ಮನರಂಜನೆ

ಅಕ್ಷಯ್‍ ಅಭಿನಯದ ಎಂಟು ಚಿತ್ರಗಳಿಂದ 1000 ಕೋಟಿ ನಷ್ಟ!

ಅಕ್ಷಯ್‍ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್‍ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್‍ ಅಭಿನಯದ ಇತ್ತೀಚಿನ ಚಿತ್ರಗಳಲ್ಲೇ ಈ ಚಿತ್ರ ಅತೀ ಕಡಿಮೆ ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅಷ್ಟೇ ಅಲ್ಲ, ಫ್ಲಾಪ್‍ ಆಗುತ್ತಿರುವ ಅಕ್ಷಯ್‍ ಕುಮಾರ್‍ ಅಭಿನಯದ ಎಂಟನೇ ಚಿತ್ರ ಇದಾಗಿದ್ದು, ಎಂಟು ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಅಕ್ಷಯ್‍ ಕುಮಾರ್ ಅವರಿಗೆ ಸೋಲುಗಳು ಹೊಸದಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್ ಕುಮಾರ್‍ ಸಾಲುಸಾಲು ಸೋಲುಗಳನ್ನು ನೋಡುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ಬಚ್ಚನ್ ಪಾಂಡೆ’ ಚಿತ್ರದಿಂದ ಅಕ್ಷಯ್‍ ಸೋಲಿನ ಸರಪಳಿ ಶುರುವಾಯಿತು. ನಂತರ ‘ಸಾಮ್ರಾಟ್‍ ಪೃಥ್ವಿರಾಜ್‍’, ‘ರಕ್ಷಾ ಬಂಧನ್‍’, ‘ಮಿಷನ್‍ ರಾಣಿಗಂಜ್‍’, ‘ರಾಮ್‍ಸೇತು’, ‘ಸೆಲ್ಫಿ’, ‘ಬಡೆ ಮಿಯಾ ಚೋಟೆ ಮಿಯಾ’ ಮತ್ತು ‘ಸರ್ಫಿರಾ’ ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆಯಂತೆ.

‘ಸರ್ಫಿರಾ’ ಚಿತ್ರವನ್ನೇ ತೆಗೆದುಕೊಂಡರೆ, ಈ ಚಿತ್ರದ ಮೊದಲ ದಿನದ ಗಳಿಕೆ ಕೇವಲ 2.40 ಕೋಟಿ ರೂ. ಅಷ್ಟಾಗಿತ್ತು. ‘ಸರ್ಫಿರಾ’ ಚಿತ್ರವು 80 ಕೋಟಿ ರೂ ಬಜೆಟ್‍ನಲ್ಲಿ ನಿರ್ಮಾನವಾದ ಚಿತ್ರವಾಗಿದ್ದು, ಮೊದಲ ದಿನ ಕೇವಲ 2.40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗೆ ಮುಂದುವರೆದರೆ, ಚಿತ್ರ 10 ಕೋಟಿ ರೂ. ಸಹ ಸಂಗ್ರಹಿಸುತ್ತದೋ, ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ, ಚಿತ್ರವು ಅಂತಿಮವಾಗಿ 29 ಕೋಟಿ ರೂ. ಸಂಗ್ರಹ ಮಾಡುವಲ್ಲಿ ಯಶಸ್ವಿಯಾಯಿತು. ಇದು ಜಾಗತಿಕ ಬಾಕ್ಸ್ ಆಫೀಸ್‍ನ ಲೆಕ್ಕಾಚಾರ ಎಂಬುದು ಗೊತ್ತಿರಲಿ. ಇದರಲ್ಲಿ ಕಳೆದ ನಿರ್ಮಾಪಕರಿಗೆ 15 ಕೋಟಿ ರೂ. ಸಿಕ್ಕರೆ ಅದೇ ಹೆಚ್ಚು.

‘ಸೂರರೈ ಪೊಟ್ರು’ ಚಿತ್ರವನ್ನು ನಿರ್ದೇಶಿಸಿದ್ದ ಸುಧಾ ಕೊಂಗರಾ ಅವರೇ ‘ಸರ್ಫಿರಾ’ ಚಿತ್ರವನ್ನು ನಿರ್ದೇಶಿಸಿದ್ದರು. ಅರುಣ್‍ ಭಾಟಿಯಾ, ಸೂರ್ಯ, ಜ್ಯೋತಿಕಾ ಮುಂತಾದವರು ಚಿತ್ರವನ್ನು ನಿರ್ಮಿಸಿದ್ದಾರೆ. ಅಕ್ಷಯ್‍ ಕುಮಾರ್‍ ಒಡೆತನದ ಕೇಪ್‍ ಆಫ್‍ ಗುಡ್‍ ಫಿಲಂಸ್‍ ಸಹ ಈ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ.

ಭೂಮಿಕಾ

Recent Posts

ಅಶ್ಲೀಲ ಮೆಸೇಜ್:‌ ಪೊಲೀಸ್‌ ಕಮಿಷನರ್‌ಗೆ ದೂರು ನೀಡಿದ ದರ್ಶನ್‌ ಪತ್ನಿ ವಿಜಯಲಕ್ಷ್ಮೀ

ಬೆಂಗಳೂರು: ನಟ ದರ್ಶನ್‌ ಹಾಗೂ ನಟ ಕಿಚ್ಚ ಸುದೀಪ್‌ ಫ್ಯಾನ್ಸ್‌ ವಾರ್‌ ತಾರಕಕ್ಕೇರಿರುವ ಮಧ್ಯೆ ಸೋಷಿಯಲ್‌ ಮೀಡಿಯಾದಲ್ಲಿ ಅಶ್ಲೀಲ ಮೆಸೇಜ್‌…

23 mins ago

ಸರ್ಫರಾಜ್‌ ಮನೆ ಮೇಲೆ ಲೋಕಾಯುಕ್ತ ದಾಳಿ ವಿಚಾರ: ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ಪ್ರತಿಕ್ರಿಯೆ

ಮೈಸೂರು:  ಸಚಿವ ಜಮೀರ್ ಅಹ್ಮದ್ ಖಾನ್ ಅವರ ಆಪ್ತ ಸಹಾಯಕ ಸರ್ಫರಾಜ್ ಅವರ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿರುವ…

34 mins ago

ಮುಂದಿನ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್‌ ಪಕ್ಷವನ್ನು ಹೊರಗೆ ಕಳಿಸೋದು ಗ್ಯಾರಂಟಿ: ಆರ್.‌ಅಶೋಕ್‌

ಬೆಂಗಳೂರು: ತನ್ನ ಆಂತರಿಕ ಕಚ್ಚಾಟದಿಂದ ಆಡಳಿತಾರೂಢ ಕಾಂಗ್ರೆಸ್ ಪಕ್ಷ ಹೊರ ಬರದಿದ್ದರೆ, ಮುಂದಿನ ವಿಧಾನಸಭೆ ಚುನಾಣೆಯಲ್ಲಿ ರಾಜ್ಯದ ಜನತೆ ಇವರನ್ನು…

51 mins ago

ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಡಾ. ಶಾಮನೂರು ಶಿವಶಂಕಪ್ಪಗೆ ನುಡಿ ನಮನ

ಬೆಂಗಳೂರು: ಬೆಂಗಳೂರಿನಲ್ಲಿ 1000 ವಿದ್ಯಾರ್ಥಿನಿಯರಿಗೆ ಹಾಸ್ಟೆಲ್ ನಿರ್ಮಿಸಬೇಕು ಎಂಬುದು ಡಾ. ಶಾಮನೂರು ಶಿವಶಂಕರಪ್ಪ ಆಶಯವಾಗಿತ್ತು, ಈ ಕನಸು ನನಸು ಮಾಡಲು…

1 hour ago

ನಾನು ಪಕ್ಷದ ಕಾರ್ಯಕರ್ತನಾಗಿಯೇ ಇರುತ್ತೇನೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ನವದೆಹಲಿ: ಪವರ್‌ ಶೇರಿಂಗ್‌ ವಿಚಾರದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ವೈರಾಗ್ಯದ ಮಾತನ್ನು ಆಡಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ…

1 hour ago

ಡೆವಿಲ್‌ಗೆ ಪೈರಸಿ ಕಾಟ: 10,500ಕ್ಕೂ ಹೆಚ್ಚು ಪೈರಸಿ ಲಿಂಕ್‌ ಡಿಲಿಟ್‌ ಮಾಡಿದ ಚಿತ್ರತಂಡ

ಬೆಂಗಳೂರು: ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಅಭಿನಯದ ಡೆವಿಲ್‌ ಚಿತ್ರ ಬಿಡುಗಡೆಯಾಗಿ 14 ದಿನಗಳು ಕಳೆದಿದ್ದು, ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ಯಶಸ್ವಿ ಪ್ರದರ್ಶನ…

2 hours ago