ಮನರಂಜನೆ

ಅಕ್ಷಯ್‍ ಅಭಿನಯದ ಎಂಟು ಚಿತ್ರಗಳಿಂದ 1000 ಕೋಟಿ ನಷ್ಟ!

ಅಕ್ಷಯ್‍ ಕುಮಾರ್ ಅಭಿನಯದ ‘ಸರ್ಫಿರಾ’ ಚಿತ್ರವು ಕೆಲವು ವಾರಗಳ ಹಿಂದೆ ಬಿಡುಗಡೆಯಾಗಿತ್ತು. ತಮಿಳಿನ ಸೂರ್ಯ ಅಭಿನಯದ ‘ಸೂರರೈ ಪೊಟ್ರು’ ಚಿತ್ರದ ರೀಮೇಕ್‍ ಆಗಿದ್ದ ‘ಸರ್ಫಿರಾ’, ಒಟ್ಟಾರೆ ಗಳಿಕೆ ಮಾಡಿದ್ದು ಎಷ್ಟು ಗೊತ್ತಾ? 24 ಕೋಟಿ ರೂ. ಮಾತ್ರ. ಅಕ್ಷಯ್‍ ಅಭಿನಯದ ಇತ್ತೀಚಿನ ಚಿತ್ರಗಳಲ್ಲೇ ಈ ಚಿತ್ರ ಅತೀ ಕಡಿಮೆ ಗಳಿಕೆ ಮಾಡಿದ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಅಷ್ಟೇ ಅಲ್ಲ, ಫ್ಲಾಪ್‍ ಆಗುತ್ತಿರುವ ಅಕ್ಷಯ್‍ ಕುಮಾರ್‍ ಅಭಿನಯದ ಎಂಟನೇ ಚಿತ್ರ ಇದಾಗಿದ್ದು, ಎಂಟು ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆ ಎಂದು ಹೇಳಲಾಗುತ್ತಿದೆ.

ಅಕ್ಷಯ್‍ ಕುಮಾರ್ ಅವರಿಗೆ ಸೋಲುಗಳು ಹೊಸದಲ್ಲ. ಆದರೆ, ಇತ್ತೀಚಿನ ವರ್ಷಗಳಲ್ಲಿ ಅಕ್ಷಯ್ ಕುಮಾರ್‍ ಸಾಲುಸಾಲು ಸೋಲುಗಳನ್ನು ನೋಡುತ್ತಿದ್ದಾರೆ. ಎರಡು ವರ್ಷಗಳ ಹಿಂದೆ ಬಿಡುಗಡೆಯಾದ ‘ಬಚ್ಚನ್ ಪಾಂಡೆ’ ಚಿತ್ರದಿಂದ ಅಕ್ಷಯ್‍ ಸೋಲಿನ ಸರಪಳಿ ಶುರುವಾಯಿತು. ನಂತರ ‘ಸಾಮ್ರಾಟ್‍ ಪೃಥ್ವಿರಾಜ್‍’, ‘ರಕ್ಷಾ ಬಂಧನ್‍’, ‘ಮಿಷನ್‍ ರಾಣಿಗಂಜ್‍’, ‘ರಾಮ್‍ಸೇತು’, ‘ಸೆಲ್ಫಿ’, ‘ಬಡೆ ಮಿಯಾ ಚೋಟೆ ಮಿಯಾ’ ಮತ್ತು ‘ಸರ್ಫಿರಾ’ ಚಿತ್ರಗಳಿಂದ ನಿರ್ಮಾಪಕರಿಗೆ ಒಟ್ಟು ಸಾವಿರ ಕೋಟಿ ನಷ್ಟವಾಗಿದೆಯಂತೆ.

‘ಸರ್ಫಿರಾ’ ಚಿತ್ರವನ್ನೇ ತೆಗೆದುಕೊಂಡರೆ, ಈ ಚಿತ್ರದ ಮೊದಲ ದಿನದ ಗಳಿಕೆ ಕೇವಲ 2.40 ಕೋಟಿ ರೂ. ಅಷ್ಟಾಗಿತ್ತು. ‘ಸರ್ಫಿರಾ’ ಚಿತ್ರವು 80 ಕೋಟಿ ರೂ ಬಜೆಟ್‍ನಲ್ಲಿ ನಿರ್ಮಾನವಾದ ಚಿತ್ರವಾಗಿದ್ದು, ಮೊದಲ ದಿನ ಕೇವಲ 2.40 ಕೋಟಿ ರೂ. ಗಳಿಸುವಲ್ಲಿ ಯಶಸ್ವಿಯಾಗಿದೆ. ಹೀಗೆ ಮುಂದುವರೆದರೆ, ಚಿತ್ರ 10 ಕೋಟಿ ರೂ. ಸಹ ಸಂಗ್ರಹಿಸುತ್ತದೋ, ಇಲ್ಲವೋ ಎಂಬ ಅನುಮಾನ ವ್ಯಕ್ತವಾಗಿತ್ತು. ಆದರೆ, ಚಿತ್ರವು ಅಂತಿಮವಾಗಿ 29 ಕೋಟಿ ರೂ. ಸಂಗ್ರಹ ಮಾಡುವಲ್ಲಿ ಯಶಸ್ವಿಯಾಯಿತು. ಇದು ಜಾಗತಿಕ ಬಾಕ್ಸ್ ಆಫೀಸ್‍ನ ಲೆಕ್ಕಾಚಾರ ಎಂಬುದು ಗೊತ್ತಿರಲಿ. ಇದರಲ್ಲಿ ಕಳೆದ ನಿರ್ಮಾಪಕರಿಗೆ 15 ಕೋಟಿ ರೂ. ಸಿಕ್ಕರೆ ಅದೇ ಹೆಚ್ಚು.

‘ಸೂರರೈ ಪೊಟ್ರು’ ಚಿತ್ರವನ್ನು ನಿರ್ದೇಶಿಸಿದ್ದ ಸುಧಾ ಕೊಂಗರಾ ಅವರೇ ‘ಸರ್ಫಿರಾ’ ಚಿತ್ರವನ್ನು ನಿರ್ದೇಶಿಸಿದ್ದರು. ಅರುಣ್‍ ಭಾಟಿಯಾ, ಸೂರ್ಯ, ಜ್ಯೋತಿಕಾ ಮುಂತಾದವರು ಚಿತ್ರವನ್ನು ನಿರ್ಮಿಸಿದ್ದಾರೆ. ಅಕ್ಷಯ್‍ ಕುಮಾರ್‍ ಒಡೆತನದ ಕೇಪ್‍ ಆಫ್‍ ಗುಡ್‍ ಫಿಲಂಸ್‍ ಸಹ ಈ ಚಿತ್ರದ ನಿರ್ಮಾಣದಲ್ಲಿ ತೊಡಗಿಸಿಕೊಂಡಿದೆ.

ಭೂಮಿಕಾ

Recent Posts

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

1 hour ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

1 hour ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

1 hour ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

3 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

4 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

5 hours ago