ಮನರಂಜನೆ

ಜಿಂಗುಚ್ಚಾ …’ ಎಂದು ಕುಣಿದ ಕಮಲ್‍ ಮತ್ತು ಸಿಂಬು; ʼಥಗ್‌ ಲೈಫ್‌ʼ ಚಿತ್ರದ ಮೊದಲ ಹಾಡು ಬಿಡುಗಡೆ

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಮೂರು ದಶಕದ ನಂತರ ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಥಗ್‌ ಲೈಫ್’.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.

‘ಥಗ್‌ ಲೈಫ್‌’ ಚಿತ್ರದ ‘ಜಿಂಗುಚ್ಚಾ …’ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಬರೆದಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‍ನ್ಯಾಷನಲ್‍, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಕಮಲ್ ಹಾಸನ್, ಸಿಲಂಬರಸನ್‍, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ, ನಾಸರ್‍ ಮುಂತಾದವರು ನಟಿಸಿರುವ ಈ ಚಿತ್ರದ ಕಥೆ-ಚಿತ್ರಕಥೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರಲ್ಲಿ ಸಂಭ್ರಮದ ಹನುಮೋತ್ಸವ ; ಮೆರವಣಿಗೆಯಲ್ಲಿ ಸಾಗಿದ ಅತ್ಯಾಕರ್ಷಕ ಹನುಮಮೂರ್ತಿಗಳು

ಮೈಸೂರು : ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಹನುಮ ಜಯಂತ್ಯೋತ್ಸವ ಸಮಿತಿ ವತಿಯಿಂದ ಶನಿವಾರ ನಡೆದ ಏಳನೇ ವರ್ಷದ ಹನುಮೋತ್ಸವ ಮೆರವಣಿಗೆಯು…

56 mins ago

ಫೇಸ್‌ಬುಕ್‌ ಕಹಾನಿ | ಪ್ರೀತಿ ಹರಸಿ ಬಂದವನಿಗೆ ಹನಿಟ್ರ್ಯಾಪ್‌ ಗಾಳದ ಶಂಕೆ ; ಹಣಕ್ಕೆ ಡಿಮ್ಯಾಂಡ್‌….

ಮನೆಯಲ್ಲಿ ರಾತ್ರಿಯಿಡೀ ಕೂಡಿಹಾಕಿ ಹಲ್ಲೆ ನಡೆಸಿದ ಮೂವರು ಆರೋಪಿಗಳು; ಹನಿಟ್ರ್ಯಾಪ್ ಶಂಕೆ, ತನಿಖೆ ಚುರುಕು ಮಡಿಕೇರಿ : ಸಾಮಾಜಿಕ ಜಾಲತಾಣದಲ್ಲಿ…

1 hour ago

ಯುನಿಟಿ ಮಾಲ್‌ ನಿರ್ಮಾಣಕ್ಕೆ ವಿರೋಧ ಇಲ್ಲ : ಸಂಸದ ಯದುವೀರ್‌

ಮೈಸೂರು : ನಗರದಲ್ಲಿ ಯುನಿಟಿ ಮಾಲ್ ನಿರ್ಮಿಸಲು ನಮ್ಮ ವಿರೋಧ ಇಲ್ಲ. ಆದರೆ, ಸರ್ಕಾರ ಗೊಂದಲವಿಲ್ಲದ ಸ್ಥಳ ನೀಡದೆ ದಿಕ್ಕು…

2 hours ago

ಮೈಸೂರಲ್ಲಿ ಎರಡು ದಿನ ಮಾಗಿ ಸಂಭ್ರಮ : ಅವರೆಕಾಯಿ ಸೊಗಡು ಜೋರು…

ಮೈಸೂರು : ಚುಮು ಚುಮು ಚಳಿಯ ನಡುವೆ ನಗರದ ನಂಜರಾಜ ಬಹದ್ದೂರ್ ಛತ್ರದಲ್ಲಿ ಗ್ರಾಹಕರ ಆಕರ್ಷಿಸುವ ಹಾಗೂ ಗ್ರಾಮೀಣ ಸೊಗಡಿನ…

2 hours ago

ಡಿ.16 ರಂದು ಮಳವಳ್ಳಿಗೆ ರಾಷ್ಟ್ರಪತಿ ಆಗಮನ : ಭದ್ರತಾ ವ್ಯವಸ್ಥೆ ಪರಿಶೀಲನೆ

ಮಂಡ್ಯ : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

2 hours ago

ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ : ಗ್ರಾ.ಪಂ ಮಾಜಿ ಅಧ್ಯಕ್ಷನ ವಿರುದ್ಧ ದೂರು

ಸಿದ್ದಾಪುರ : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಗ್ರಾ.ಪಂ. ಮಾಜಿ ಅಧ್ಯಕ್ಷನ ವಿರುದ್ಧ ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ…

2 hours ago