ಮನರಂಜನೆ

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಜೂ. ಎನ್‌ಟಿಆರ್‌: ಜೊತೆಯಾದ ನೀಲ್‌, ಶೆಟ್ರು

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಕುಟುಂಬದೊಂದಿಗೆ ಪ್ರವಾಸದಲ್ಲಿರುವ ತಾರಕ್‌(ಜೂ. ಎನ್‌ಟಿಆರ್‌) ಅವರು ತಮ್ಮ ಎರಡನೇ ದಿನವಾದ ಇಂದು ಮುಕಾಂಬಿಕಾ ದೇವಿಯ ಮಹಾಪೂಜೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ತಾರಕ್‌ ಹಾಗೂ ಕುಟುಂಬ ಪಾತ್ರರಾದರು.

ಕೊಲ್ಲೂರಮ್ಮನ ದರ್ಶನಕ್ಕೆ ಕೇವಲ ತಾರಕ್‌ ಮತ್ತು ಕುಟುಂಬ ಮಾತ್ರ ಬಂದಿಲ್ಲ. ಇವರಿಗೆ ಜೊತೆಯಾಗಿ ರಿಷಬ್‌ ಶೆಟ್ಟಿ, ಕೆಜಿಎಫ್‌ ಖ್ಯಾತಿಯ ಪ್ರಶಾಂತ್‌ ನೀಲ್‌, ಪ್ರಮೋದ್‌ ಶೆಟ್ಟಿ ಅವರ ಕುಟುಂಬಗಳು ಸಹಾ ದೇವಿಯ ದರ್ಶನ ಪಡೆದರು.

ನಾಲ್ಕು ದಶಕಗಳ ಬಳಿಕ ಇದೇ ಮೊದಲ ಬಾರಿಗೆ ತಾರಕ್‌ ತಾಯಿ ಶಾಲಿನಿ ನಂದಮೂರಿ ಅವರು ತಮ್ಮ ಹುಟ್ಟೂರು ಕರಾವಳಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಪತ್ನಿ ಲಕ್ಷ್ಮೀ ಪ್ರಣತಿ, ತಾರಕ್‌ ಇದ್ದಾರೆ. ಇವರ ಜೊತೆ ರಿಷಬ್‌ ಪತ್ನಿ ಪ್ರಗತಿ ರಿಷಬ್‌, ಪ್ರಶಾಂತ್‌ ನೀಲ್‌ ಪತ್ನಿ ಲಿಖಿತಾ ನೀಲ್‌ ಜೊತೆಯಲ್ಲಿದ್ದರು.

ಟಾಲಿವುಡ್‌ ಸ್ಟಾರ್‌ ಕೊಲ್ಲೂರಮ್ಮನ ದರ್ಶನಕ್ಕೆ ಆಗಮಿಸಿದ ವೇಳೆ ದೇವಸ್ಥಾನ ಪ್ರಾಧಿಕಾರ ತಾರಕ್‌ ಅವರಿಗೆ ಗೌರವ ಸಮರ್ಪಣೆ ಮಾಡಿದರು.

ದೇವರ ದರ್ಶನ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ತಾರಕ್‌, ದೇವಿಯ ದರ್ಶನ ಮಾಡಿಸಿದ ರಿಷಬ್‌ ಅವರಿಗೆ ಧನ್ಯವಾದಗಳು. ದೇವರ ದರ್ಶನ ಚೆನ್ನಾಗಿ ಆಯಿತು. ನಾನಿಲ್ಲಿ ದೇವರ ದರ್ಶನಕ್ಕಾಗಿ ಬಂದಿದ್ದೇನೆ ಹಾಗಾಗಿ ಯಾವುದೇ ಸಿನಿಮಾ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ದೇವಸ್ಥಾನದಲ್ಲಿ ದೇಗುಲ ಭೇಟಿ ಬಿಟ್ಟು ಬೇರೆ ವಿಚಾರ ಮಾತಾಡಲ್ಲ ಎಂದರು.

ಇನ್ನು ಕಾಂತಾರ ಸೀಕ್ವೆಲ್‌ನಲ್ಲಿ ಜೂ.ಎನ್‌ಟಿಆರ್‌ ನಟಿಸಲಿದ್ದಾರೆ ಎಂಬ ಗಾಸಿಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ರಿಷಬ್‌ ಅವರನ್ನೇ ಕೇಳಬೇಕು. ಅವರೇನೆ ಪ್ಲಾನ್‌ ಮಾಡಿದರೂ ನಾನ್‌ ರೆಡಿ ಎಂದರು. ಇನ್ನು ಟಾಲಿವುಡ್‌ನಲ್ಲಿ ವಾಯ್ಸ್‌ ಆಫ್‌ ವುಮನ್‌ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ತಾರಕ್‌ ನಿರಾಕರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವೇಶ್ಯಾವಾಟಿಕೆ ಅಡ್ಡೆ ಮೇಲೆ ಪೊಲೀಸರ ದಾಳಿ: ಇಬ್ಬರ ಬಂಧನ

ಮಹೇಂದ್ರ ಹಸಗೂಲಿ, ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ಪಟ್ಟಣದ ಜನತಾ ಕಾಲೋನಿಯ ಮನೆಯೊಂದರ ಮೇಲೆ ಪೊಲೀಸರು ದಾಳಿ ನಡೆಸಿ ವೇಶ್ಯಾವಾಟಿಕೆ…

9 hours ago

ಭಾರತ-ಯುರೋಪ್‌ ಒಕ್ಕೂಟ ವ್ಯಾಪಾರ ಒಪ್ಪಂದಕ್ಕೆ ಸಹಿ

ನವದೆಹಲಿ: ಮದರ್‌ ಆಫ್‌ ಆಲ್‌ ಡೀಲ್ಸ್‌ ಎಂದೇ ಕರೆಯಲ್ಪಡುವ ಭಾರತ-ಯುರೋಪ್‌ ಒಕ್ಕೂಟವು ಮುಕಕ್ತ ವ್ಯಾಪಾರ ಒಪ್ಪಂದಕ್ಕೆ ಇಂದು ಅಧಿಕೃತವಾಗಿ ಸಹಿ…

13 hours ago

ಶಿಡ್ಲಘಟ್ಟ ಕೇಸ್‌ನಲ್ಲಿ ಕಾನೂನಿನಂತೆ ಕ್ರಮ: ಸಚಿವ ಭೈರತಿ ಸುರೇಶ್‌

ಬೆಂಗಳೂರು: ಶಿಡ್ಲಘಟ್ಟದಲ್ಲಿ ಪೌರಾಯುಕ್ತಗೆ ಧಮ್ಕಿ ಹಾಕಿದ ಪ್ರಕರಣದಲ್ಲಿ ಕಾಂಗ್ರೆಸ್‌ ಮುಖಂಡ ರಾಜೀವ್‌ಗೌಡನನ್ನು ಸರ್ಕಾರ ರಕ್ಷಣೆ ಮಾಡಲ್ಲ. ಕಾನೂನು ಪ್ರಕಾರ ಶಿಕ್ಷೆ…

13 hours ago

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ಸವಾರ ಸಾವು

ಪಿರಿಯಾಪಟ್ಟಣ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಗೋಣಿಕೊಪ್ಪ-ಪಿರಿಯಾಪಟ್ಟಣ ರಸ್ತೆಯಲ್ಲಿ ನಡೆದಿದೆ. ತಾಲ್ಲೂಕಿನ…

14 hours ago

ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿ: ಲೇಖಕಿಯರಿಂದ ಕಥಾಸಂಕಲನ ಆಹ್ವಾನ

ಮೈಸೂರು: ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ)ವು ಸಂಸ್ಥಾಪಕ ಅಧ್ಯಕ್ಷೆ, ಖ್ಯಾತ ಸ್ತ್ರೀವಾದಿ ವಿಮರ್ಶಕಿ ಹಾಗೂ ಲೇಖಕಿ ಡಾ.ವಿಜಯಾ ದಬ್ಬೆ ಅವರ ಹೆಸರಿನಲ್ಲಿ 2022…

14 hours ago

ಗುಂಡ್ಲುಪೇಟೆ: ಬೊಮ್ಮಲಾಪುರದಲ್ಲಿ ವಾಸದ ಮನೆಗೆ ನುಗ್ಗಿದ ಕಡವೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ ದೊರೆ ಎಂಬುವವರ ವಾಸದ ಮನೆಗೆ ನುಗ್ಗಿದ ಕಡವೆಯನ್ನು…

14 hours ago