ಅಕ್ಷಯ್ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್ ಅಭಿನಯದ ಇತ್ತೀಚಿನ ಚಿತ್ರಗಳಲ್ಲೇ ಈ ಚಿತ್ರ ಅತೀ ಕಡಿಮೆ ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
ಅಷ್ಟೇ ಅಲ್ಲ, ಫ್ಲಾಪ್ ಆಗುತ್ತಿರುವ ಅಕ್ಷಯ್ ಕುಮಾರ್ ಅಭಿನಯದ ಎಂಟನೇ ಚಿತ್ರ ಇದಾಗಿದ್ದು, ಎಂಟು ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.
ಅಕ್ಷಯ್ ಕುಮಾರ್ ಅವರಿಗೆ ಸೋಲುಗಳು ಹೊಸದಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್ ಕುಮಾರ್ ಸಾಲುಸಾಲು ಸೋಲುಗಳನ್ನು ನೋಡುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ಬಚ್ಚನ್ ಪಾಂಡೆ’ ಚಿತ್ರದಿಂದ ಅಕ್ಷಯ್ ಸೋಲಿನ ಸರಪಳಿ ಶುರುವಾಯಿತು. ನಂತರ ‘ಸಾಮ್ರಾಟ್ ಪೃಥ್ವಿರಾಜ್’, ‘ರಕ್ಷಾ ಬಂಧನ್’, ‘ಮಿಷನ್ ರಾಣಿಗಂಜ್’, ‘ರಾಮ್ಸೇತು’, ‘ಸೆಲ್ಫಿ’, ‘ಬಡೆ ಮಿಯಾ ಚೋಟೆ ಮಿಯಾ’ ಮತ್ತು ‘ಸರ್ಫಿರಾ’ ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆಯಂತೆ.
‘ಸರ್ಫಿರಾ’ ಚಿತ್ರವನ್ನೇ ತೆಗೆದುಕೊಂಡರೆ, ಈ ಚಿತ್ರದ ಮೊದಲ ದಿನದ ಗಳಿಕೆ ಕೇವಲ 2.40 ಕೋಟಿ ರೂ. ಅಷ್ಟಾಗಿತ್ತು. ‘ಸರ್ಫಿರಾ’ ಚಿತ್ರವು 80 ಕೋಟಿ ರೂ ಬಜೆಟ್ನಲ್ಲಿ ನಿರ್ಮಾನವಾದ ಚಿತ್ರವಾಗಿದ್ದು, ಮೊದಲ ದಿನ ಕೇವಲ 2.40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗೆ ಮುಂದುವರೆದರೆ, ಚಿತ್ರ 10 ಕೋಟಿ ರೂ. ಸಹ ಸಂಗ್ರಹಿಸುತ್ತದೋ, ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ, ಚಿತ್ರವು ಅಂತಿಮವಾಗಿ 29 ಕೋಟಿ ರೂ. ಸಂಗ್ರಹ ಮಾಡುವಲ್ಲಿ ಯಶಸ್ವಿಯಾಯಿತು. ಇದು ಜಾಗತಿಕ ಬಾಕ್ಸ್ ಆಫೀಸ್ನ ಲೆಕ್ಕಾಚಾರ ಎಂಬುದು ಗೊತ್ತಿರಲಿ. ಇದರಲ್ಲಿ ಕಳೆದ ನಿರ್ಮಾಪಕರಿಗೆ 15 ಕೋಟಿ ರೂ. ಸಿಕ್ಕರೆ ಅದೇ ಹೆಚ್ಚು.
‘ಸೂರರೈ ಪೊಟ್ರು’ ಚಿತ್ರವನ್ನು ನಿರ್ದೇಶಿಸಿದ್ದ ಸುಧಾ ಕೊಂಗರಾ ಅವರೇ ‘ಸರ್ಫಿರಾ’ ಚಿತ್ರವನ್ನು ನಿರ್ದೇಶಿಸಿದ್ದರು. ಅರುಣ್ ಭಾಟಿಯಾ, ಸೂರ್ಯ, ಜ್ಯೋತಿಕಾ ಮುಂತಾದವರು ಚಿತ್ರವನ್ನು ನಿರ್ಮಿಸಿದ್ದಾರೆ. ಅಕ್ಷಯ್ ಕುಮಾರ್ ಒಡೆತನದ ಕೇಪ್ ಆಫ್ ಗುಡ್ ಫಿಲಂಸ್ ಸಹ ಈ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ.
ಮೈಸೂರು: ಫಲವತ್ತಾದ ಕೃಷಿ ಭೂಮಿಯನ್ನು ಉಳಿಸಿಕೊಳ್ಳುವ ಆಕಾಂಕ್ಷೆ ಪ್ರಭುತ್ವಕ್ಕೆ ಇರಬೇಕು. ಭೂಮಿ ನೀಡುವ ರೈತರ ಬದುಕಿನ ಹೊಣೆಗಾರಿಕೆಯನ್ನು ಸರ್ಕಾರ ವಹಿಸಿಕೊಳ್ಳುತ್ತದೆಯೇ…
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…