ಬೆಂಗಳೂರು: ಇಂದು ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿರುವ ಬೆನ್ನಲ್ಲೇ ಪಂಚಭಾಷಾ ನಟ ಪ್ರಕಾಶ್ ರಾಜ್ ಅವರು ಇಂದು ಬೆಂಗಳೂರಿನಲ್ಲಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಬಳಿಕ ಇನ್ಸ್ಟಾ ಗ್ರಾಂ ನಲ್ಲಿ ಪೋಸ್ಟ್ ಒಂದನ್ನು ಮಾಡಿರುವ ನಟ, ಬಿಜೆಪಿ ಹೆಸರೇಳದೇ ಎನ್ಡಿಎ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ತಾವು ಮತದಾನ ಮಾಡಿರುವುದನ್ನು ಉಲ್ಲೇಖಿಸಿ ಮಾತನಾಡಿ, ಕಳೆದೊಂದು ದಶಕದಲ್ಲಿ ದ್ವೇಷ, ವಿಭಜಕ ರಾಜಕಾರಣವನ್ನು ಕಂಡಿದ್ದೇವೆ. ಇದನ್ನು ಕೊನೆಗಾಣಿಸಲು ನನ್ನ ಹಕ್ಕನ್ನು ಚಲಾಯಿಸಿದ್ದೇನೆ. ನನ್ನನ್ನು ಪ್ರತಿನಿಧಿಸುವವರಿಗೆ ನನ್ನ ಮತ, ಉತ್ತಮ ಅಭ್ಯರ್ಥಿ, ಉತ್ತಮ ಪ್ರಣಾಳಿಕೆಗೆ ನನ್ನ ಮತ ಹಾಕಿದ್ದೇಣೆ ಎಂದು ಹೇಳಿದ್ದಾರೆ.
ಒಂದು ಬದಲಾವಣೆಗಾಗಿ, ಪ್ರಜಾಪ್ರಭುತ್ವದ ಉಳಿವಿಗಾಗಿ ನನ್ನ ಮತ ನೀಡಿದ್ದೇನೆ. ನಮ್ಮಿಂದ ಚುನಾಯಿತರಾಗುವವರು ಸಂಸತ್ನಲ್ಲಿ ನಮ್ಮ ಧ್ವನಿಯಾಗಬೇಕು. ಹಾಗಾಗಿ ಎಲ್ಲರೂ ಉತ್ತಮ ಅಭ್ಯರ್ಥಿಗೆ ಮತ ಹಾಕಿ ಎಂದು ಪ್ರಕಾಶ್ ವೀಡಿಯೋ ಒಂದನ್ನು ಪೋಸ್ಟ್ ಮಾಡಿದ್ದಾರೆ.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…