ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಬೆಂಗಳೂರಿನ ಜಯನಗರದ ಎಂಇಎಸ್ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.
ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ಅಭಿಮಾನಿಗಳು ತೋರಿಸೋ ಪ್ರೀತಿ ವ್ಯಕ್ತಿತ್ವದಿಂದ ನಾನು ಇಲ್ಲಿಯವರೆಗೆ ಬಂದಿದ್ದೇನೆ. ಹೋದಲೆಲ್ಲಾ ತಲೆ ಎತ್ತಿಕೊಂಡು ನಿಲ್ತೀವಿ ಅಂದರೆ ಅದಕ್ಕೆ ಅಭಿಮಾನಿಗಳೇ ಕಾರಣ. ಅವರಿಗೆ ಕಳಂಕ ತರುವ ಕೆಲಸವನ್ನೂ ಯಾವತ್ತೂ ಮಾಡಲ್ಲ ಎಂದರು.
ಅಭಿಮಾನಿಗಳನ್ನು ಮನೆ ಬಳಿ ಭೇಟಿ ಮಾಡಲು ಆಗಲಿಲ್ಲ. ನನ್ನ ತಂದೆ ತಾಯಿಗೆ ವಯಸ್ಸಾಗಿದೆ. ಕಳೆದ ಬಾರಿ ಅಕ್ಕ-ಪಕ್ಕದ ಮನೆಯವರಿಗೂ ತೊಂದರೆ ಆಗಿದೆ. ಹಾಗಾಗಿ ಇಲ್ಲಿಗೆ ಬಂದು ನಿಮ್ಮೆಲ್ಲರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡೆ ಎಂದು ಸ್ಪಷ್ಟನೆ ನೀಡಿದರು.
ಪ್ರೀತಿ ಹಾಗೂ ಒಳ್ಳೆಯತನ ತೋರಿಸೋದಕ್ಕೆ ಕಾಂಪ್ರೋ ಆಗಬೇಡಿ ಎಂದು ಅಭಿಮಾನಿಗಳಿಗೆ ಇದೇ ವೇಳೆ ಕಿವಿಮಾತು ಹೇಳಿದರು.
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್…
ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…
ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…
ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…
ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…