ಮನರಂಜನೆ

‘ವೃಷಭ’ಗೆ ಟೈಟಲ್ ಸಮಸ್ಯೆ: ಅಳಲು ತೋಡಿಕೊಂಡ ಚಿತ್ರತಂಡ ತಂಡ

ಮೋಹನ್‍ ಲಾಲ್‍ ಅಭಿನಯದಲ್ಲಿ ಕನ್ನಡದ ನಂದಕಿಶೋರ್, ‘ವೃಷಭ’ ಎಂಬ ಪ್ಯಾನ್‍ ಇಂಡಿಯಾ ಚಿತ್ರ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈಗ ಅದೇ ಹೆಸರಿನಲ್ಲಿ ಸದ್ದಿಲ್ಲದೆ, ಇನ್ನೊಂದು ಕನ್ನಡ ಚಿತ್ರ ತಯಾರಾಗಿದೆ. ಅಷ್ಟೇ ಅಲ್ಲ, ಆ ಪ್ಯಾನ್ ‍ಇಂಡಿಯಾ ಚಿತ್ರದಿಂದಾಗಿ, ತಮಗೆ ಸಮಸ್ಯೆ ಎದುರಾಗಿದೆ ಎಂದು ಚಿತ್ರತಂಡ ಅಳಲು ತೋಡಿಕೊಂಡಿದೆ.

‘ವೃಷಭ’ ಚಿತ್ರವು ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಉಮೇಶ್‍ ಹೆಬ್ಬಾಳ ಈ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸುವುದರ ಜೊತೆಗೆ, ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ‘ವೃಷಭ’ ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್‍ ಕೊನೆಯ ಹಂತದಲ್ಲಿದ್ದು, ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.

ಇದನ್ನು ಓದಿ: ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?

ಈ ಚಿತ್ರದ ಕುರಿತು ಮಾತನಾಡುವ ಉಮೇಶ್‍, ‘ಈ ಚಿತ್ರ ನನ್ನ ಬಹುದಿನಗಳ ಕನಸು. ವರ್ಷದ ಹಿಂದೆ ಏಕ್ತಾ ಕಪೂರ್ ಸಂಸ್ಥೆಯವರು ಪತ್ರ ಬರೆದು, ಟೈಟಲ್ ಕೊಡ್ತೀರಾ ಎಂದು ಕೇಳಿದ್ದರು. ಆನಂತರ ನಮ್ಮ ಸಂಪರ್ಕಕ್ಕೆ ಬರಲಿಲ್ಲ. ನಾವು ಕೆ. ಮಂಜು ಅವರ ಮೂಲಕ ನಂದಕಿಶೋರ್ ಸಂಪರ್ಕಿಸಿ ಕೇಳಿದಾಗ, ಅವರು ಕನ್ನಡದಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಹೇಳಿದ್ದರು. ಇದೀಗ ನೋಡಿದರೆ, ಅವರು ‘ವೃಷಭ’ ಹೆಸರಿನಲ್ಲಿ ಕನ್ನಡದಲ್ಲೂ ಬಿಡುಗಡೆ ಮಾಡುತ್ತಿದ್ದಾರೆ. ಅದು ಸ್ಟಾರ್ ಸಿನಿಮಾ. ನವೆಂಬರ್.6ರಂದು ಬಿಡುಗಡೆಯಾಗುತ್ತಿದೆ. ಆಮೇಲೆ ನಾವು ಬಂದರೆ ಜನರಿಗೆ ಸಹಜವಾಗಿಯೇ ಗೊಂದಲವಾಗುತ್ತದೆ. ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ದಾಖಲಿಸಿದ್ದೇವೆ. ಅವರು ಕನ್ನಡ ಶೀರ್ಷಿಕೆ ರಿಜಿಸ್ಟರ್‍ ಮಾಡಿಸದೇ ಬಿಡುಗಡೆ ಮಾಡಲು ಹೊರಟಿದ್ದಾರೆ’ ಎಂದರು.

ಇದು ಗೂಳಿ ತರಹದ ವ್ಯಕ್ತಿತ್ವ ಇರುವ ರೈತನೊಬ್ಬನ ಕಥೆ ಎನ್ನುವ ಉಮೇಶ್‍, ‘ರೈತ ಎಂದರೆ ಬರೀ ಹೊಲದಲ್ಲಿ ಕೆಲಸ ಮಾಡುವವನಲ್ಲ. ಆತನನ್ನು ಕೆಣಕಿದರೆ ಸುಮ್ಮನಿರಲ್ಲ. ಆತನಿಗೂ ತಾಕತ್ತಿರುತ್ತೆ ಅಂತ ಹೇಳಲು ಹೊರಟಿದ್ದೇವೆ. ನಾನು ನಮ್ಮ ಚಿತ್ರದಲ್ಲಿ ತೋರಿಸುತ್ತಿರುವ ರೈತನೇ ಬೇರೆ. ಈ ಚಿತ್ರದಲ್ಲಿ ಹಲವು ವಿಷಯಗಳನ್ನು ಹೇಳುವುದಕ್ಕೆ ಹೊರಟಿದ್ದೇವೆ. ‘ವೃಷಭ’ ಶೀರ್ಷಿಕೆಯ ಮೇಲೆ ನಮ್ಮ ಚಿತ್ರದ ಶೀರ್ಷಿಕೆ ನಿಂತಿದೆ’ ಎಂದರು.

‘ವೃಷಭ’ ಚಿತ್ರಕ್ಕೆ ರಾಯ ಬಡಿಗೇರ್ ಚಿತ್ರದ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ‌. ಪ್ರಶಾಂತ್ ಸಾಗರ್ ಛಾಯಾಗ್ರಹಣ ಮಾಡಿದ್ದು, ಪ್ರಣವ್‍ ಸಂಗೀತ ಸಂಯೋಜಿಸಿದ್ದಾರೆ. ಮಂಡ್ಯ ಸುತ್ತಮುತ್ತ ‘ವೃಷಭ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

7 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

7 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

9 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

9 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

10 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

10 hours ago