ಮನರಂಜನೆ

ಜಿಂಗುಚ್ಚಾ …’ ಎಂದು ಕುಣಿದ ಕಮಲ್‍ ಮತ್ತು ಸಿಂಬು; ʼಥಗ್‌ ಲೈಫ್‌ʼ ಚಿತ್ರದ ಮೊದಲ ಹಾಡು ಬಿಡುಗಡೆ

ಕಮಲ್‍ ಹಾಸನ್‍ ಅಭಿನಯದ ‘ಇಂಡಿಯನ್‍ 3’ ಚಿತ್ರವು 2025ರಲ್ಲಿ ಬಿಡುಗಡೆಯಾಗಲಿದೆ ಎಂದು ಹೇಳಲಾಗಿತ್ತು. ಆದರೆ, ಚಿತ್ರದ ಸುದ್ದಿಯೇ ಇಲ್ಲ. ಈಗ ಅವರ ‘ಥಗ್‍ ಲೈಫ್‍’ ಎಂಬ ಇನ್ನೊಂದು ಚಿತ್ರ ಜೂನ್‍ 05ರಂದು ಬಿಡುಗಡೆಯಾಗುವುದಕ್ಕೆ ಸಜ್ಜಾಗಿದ್ದು, ಅದಕ್ಕೂ ಮೊದಲು ಈ ಚಿತ್ರದ ಮೊದಲ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ.

ಮೂರು ದಶಕದ ನಂತರ ಕಮಲ್ ಹಾಸನ್ – ಮಣಿರತ್ನಂ ಕಾಂಬಿನೇಷನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಥಗ್‌ ಲೈಫ್’.‌ ಈ ಚಿತ್ರದ ಮೊದಲ ಹಾಡು ಬಿಡುಗಡೆ ಕಾರ್ಯಕ್ರಮ ಇತ್ತೀಚೆಗೆ ಚೆನ್ನೈನಲ್ಲಿ ನಡೆಯಿತು. ಈ ಕಾರ್ಯಕ್ರಮದಲ್ಲಿ ಕಮಲ್ ಹಾಸನ್, ಸಿಂಬು, ಮಣಿರತ್ನಂ, ಅಭಿರಾಮಿ, ಅಶೋಕ್ ಸೆಲ್ವನ್, ತ್ರಿಷಾ ಸೇರಿದಂತೆ ಚಿತ್ರರಂಗದ ಹಲವು ತಾರೆಯರು ಭಾಗವಹಿಸಿದ್ದರು.

‘ಥಗ್‌ ಲೈಫ್‌’ ಚಿತ್ರದ ‘ಜಿಂಗುಚ್ಚಾ …’ ಬಿಡುಗಡೆ ಆಗಿದ್ದು, ಹಾಡಿನಲ್ಲಿ ಕಮಲ್, ಸಿಂಬು ಕಾಣಿಸಿಕೊಂಡಿದ್ದಾರೆ. ಈ ಹಾಡನ್ನು ಮದುವೆ ಸಮಾರಂಭದ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ. ವಿಶೇಷ ಅಂದರೆ ಈ ಹಾಡಿಗೆ ಸ್ವತಃ ಕಮಲ್‌ ಹಾಸನ್‌ ಸಾಹಿತ್ಯ ಬರೆದಿದ್ದಾರೆ. ಎ.ಆರ್. ರೆಹಮಾನ್ ಸಂಗೀತ ಸಂಯೋಜಿಸಿದ್ದಾರೆ.

ರಾಜ್ ಕಮಲ್ ಫಿಲ್ಮ್ಸ್ ಇಂಟರ್‍ನ್ಯಾಷನಲ್‍, ಆರ್. ಮಹೇಂದ್ರನ್, ಮದ್ರಾಸ್ ಟಾಕೀಸ್ ಮತ್ತು ಶಿವ ಅನಂತ್ ನಿರ್ಮಾಣದಲ್ಲಿ ಸಿನಿಮಾ ನಿರ್ಮಾಣವಾಗಿದೆ. ಕಮಲ್ ಹಾಸನ್, ಸಿಲಂಬರಸನ್‍, ತ್ರಿಷಾ, ಅಶೋಕ್ ಸೆಲ್ವನ್, ಐಶ್ವರ್ಯ ಲಕ್ಷ್ಮಿ, ಜೋಜು ಜಾರ್ಜ್, ಅಭಿರಾಮಿ, ನಾಸರ್‍ ಮುಂತಾದವರು ನಟಿಸಿರುವ ಈ ಚಿತ್ರದ ಕಥೆ-ಚಿತ್ರಕಥೆಯನ್ನು ಮಣಿರತ್ನಂ ಮತ್ತು ಕಮಲ್ ಹಾಸನ್ ಬರೆದಿದ್ದು, ಮಣಿರತ್ನಂ ನಿರ್ದೇಶನ ಮಾಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ದಸರಾ ಉನ್ನತ ಮಟ್ಟದ ಸಭೆ: ದಸರಾ ಪಾಸ್‌ಗಳನ್ನು ಸಂಪೂರ್ಣ ತಿರಸ್ಕರಿಸಿದ ಸಂಸದ ಯದುವೀರ್‌ ಒಡೆಯರ್‌

ಬೆಂಗಳೂರು: ಇಂದು ನಡೆದ ಮೈಸೂರು ದಸರಾ ಮಹೋತ್ಸವದ ಉನ್ನತ ಮಟ್ಟದ ಸಭೆಯಲ್ಲಿ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರು…

2 hours ago

ಜೀಪಿನ ಮೇಲೆ ಬಿದ್ದ ಮರದ ಕೊಂಬೆ: ಕೂದಲೆಳೆ ಅಂತರದಲ್ಲಿ ತಪ್ಪಿದ ದುರಂತ

ಗೋಣಿಕೊಪ್ಪ: ಪೊನ್ನಂಪೇಟೆ ಪಟ್ಟಣದಲ್ಲಿ ಭಾರಿ ಗಾಳಿ-ಮಳೆಯ ನಡುವೆ ಚಲಿಸುತ್ತಿದ್ದ ಜೀಪಿನ ಮೇಲೆ ಮರದ ಬೃಹತ್ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ…

3 hours ago

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ: ಅ.11ಕ್ಕೆ ದಸರಾ ಉದ್ಘಾಟನೆ

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಸಂಭ್ರಮಕ್ಕೆ ದಿನಾಂಕ ಫಿಕ್ಸ್‌ ಆಗಿದೆ. ಅಕ್ಟೋಬರ್.‌11ರಂದು ಚಾಮುಂಡಿಬೆಟ್ಟದಲ್ಲಿ ದಸರಾ ಮಹೋತ್ಸವ…

4 hours ago

ಜನವಸತಿ ಪ್ರದೇಶದಲ್ಲಿ ಸಂಚರಿಸಿ ಆತಂಕ ಸೃಷ್ಟಿಸಿದ ಕಾಡಾನೆ

ಸುಂಟಿಕೊಪ್ಪ: ಕೊಡಗರಹಳ್ಳಿಯ ಜನವಸತಿ ಪ್ರದೇಶದಲ್ಲಿ ಕಾಡಾನೆಯೊಂದು ಸಂಚರಿಸುವ ಮೂಲಕ ಈ ಭಾಗದ ನಿವಾಸಿಗಳಲ್ಲಿ ಅತಂಕ ಮೂಡಿಸಿದ ಘಟನೆಯೊಂದು ವರದಿಯಾಗಿದೆ. ಕಾಡಾನೆಯೊಂದು…

5 hours ago

ವಯನಾಡು ಭೂಕುಸಿತ ದುರಂತ ಪ್ರಕರಣ: ಸಾವಿನ ಸಂಖ್ಯೆ 7ಕ್ಕೆ ಏರಿಕೆ

ವಯನಾಡು: ವಯನಾಡ್ ಭೂಕುಸಿತ ಸ್ಥಳದಲ್ಲಿ ಇಂದು ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ದುರಂತದಲ್ಲಿ ಸಾವನ್ನಪ್ಪಿದ ಒಟ್ಟು ಜನರ ಸಂಖ್ಯೆ ಏಳಕ್ಕೆ ಏರಿದೆ…

5 hours ago

ಚೀನಾ ಪ್ರವಾಹದ ಮಧ್ಯೆ 900ಕ್ಕೂ ಹೆಚ್ಚು ವಿಷಕಾರಿ ಹಾವುಗಳು ನಾಪತ್ತೆ: ನೀರಿಗೆ ಇಳಿಯದಂತೆ ಜನತೆಗೆ ಸೂಚನೆ

ಬೀಜಿಂಗ್:‌ ಚೀನಾದಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಹಾವುಗಳ ಸಂತಾನೋತ್ಪತ್ತಿ ಕೇಂದ್ರಗಳು ಹಾನಿಗೊಳಗಾಗಿವೆ. ಪರಿಣಾಮ ಗುವಾಂಗ್ಕ್ಸಿ ಪ್ರದೇಶದಲ್ಲಿ ಹೆಚ್ಚು ಸರ್ಪಗಳು ತಪ್ಪಿಸಿಕೊಂಡಿವೆ.…

7 hours ago