ಬೆಂಗಳೂರು: ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಅಭಿನಯ ಚಕ್ರವರ್ತಿ ಸುದೀಪ್ ಅವರು ಇಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ.
ಬೆಂಗಳೂರಿನ ಜಯನಗರದ ಎಂಇಎಸ್ ಮೈದಾನದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಅವರು ಅಭಿಮಾನಿಗಳನ್ನು ಉದ್ದೇಶಿಸಿ ಮಾತನಾಡಿದರು.
ನನ್ನ ಫ್ಯಾನ್ಸ್ ಯಾವತ್ತೂ ಕಳಂಕ ತರುವ ಕೆಲಸ ಮಾಡುವುದಿಲ್ಲ. ಅಭಿಮಾನಿಗಳು ತೋರಿಸೋ ಪ್ರೀತಿ ವ್ಯಕ್ತಿತ್ವದಿಂದ ನಾನು ಇಲ್ಲಿಯವರೆಗೆ ಬಂದಿದ್ದೇನೆ. ಹೋದಲೆಲ್ಲಾ ತಲೆ ಎತ್ತಿಕೊಂಡು ನಿಲ್ತೀವಿ ಅಂದರೆ ಅದಕ್ಕೆ ಅಭಿಮಾನಿಗಳೇ ಕಾರಣ. ಅವರಿಗೆ ಕಳಂಕ ತರುವ ಕೆಲಸವನ್ನೂ ಯಾವತ್ತೂ ಮಾಡಲ್ಲ ಎಂದರು.
ಅಭಿಮಾನಿಗಳನ್ನು ಮನೆ ಬಳಿ ಭೇಟಿ ಮಾಡಲು ಆಗಲಿಲ್ಲ. ನನ್ನ ತಂದೆ ತಾಯಿಗೆ ವಯಸ್ಸಾಗಿದೆ. ಕಳೆದ ಬಾರಿ ಅಕ್ಕ-ಪಕ್ಕದ ಮನೆಯವರಿಗೂ ತೊಂದರೆ ಆಗಿದೆ. ಹಾಗಾಗಿ ಇಲ್ಲಿಗೆ ಬಂದು ನಿಮ್ಮೆಲ್ಲರ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡೆ ಎಂದು ಸ್ಪಷ್ಟನೆ ನೀಡಿದರು.
ಪ್ರೀತಿ ಹಾಗೂ ಒಳ್ಳೆಯತನ ತೋರಿಸೋದಕ್ಕೆ ಕಾಂಪ್ರೋ ಆಗಬೇಡಿ ಎಂದು ಅಭಿಮಾನಿಗಳಿಗೆ ಇದೇ ವೇಳೆ ಕಿವಿಮಾತು ಹೇಳಿದರು.
5,54,32,314 ಎನ್ಯುಮರೇಷನ್ ಫಾರಂ ಹಂಚಿಕೆ ; ಶೇ.100 ರಷ್ಟು ಡಿಜಿಟಲೀಕರಣ ಬೆಂಗಳೂರು: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)…
ಮೈಸೂರು : ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಸರ್ಕಾರ 6 ಕೋಟಿ ರೂ. ಬಿಡುಗಡೆ ಮಾಡಿದ್ದು,…
ತಾರಾಪಿತ್ (ಪಶ್ಚಿಮ ಬಂಗಾಳ) : ಬೆಂಕಿ ಅವಘಡದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಪಶ್ಚಿಮ…
ಯಳಂದೂರು : ಚಿರತೆ ದಾಳಿಗೆ ಕರು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಯರಗಂಬಳ್ಳಿ ಗ್ರಾಮದಲ್ಲಿ ನಡೆದಿದೆ. ಯರಗಂಬಳ್ಳಿ ಗ್ರಾಮದ ಶೋಭಾ ಕೋಂ…
ಹೊಸದಿಲ್ಲಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧದ ವಿವಾದ ಮತ್ತೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಾವೇರಿ ನೀರು ನಿರ್ವಹಣಾ…
ಬೆಂಗಳೂರು : ನಗರದ ಖಾಸಗಿ ಶಾಲೆಯೊಂದರ ಇಬ್ಬರು ಶಿಕ್ಷಕರಿಗೆ ಹೆಚ್1ಎನ್1 (H1N1) ದೃಢಪಟ್ಟಿದ್ದು ಆತಂಕ ಮೂಡಿಸಿದೆ. ಸದ್ಯಕ್ಕೆ ಹೈಸ್ಕೂಲ್ ಮಾತ್ರ…