ಮನರಂಜನೆ

ಜಿಂಗುಚ್ಚಾ …’ ಎಂದು ಕುಣಿದ ಕಮಲ್‍ ಮತ್ತು ಸಿಂಬು; ʼಥಗ್‌ ಲೈಫ್‌ʼ ಚಿತ್ರದ ಮೊದಲ ಹಾಡು ಬಿಡುಗಡೆ

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಮೂರು ದಶಕದ ನಂತರ ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಥಗ್‌ ಲೈಫ್’.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.

‘ಥಗ್‌ ಲೈಫ್‌’ ಚಿತ್ರದ ‘ಜಿಂಗುಚ್ಚಾ …’ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಬರೆದಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‍ನ್ಯಾಷನಲ್‍, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಕಮಲ್ ಹಾಸನ್, ಸಿಲಂಬರಸನ್‍, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ, ನಾಸರ್‍ ಮುಂತಾದವರು ನಟಿಸಿರುವ ಈ ಚಿತ್ರದ ಕಥೆ-ಚಿತ್ರಕಥೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೃಷಿ ಕ್ಷೇತ್ರ ಅಭಿವೃದ್ಧಿ ಅಪರಿಮಿತ ಸಾಧನೆ : ಸಚಿವ ಎನ್ ಚಲುವರಾಯಸ್ವಾಮಿ

ಬೆಂಗಳೂರು : ಕೃಷಿ ಕ್ಷೇತ್ರದ ಅಭಿವೃದ್ಧಿ-ರೈತರ ಕಲ್ಯಾಣದಲ್ಲಿ ಕರ್ನಾಟಕ ದೇಶದಲ್ಲೆ ಅತಿ ಹೆಚ್ಚಿನ ಸಾಧನೆ ಮಾಡಿದ ರಾಜ್ಯವಾಗಿದ್ದು, ಬೆಳೆ ವಿಮೆಯಲ್ಲಿ…

1 hour ago

ವಿದೇಶಿ ಉದ್ಯೋಗ ಆಮಿಷ : ವಿದ್ಯಾರ್ಥಿಗೆ 1.80 ಕೋಟಿ ವಂಚನೆ!

ಮೈಸೂರು : ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇನೆ ಎಂದು ನಂಬಿಸಿ ಕೆರಳ ಮೂಲದ ಇಬ್ಬರು ದುಷ್ಕರ್ಮಿಗಳು ನಗರದ ವಿದ್ಯಾರ್ಥಿಯೋರ್ವನಿಗೆ 1.80 ಕೋಟಿ…

2 hours ago

ಟಿ20 ವಿಶ್ವಕಪ್ 2026 : ಕಣದಲ್ಲಿವೆ 20 ತಂಡಗಳು

ಕೊಲಂಬೊ : ಐಸಿಸಿ ಪುರುಷರ ಟಿ20 ವಿಶ್ವಕಪ್ 2026ರ ಹತ್ತನೇ ಆವೃತ್ತಿ ನಾಳೆ (ಫೆಬ್ರವರಿ 7) ಭಾರತ ಮತ್ತು ಶ್ರೀಲಂಕಾ…

2 hours ago

ಅರಣ್ಯ ಭೂಮಿಯಲ್ಲಿ ನಿಯಮ ಬಾಹಿರ ರೆಸಾರ್ಟ್ ನಿರ್ಮಿಸಿದರೆ ನಿರ್ದಾಕ್ಷಿಣ್ಯ ಕ್ರಮ : ನಿತೇಶ್‌ ಪಾಟೀಲ್‌ ಎಚ್ಚರಿಕೆ

ಚಾಮರಾಜನಗರ : ಅರಣ್ಯ ಭೂಮಿಯಲ್ಲಿ ನಿಯಮಬಾಹಿರವಾಗಿ ರೆಸಾರ್ಟ್, ಹೋಂ ಸ್ಟೇ, ವಾಣಿಜ್ಯ ಚಟುವಟಿಕೆಗಳು ನಡೆಯುತ್ತಿದ್ದರೆ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು…

3 hours ago

ಉದ್ಯಮಿ ಅರವಿಂದ್‌ ರೆಡ್ಡಿಗೆ ಕೊಲೆ ಬೆದರಿಕೆ ; ಆರೋಪಿ ಬಂಧನ

ಬೆಂಗಳೂರು : ವಿಆರ್ ಗ್ರೂಪ್‌ನ ಸಂಸ್ಥಾಪಕ ಹಾಗೂ ರಿಯಲ್ ಎಸ್ಟೇಟ್ ಉದ್ಯಮಿ ಅರವಿಂದ್ ವೆಂಕಟೇಶ್ ರೆಡ್ಡಿ ಅವರಿಗೆ ಕೊಲೆ ಬೆದರಿಕೆ…

3 hours ago

ಯತೀಂದ್ರ ನಮ್ಮ ಹೈಕಮಾಂಡ್‌, ಅವರು ಹೇಳಿದ ಮೇಲೆ ಇನ್ನೇನಿದೆ : ಡಿಸಿಎಂ ಡಿಕೆಶಿ

ಮಂಗಳೂರು : ಯತೀಂದ್ರ ಸಿದ್ದರಾಮಯ್ಯ ಅವರೇ ಈಗ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಈ ಬಗ್ಗೆ ನನಗೆ…

4 hours ago