ಮನರಂಜನೆ

ಈ ಬಾರಿ ‘ಬಿಗ್‍ ಬಾಸ್‍’ಗೆ ಸುದೀಪ್‍ ಬದಲು ಬೇರೆಯವರ ನಿರೂಪಣೆ?

ಆಗಸ್ಟ್ ತಿಂಗಳು ಬಂತಂದೆರೆ ‘ಬಿಗ್‍ ಬಾಸ್‍’ ಕುರಿತು ಚರ್ಚೆ ಶುರುವಾಗುತ್ತದೆ. ಅಕ್ಟೋಬರ್‍ನಲ್ಲಿ ಶುರುವಾಗುವ ಕಾರ್ಯಕ್ರಮದಲ್ಲಿ ಯಾರ್ಯಾರು ಭಾಗವಹಿಸಬಹುದು, ಏನೆಲ್ಲಾ ಆಗಬಹುದು ಎಂಬ ವಿಷಯಗಳು ಎರಡು ತಿಂಗಳ ಮೊದಲೇ ಶುರುವಾಗುತ್ತದೆ. ಈ ಬಾರಿಯೂ ಚರ್ಚೆ ಶುರುವಾಗಿದ್ದು, ಆದರೆ ಕಾರ್ಯಕ್ರಮದಲ್ಲಿ ಯಾರು ಭಾಗವಹಿಸಬಹುದು ಎಂಬುದಕ್ಕಿಂತ, ಯಾರು ನಡೆಸಿಕೊಡಬಹುದು ಎಂಬ ಬಿಸಿಬಿಸಿ ಚರ್ಚೆ ಆಗುತ್ತಿದೆ.

ಕಲರ್ಸ್ ಕನ್ನಡದಲ್ಲಿ ನಡೆಯುವ ‘ಬಿಗ್‍ ಬಾಸ್‍’ ಕಾರ್ಯಕ್ರಮದಿಂದ ನಿರೂಪಕ ಸುದೀಪ್‍ ಹೊರನಡೆಯುವ ಸಾಧ್ಯತೆ ಇದೆ ಎಂಬ ಸುದ್ದಿಯೊಂದು ಕಿರುತೆರೆಯ ವಲಯದಲ್ಲಿ ಕೇಳಿಬರುತ್ತಿದೆ. ಸುದೀಪ್‍ ಬದಲು ಬೇರೆಯವರು ನಡೆಸಿಕೊಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

‘ಬಿಗ್‍ ಬಾಸ್‍’ ಕಾರ್ಯಕ್ರಮವನ್ನು ಕನ್ನಡದಲ್ಲಿ ಮೊದಲಿನಿಂದಲೂ ನಿರೂಪಿಸಿಕೊಂಡು ಬಂದವರು ಸುದೀಪ್‍. ಸತತವಾಗಿ 10 ಸೀಸನ್‍ಗಳ ಕಾಲ ಕಾರ್ಯಕ್ರಮದ ನಿರೂಪಣೆಯ ಜವಾಬ್ದಾರಿಯನ್ನು ಅವರು ಹೊತ್ತಿದ್ದು, ‘ಬಿಗ್‍ ಬಾಸ್‍’ನ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಹೀಗಿರುವಾಗ, ಅವರು ಬದಲಾಗುತ್ತಿರುವುದೇಕೆ?

ಹಿಂದಿ ‘ಬಿಗ್ ಬಾಸ್‍’ ಕಾರ್ಯಕ್ರಮವನ್ನು ಹಲವು ವರ್ಷಗಳ ಕಾಲ ಸಲ್ಮಾನ್‍ ಖಾನ್‍ ನಡೆಸಿಕೊಟ್ಟಿದ್ದರು. ಈ ಬಾರಿ ಅವರ ಬೇಡಿಕೆ ಮತ್ತು ಸಂಭಾವನೆ ಹೆಚ್ಚಾಗಿದ್ದರಿಂದ, ಅವರನ್ನು ಬದಿಗಿಟ್ಟು ಆ ಜವಾಬ್ದಾರಿಯನ್ನು ಹಿರಿಯ ನಟ ಅನಿಲ್‍ ಕಪೂರ್‍ ಅವರಿಗೆ ನೀಡಲಾಗಿದೆ. ಈ ಹಿಂದೆ ಸಹ ‘ಬಿಗ್ ಬಾಸ್‍’ನಲ್ಲಿ ನಿರೂಪಕರು ಬದಲಾಗಿದ್ದಿದೆ. ಇದುವರೆಗೂ 17 ಸೀಸನ್‍ಗಳಾಗಿದ್ದು, ಸಲ್ಮಾನ್‍ ಖಾನ್‍, ಸಂಜಯ್ ದತ್‍, ಅಮಿತಾಭ್‍ ಬಚ್ಚನ್‍, ಶಿಲ್ಪಾ ಶೆಟ್ಟಿ ಮುಂತಾದವರು ನಡೆಸಿಕೊಟ್ಟಿದ್ದಾರೆ. ತೆಲುಗು ಮತ್ತು ಮರಾಠಿಯಲ್ಲೂ ಈ ಬದಲಾವಣೆಗಳಾಗಿವೆ. ಕನ್ನಡದಲ್ಲೂ ಯಾಕೆ ಅಂಥದ್ದೊಂದು ಪ್ರಯತ್ನ ಮಾಡಬಾರದು ಎಂದು ಯೋಚನೆ ನಡೆದಿದೆಯಂತೆ.

ಈ ವಿಷಯವಾಗಿ ಸುದೀಪ್‍ ಅಥವಾ ಚಾನಲ್‍ ಕಡೆಯಿಂದ ಇದುವರೆಗೂ ಯಾವುದೇ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಇದರ ನಡುವೆಯೇ ಸುದೀಪ್ ಬದಲು ಯಾರು ಈ ಕಾರ್ಯಕ್ರಮವನ್ನು ನಡೆಸಿಕೊಡಬಹುದು ಎಂಬ ಚರ್ಚೆ ಜೋರಾಗಿ ಶುರುವಾಗಿದೆ. ಪ್ರಮುಖವಾಗಿ, ರಮೇಶ್ ‍ಅರವಿಂದ್ ಮತ್ತು ರಿಷಭ್‍ ಶೆಟ್ಟಿ ಹೆಸರುಗಳು ಕೇಳಿಬರುತ್ತಿವೆ. ರಮೇಶ್‍ ಅರವಿಂದ್‍ ಅವರ ಹೆಸರು ಓಕೆ. ಆದರೆ, ‘ಕಾಂತಾರ – ಚಾಪ್ಟರ್ 1’ ಚಿತ್ರವನ್ನು ಬಿಟ್ಟು ರಿಷಭ್ ಬರುತ್ತಾರಾ? ಎಂಬ ಪ್ರಶ್ನೆ ಎಲ್ಲರಲ್ಲೂ ಇದೆ. ಇದರ ಜೊತೆಗೆ ಗಣೇಶ್‍ ಅವರ ಹೆಸರು ಸಹ ಪ್ರಮುಖವಾಗಿ ಕೇಳಿಬರುತ್ತಿದೆ.

ನಿಜಕ್ಕೂ ಇವರಲ್ಲಿ ಯಾರಾದರೂ ಒಬ್ಬರು ನಡೆಸಿಕೊಡುತ್ತಾರಾ? ಅಥವಾ ಸುದೀಪ್‍ ಅವರೇ ಈ ಕಾರ್ಯಕ್ರಮವನ್ನು ಮುಂದುವರೆಸುತ್ತಾರಾ? ಎಂಬುದುನ್ನು ಇನ್ನಷ್ಟೇ ಕಾದು ನೋಡಬೇಕಿದೆ.

ಭೂಮಿಕಾ

Recent Posts

ಸಿದ್ದರಾಮಯ್ಯ ಆಪ್ತ ಕಾರ್ಯದರ್ಶಿ, ವಿಶೇಷ ಕರ್ತವ್ಯಾಧಿಕಾರಿಗಳ ವರ್ಗಾವಣೆ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ ಸಿದ್ದರಾಮಯ್ಯ ಅವರು ತಮ್ಮ ವಿದಾಯದ ಕೊನೇ ಕ್ಷಣದಲ್ಲೂ ಮಹತ್ವದ ಕ್ರಮ ಕೈಗೊಂಡಿದ್ದು,…

6 hours ago

ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು : ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ. ರಾಜ್ಯ ರಾಜಕಾರಣದಲ್ಲೇ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಿಎಂ…

9 hours ago

ಹೈಕಮಾಂಡ್‌ ಸೂಚನೆಯಂತೆ ರಾಜೀನಾಮೆ : ಸಿದ್ದರಾಮಯ್ಯ ಸುದ್ದಿಗೋಷ್ಠಿಯ ಹೈಲೆಟ್ಸ್‌

ಬೆಂಗಳೂರು : ಹೈಕಮಾಂಡ್‌ ಸೂಚನೆಯಂತೆ ನಾನು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ…

9 hours ago

ಯಾರೇ ಸಿಎಂ ಆದರೂ ಕರ್ನಾಟಕ ಅಭಿವೃದ್ಧಿಯಾಗಲ್ಲ: ವಿಜಯೇಂದ್ರ

ಕೊಪ್ಪಳ: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ವಿಚಾರ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ…

11 hours ago

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

12 hours ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

13 hours ago