ಚರ್ಚೆ ಶುರುವಾಗಿದ್ದು, ಆದರೆ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಬಹುದು ಎಂಬುದಕ್ಕಿಂತ, ಯಾರು ನಡೆಸಿಕೊಡಬಹುದು ಎಂಬ ಬಿಸಿಬಿಸಿ ಚರ್ಚೆ ಆಗುತ್ತಿದೆ.

ಕಲರ್ಸ್ ಕನ್ನಡದಲ್ಲಿ ನಡೆಯುವ ‘ಬಿಗ್‍ ಬಾಸ್‍’ ಕಾರ್ಯಕ್ರಮದಿಂದ ನಿರೂಪಕ ಸುದೀಪ್‍ ಹೊರನಡೆಯುವ ಸಾಧ್ಯತೆ ಇದೆ ಎಂಬ ಸುದ್ದಿಯೊಂದು ಕಿರುತೆರೆಯ ವಲಯದಲ್ಲಿ ಕೇಳಿಬರುತ್ತಿದೆ. ಸುದೀಪ್‍ ಬದಲು ಬೇರೆಯವರು ನಡೆಸಿಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಕನ್ನಡದಲ್ಲಿ ಮೊದಲಿನಿಂದಲೂ ನಿರೂಪಿಸಿಕೊಂಡು ಬಂದವರು ಸುದೀಪ್‍. ಸತತವಾಗಿ 10 ಸೀಸನ್‍ಗಳ ಕಾಲ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಅವರು ಹೊತ್ತಿದ್ದು, ‘ಬಿಗ್‍ ಬಾಸ್‍’ನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಿರುವಾಗ, ಅವರು ಬದಲಾಗುತ್ತಿರುವುದೇಕೆ?

ಹಿಂದಿ ‘ಬಿಗ್ ಬಾಸ್‍’ ಕಾರ್ಯಕ್ರಮವನ್ನು ಹಲವು ವರ್ಷಗಳ ಕಾಲ ಸಲ್ಮಾನ್‍ ಖಾನ್‍ ನಡೆಸಿಕೊಟ್ಟಿದ್ದರು. ಈ ಬಾರಿ ಅವರ ಬೇಡಿಕೆ ಮತ್ತು ಸಂಭಾವನೆ ಹೆಚ್ಚಾಗಿದ್ದರಿಂದ, ಅವರನ್ನು ಬದಿಗಿಟ್ಟು ಆ ಜವಾಬ್ದಾರಿಯನ್ನು ಹಿರಿಯ ನಟ ಅನಿಲ್‍ ಕಪೂರ್‍ ಅವರಿಗೆ ನೀಡಲಾಗಿದೆ. ಈ ಹಿಂದೆ ಸಹ ‘ಬಿಗ್ ಬಾಸ್‍’ನಲ್ಲಿ ನಿರೂಪಕರು ಬದಲಾಗಿದ್ದಿದೆ. ಇದುವರೆಗೂ 17 ಸೀಸನ್‍ಗಳಾಗಿದ್ದು, ಸಲ್ಮಾನ್‍ ಖಾನ್‍, ಸಂಜಯ್ ದತ್‍, ಅಮಿತಾಭ್‍ ಬಚ್ಚನ್‍, ಶಿಲ್ಪಾ ಶೆಟ್ಟಿ ಮುಂತಾದವರು ನಡೆಸಿಕೊಟ್ಟಿದ್ದಾರೆ. ತೆಲುಗು ಮತ್ತು ಮರಾಠಿಯಲ್ಲೂ ಈ ಬದಲಾವಣೆಗಳಾಗಿವೆ. ಕನ್ನಡದಲ್ಲೂ ಯಾಕೆ ಅಂಥದ್ದೊಂದು ಪ್ರಯತ್ನ ಮಾಡಬಾರದು ಎಂದು ಯೋಚನೆ ನಡೆದಿದೆಯಂತೆ.

ಈ ವಿಷಯವಾಗಿ ಸುದೀಪ್‍ ಅಥವಾ ಚಾನಲ್‍ ಕಡೆಯಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದರ ನಡುವೆಯೇ ಸುದೀಪ್ ಬದಲು ಯಾರು ಈ ಕಾರ್ಯಕ್ರಮವನ್ನು ನಡೆಸಿಕೊಡಬಹುದು ಎಂಬ ಚರ್ಚೆ ಜೋರಾಗಿ ಶುರುವಾಗಿದೆ. ಪ್ರಮುಖವಾಗಿ, ರಮೇಶ್ ‍ಅರವಿಂದ್ ಮತ್ತು ರಿಷಭ್‍ ಶೆಟ್ಟಿ ಹೆಸರುಗಳು ಕೇಳಿಬರುತ್ತಿವೆ. ರಮೇಶ್‍ ಅರವಿಂದ್‍ ಅವರ ಹೆಸರು ಓಕೆ. ಆದರೆ, ‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಬಿಟ್ಟು ರಿಷಭ್ ಬರುತ್ತಾರಾ? ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಇದರ ಜೊತೆಗೆ ಗಣೇಶ್‍ ಅವರ ಹೆಸರು ಸಹ ಪ್ರಮುಖವಾಗಿ ಕೇಳಿಬರುತ್ತಿದೆ.

ನಿಜಕ್ಕೂ ಇವರಲ್ಲಿ ಯಾರಾದರೂ ಒಬ್ಬರು ನಡೆಸಿಕೊಡುತ್ತಾರಾ? ಅಥವಾ ಸುದೀಪ್‍ ಅವರೇ ಈ ಕಾರ್ಯಕ್ರಮವನ್ನು ಮುಂದುವರೆಸುತ್ತಾರಾ? ಎಂಬುದುನ್ನು ಇನ್ನಷ್ಟೇ ಕಾದು ನೋಡಬೇಕಿದೆ.

ಭೂಮಿಕಾ

Recent Posts

ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಬಂಧನ ನೋಟಿಸ್‌ ಹಿಂಪಡೆದ ಕೋರ್ಟ್‌

ಮೈಸೂರು: ಮೈಸೂರು ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆ (ಜಯರಾಮು ಆರ್‌ ವಿರುದ್ಧ ಕರ್ನಾಟಕ ರಾಜ್ಯ) ಪ್ರಕರಣದಲ್ಲಿ…

5 hours ago

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ

ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದ ಹುಲಿ ಪೃಥ್ವಿ ಇನ್ನಿಲ್ಲ ಮೈಸೂರು ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಪ್ರವಾಸಿಗರ ಮನಗೆದ್ದಿದ್ದ ಹೆಮ್ಮೆಯ ಹುಲಿ…

7 hours ago

ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಬಂಧನ

ಬೆಂಗಳೂರು: 42ನೇ ಎಸಿಜೆಎಂ ನ್ಯಾಯಾಲಯ ಅರೆಸ್ಟ್‌ ವಾರೆಂಟ್‌ ಜಾರಿಯ ಹಿನ್ನೆಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.…

8 hours ago

ಮಡಿಕೇರಿ| ಗಾಂಜಾ ಮಾರಾಟ: ಮೈಸೂರು ಮೂಲದ ನಾಲ್ವರ ಬಂಧನ

ಮಡಿಕೇರಿ: ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಮೈಸೂರು ಮೂಲದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಕೊಡಗು…

8 hours ago

ಹನೂರು: ಚಿರತೆ ದಾಳಿಗೆ ಹಸುವಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಿರತೆ ದಾಳಿ ನಡೆಸಿದ ಪರಿಣಾಮ ಹಸು ತೀವ್ರವಾಗಿ ಗಾಯಗೊಂಡಿರುವ ಘಟನೆ…

8 hours ago

ಹನೂರು: ಬಿಆರ್‌ಟಿ ವಲಯ ವ್ಯಾಪ್ತಿಯಲ್ಲಿ ಮತ್ತೆ ಕಾಡ್ಗಿಚ್ಚು: ಅರಣ್ಯ ಪ್ರದೇಶ ಸುಟ್ಟು ಭಸ್ಮ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಅರಣ್ಯ ಪ್ರದೇಶ ವ್ಯಾಪ್ತಿಯ ಲೊಕ್ಕನಹಳ್ಳಿ ಸಮೀಪದ ಹಾವಿನಮೂಲೆ…

8 hours ago