ಮನರಂಜನೆ

ಜಿಂಗುಚ್ಚಾ …’ ಎಂದು ಕುಣಿದ ಕಮಲ್‍ ಮತ್ತು ಸಿಂಬು; ʼಥಗ್‌ ಲೈಫ್‌ʼ ಚಿತ್ರದ ಮೊದಲ ಹಾಡು ಬಿಡುಗಡೆ

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಮೂರು ದಶಕದ ನಂತರ ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಥಗ್‌ ಲೈಫ್’.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.

‘ಥಗ್‌ ಲೈಫ್‌’ ಚಿತ್ರದ ‘ಜಿಂಗುಚ್ಚಾ …’ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಬರೆದಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‍ನ್ಯಾಷನಲ್‍, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಕಮಲ್ ಹಾಸನ್, ಸಿಲಂಬರಸನ್‍, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ, ನಾಸರ್‍ ಮುಂತಾದವರು ನಟಿಸಿರುವ ಈ ಚಿತ್ರದ ಕಥೆ-ಚಿತ್ರಕಥೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

5 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

5 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

6 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

7 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

7 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

7 hours ago