ಮೋಹನ್ ಲಾಲ್ ಅಭಿನಯದಲ್ಲಿ ಕನ್ನಡದ ನಂದಕಿಶೋರ್, ‘ವೃಷಭ’ ಎಂಬ ಪ್ಯಾನ್ ಇಂಡಿಯಾ ಚಿತ್ರ ನಿರ್ದೇಶಿಸುತ್ತಿರುವುದು ಗೊತ್ತೇ ಇದೆ. ಈಗ ಅದೇ ಹೆಸರಿನಲ್ಲಿ ಸದ್ದಿಲ್ಲದೆ, ಇನ್ನೊಂದು ಕನ್ನಡ ಚಿತ್ರ ತಯಾರಾಗಿದೆ. ಅಷ್ಟೇ ಅಲ್ಲ, ಆ ಪ್ಯಾನ್ ಇಂಡಿಯಾ ಚಿತ್ರದಿಂದಾಗಿ, ತಮಗೆ ಸಮಸ್ಯೆ ಎದುರಾಗಿದೆ ಎಂದು ಚಿತ್ರತಂಡ ಅಳಲು ತೋಡಿಕೊಂಡಿದೆ.
‘ವೃಷಭ’ ಚಿತ್ರವು ಸುಮಾರು ಮೂರು ವರ್ಷಗಳ ಹಿಂದೆ ಪ್ರಾರಂಭವಾಗಿತ್ತು. ಉಮೇಶ್ ಹೆಬ್ಬಾಳ ಈ ಚಿತ್ರವನ್ನು ನಿರ್ದೇಶಿಸಿ, ನಿರ್ಮಿಸುವುದರ ಜೊತೆಗೆ, ಚಿತ್ರದಲ್ಲಿ ನಾಯಕನಾಗಿಯೂ ಕಾಣಿಸಿಕೊಂಡಿದ್ದಾರೆ. ‘ವೃಷಭ’ ಚಿತ್ರವೀಗ ಪೋಸ್ಟ್ ಪ್ರೊಡಕ್ಷನ್ ಕೊನೆಯ ಹಂತದಲ್ಲಿದ್ದು, ಸದ್ಯದಲ್ಲೇ ಚಿತ್ರವನ್ನು ಬಿಡುಗಡೆ ಮಾಡುವುದಕ್ಕೆ ಚಿತ್ರತಂಡ ತಯಾರಿ ಮಾಡಿಕೊಳ್ಳುತ್ತಿದೆ.
ಇದನ್ನು ಓದಿ: ನಿಂತೇ ಹೋಯ್ತಾ ಯುವ, ‘ದುನಿಯಾ’ ಸೂರಿ ಹೊಸ ಸಿನಿಮಾ?
ಈ ಚಿತ್ರದ ಕುರಿತು ಮಾತನಾಡುವ ಉಮೇಶ್, ‘ಈ ಚಿತ್ರ ನನ್ನ ಬಹುದಿನಗಳ ಕನಸು. ವರ್ಷದ ಹಿಂದೆ ಏಕ್ತಾ ಕಪೂರ್ ಸಂಸ್ಥೆಯವರು ಪತ್ರ ಬರೆದು, ಟೈಟಲ್ ಕೊಡ್ತೀರಾ ಎಂದು ಕೇಳಿದ್ದರು. ಆನಂತರ ನಮ್ಮ ಸಂಪರ್ಕಕ್ಕೆ ಬರಲಿಲ್ಲ. ನಾವು ಕೆ. ಮಂಜು ಅವರ ಮೂಲಕ ನಂದಕಿಶೋರ್ ಸಂಪರ್ಕಿಸಿ ಕೇಳಿದಾಗ, ಅವರು ಕನ್ನಡದಲ್ಲಿ ಚಿತ್ರವನ್ನು ಬಿಡುಗಡೆ ಮಾಡುತ್ತಿಲ್ಲ ಎಂದು ಹೇಳಿದ್ದರು. ಇದೀಗ ನೋಡಿದರೆ, ಅವರು ‘ವೃಷಭ’ ಹೆಸರಿನಲ್ಲಿ ಕನ್ನಡದಲ್ಲೂ ಬಿಡುಗಡೆ ಮಾಡುತ್ತಿದ್ದಾರೆ. ಅದು ಸ್ಟಾರ್ ಸಿನಿಮಾ. ನವೆಂಬರ್.6ರಂದು ಬಿಡುಗಡೆಯಾಗುತ್ತಿದೆ. ಆಮೇಲೆ ನಾವು ಬಂದರೆ ಜನರಿಗೆ ಸಹಜವಾಗಿಯೇ ಗೊಂದಲವಾಗುತ್ತದೆ. ನಾವು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಹೆಸರು ದಾಖಲಿಸಿದ್ದೇವೆ. ಅವರು ಕನ್ನಡ ಶೀರ್ಷಿಕೆ ರಿಜಿಸ್ಟರ್ ಮಾಡಿಸದೇ ಬಿಡುಗಡೆ ಮಾಡಲು ಹೊರಟಿದ್ದಾರೆ’ ಎಂದರು.
ಇದು ಗೂಳಿ ತರಹದ ವ್ಯಕ್ತಿತ್ವ ಇರುವ ರೈತನೊಬ್ಬನ ಕಥೆ ಎನ್ನುವ ಉಮೇಶ್, ‘ರೈತ ಎಂದರೆ ಬರೀ ಹೊಲದಲ್ಲಿ ಕೆಲಸ ಮಾಡುವವನಲ್ಲ. ಆತನನ್ನು ಕೆಣಕಿದರೆ ಸುಮ್ಮನಿರಲ್ಲ. ಆತನಿಗೂ ತಾಕತ್ತಿರುತ್ತೆ ಅಂತ ಹೇಳಲು ಹೊರಟಿದ್ದೇವೆ. ನಾನು ನಮ್ಮ ಚಿತ್ರದಲ್ಲಿ ತೋರಿಸುತ್ತಿರುವ ರೈತನೇ ಬೇರೆ. ಈ ಚಿತ್ರದಲ್ಲಿ ಹಲವು ವಿಷಯಗಳನ್ನು ಹೇಳುವುದಕ್ಕೆ ಹೊರಟಿದ್ದೇವೆ. ‘ವೃಷಭ’ ಶೀರ್ಷಿಕೆಯ ಮೇಲೆ ನಮ್ಮ ಚಿತ್ರದ ಶೀರ್ಷಿಕೆ ನಿಂತಿದೆ’ ಎಂದರು.
‘ವೃಷಭ’ ಚಿತ್ರಕ್ಕೆ ರಾಯ ಬಡಿಗೇರ್ ಚಿತ್ರದ ಕ್ರಿಯೇಟಿವ್ ಹೆಡ್ ಆಗಿ ಕೆಲಸ ಮಾಡಿದ್ದಾರೆ. ಪ್ರಶಾಂತ್ ಸಾಗರ್ ಛಾಯಾಗ್ರಹಣ ಮಾಡಿದ್ದು, ಪ್ರಣವ್ ಸಂಗೀತ ಸಂಯೋಜಿಸಿದ್ದಾರೆ. ಮಂಡ್ಯ ಸುತ್ತಮುತ್ತ ‘ವೃಷಭ’ ಚಿತ್ರದ ಚಿತ್ರೀಕರಣ ನಡೆಸಲಾಗಿದೆ.
ಗಾಂಧೀಜಿಯವರ ಜೀವನವೇ ತೆರೆದ ಪುಸ್ತಕ: ಇಡೀ ವಿಶ್ವವೇ ಗಾಂಧೀಜಿಯವರ ಅಹಿಂಸೆ ಮತ್ತು ಸತ್ಯಾಗ್ರಹಗಳನ್ನು ಗೌರವಿಸುತ್ತದೆ. ಗಾಂಧಿಯವರು ತಮ್ಮ ಶಾಲಾ ದಿನಗಳಲ್ಲಿಯೇ…
ಡಾ.ಟಿ.ಮಂಜು ಸತ್ತಿಗೆಹುಂಡಿ, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಗಾಂಧಿ ಭವನ, ಮೈಸೂರು ವಿಶ್ವವಿದ್ಯಾಲಯ ಭಾರತದ ಸ್ವಾತಂತ್ರ್ಯ ಚಳವಳಿಗೆ ಕಾಲೇಜು ವಿದ್ಯಾರ್ಥಿಗಳು,…
ನನ್ನ ಆರು ಏಳನೆಯ ವಯಸ್ಸಿನಿಂದ ಹದಿನಾರನೆಯ ವಯಸ್ಸಿನವರೆಗೆ ಪಾಠಶಾಲೆಯಲ್ಲಿ ವಿದ್ಯೆಯನ್ನು ಕಲಿತೆ. ಆದರೆ ಸ್ಕೂಲಿನಲ್ಲಿ ನನಗೆ ಯಾವ ಧಾರ್ಮಿಕ ಶಿಕ್ಷಣವೂ…
ನವೀನ್ ಡಿಸೋಜ ಮಡಿಕೇರಿ: ಜೂ.೨೮ರಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ನಡೆಯಲಿದ್ದು, ಕೊಡಗು ಜಿಲ್ಲೆಯಲ್ಲಿಯೂ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿದೆ. ಜಿಲ್ಲೆಯಲ್ಲಿ…
ದಿನೇಶ್ ಕುಮಾರ್ ಹೆಚ್.ಎಸ್. ಅಗ್ನಿ ಅವಘಡದ ಬಳಿಕ ಎಚ್ಚೆತ್ತ ಅಧಿಕಾರಿಗಳು ಮೈಸೂರು: ನಗರದ ದಟ್ಟಗಳ್ಳಿಯ ಮಾರಾ ರೆಸ್ಟೋ ಬಾರ್ನಲ್ಲಿ ನಡೆದ…
ನೀಟ್ -ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಹಿನ್ನೆಲೆಯಲ್ಲಿ ಇದೇ ಜೂನ್ ೨೧ ರಂದು ಮರು ಪರೀಕ್ಷೆ ನಡೆಯಲಿದೆ. ವಂಚನೆ ಜಾಲ…