ಅಕ್ಷಯ್ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್ ಅಭಿನಯದ ಇತ್ತೀಚಿನ ಚಿತ್ರಗಳಲ್ಲೇ ಈ ಚಿತ್ರ ಅತೀ ಕಡಿಮೆ ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಅಷ್ಟೇ ಅಲ್ಲ, ಫ್ಲಾಪ್ ಆಗುತ್ತಿರುವ ಅಕ್ಷಯ್ ಕುಮಾರ್ ಅಭಿನಯದ ಎಂಟನೇ ಚಿತ್ರ ಇದಾಗಿದ್ದು, ಎಂಟು ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಲುಗಳು ಹೊಸದಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್ ಕುಮಾರ್ ಸಾಲುಸಾಲು ಸೋಲುಗಳನ್ನು ನೋಡುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ಬಚ್ಚನ್ ಪಾಂಡೆ’ ಚಿತ್ರದಿಂದ ಅಕ್ಷಯ್ ಸೋಲಿನ ಸರಪಳಿ ಶುರುವಾಯಿತು. ನಂತರ ‘ಸಾಮ್ರಾಟ್ ಪೃಥ್ವಿರಾಜ್’, ‘ರಕ್ಷಾ ಬಂಧನ್’, ‘ಮಿಷನ್ ರಾಣಿಗಂಜ್’, ‘ರಾಮ್ಸೇತು’, ‘ಸೆಲ್ಫಿ’, ‘ಬಡೆ ಮಿಯಾ ಚೋಟೆ ಮಿಯಾ’ ಮತ್ತು ‘ಸರ್ಫಿರಾ’ ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆಯಂತೆ.
‘ಸರ್ಫಿರಾ’ ಚಿತ್ರವನ್ನೇ ತೆಗೆದುಕೊಂಡರೆ, ಈ ಚಿತ್ರದ ಮೊದಲ ದಿನದ ಗಳಿಕೆ ಕೇವಲ 2.40 ಕೋಟಿ ರೂ. ಅಷ್ಟಾಗಿತ್ತು. ‘ಸರ್ಫಿರಾ’ ಚಿತ್ರವು 80 ಕೋಟಿ ರೂ ಬಜೆಟ್ನಲ್ಲಿ ನಿರ್ಮಾನವಾದ ಚಿತ್ರವಾಗಿದ್ದು, ಮೊದಲ ದಿನ ಕೇವಲ 2.40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗೆ ಮುಂದುವರೆದರೆ, ಚಿತ್ರ 10 ಕೋಟಿ ರೂ. ಸಹ ಸಂಗ್ರಹಿಸುತ್ತದೋ, ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ, ಚಿತ್ರವು ಅಂತಿಮವಾಗಿ 29 ಕೋಟಿ ರೂ. ಸಂಗ್ರಹ ಮಾಡುವಲ್ಲಿ ಯಶಸ್ವಿಯಾಯಿತು. ಇದು ಜಾಗತಿಕ ಬಾಕ್ಸ್ ಆಫೀಸ್ನ ಲೆಕ್ಕಾಚಾರ ಎಂಬುದು ಗೊತ್ತಿರಲಿ. ಇದರಲ್ಲಿ ಕಳೆದ ನಿರ್ಮಾಪಕರಿಗೆ 15 ಕೋಟಿ ರೂ. ಸಿಕ್ಕರೆ ಅದೇ ಹೆಚ್ಚು.
‘ಸೂರರೈ ಪೊಟ್ರು’ ಚಿತ್ರವನ್ನು ನಿರ್ದೇಶಿಸಿದ್ದ ಸುಧಾ ಕೊಂಗರಾ ಅವರೇ ‘ಸರ್ಫಿರಾ’ ಚಿತ್ರವನ್ನು ನಿರ್ದೇಶಿಸಿದ್ದರು. ಅರುಣ್ ಭಾಟಿಯಾ, ಸೂರ್ಯ, ಜ್ಯೋತಿಕಾ ಮುಂತಾದವರು ಚಿತ್ರವನ್ನು ನಿರ್ಮಿಸಿದ್ದಾರೆ. ಅಕ್ಷಯ್ ಕುಮಾರ್ ಒಡೆತನದ ಕೇಪ್ ಆಫ್ ಗುಡ್ ಫಿಲಂಸ್ ಸಹ ಈ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ.
ರಾಮನಗರ: ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿ ಕೆಲಕಾಲ ಆತಂಕ ಸೃಷ್ಟಿಯಾಗಿರುವ ಘಟನೆ ಮದ್ದೂರು-ಚನ್ನಪಟ್ಟಣ ಮಾರ್ಗಮಧ್ಯೆಯ ಶೆಟ್ಟಿಹಳ್ಳಿ ರೈಲ್ವೆ…
ಚನ್ನೈ: ತಮಿಳುನಾಡಿನ ಜನರ ಕಲ್ಯಾಣಕ್ಕಾಗಿ, ಬಿಜೆಪಿ ಮಹಿಳಾ ಮನೆ ಮುಖ್ಯಸ್ಥರಿಗೆ ತಿಂಗಳಿಗೆ 2,000 ರೂ., ವಾರ್ಷಿಕವಾಗಿ ಮೂರು ಉಚಿತ ಎಲ್ಪಿಜಿ…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಇಂದು ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು 135ನೇ ಜಯಂತಿಯನ್ನು ವಿನೂತನ ರೀತಿಯಲ್ಲಿ ಆಚರಣೆ ಮಾಡಲಾಯಿತು.…
ಮಂಡ್ಯ: ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ 100 ಕೋಟಿಗೂ ಅಧಿಕ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಶ್ರೀಗುರು ಭೈರವೈಕ್ಯ ಮಂದಿರ ನಾಳೆ ಲೋಕಾರ್ಪಣೆಗೆ ಸಜ್ಜಾಗಿದೆ. ಪ್ರಧಾನಿ…
ನವದೆಹಲಿ: ದೇಶಾದ್ಯಂತ ರಣ ಬಿಸಿಲ ಝಳ ಹೆಚ್ಚುತ್ತಿದ್ದು, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಒಂದು ವಾರಗಳ ಕಾಲ ತಾಪಮಾನ ಹೆಚ್ಚಾಗಲಿದೆ…
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…