ಮನರಂಜನೆ

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಜೂ. ಎನ್‌ಟಿಆರ್‌: ಜೊತೆಯಾದ ನೀಲ್‌, ಶೆಟ್ರು

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಕುಟುಂಬದೊಂದಿಗೆ ಪ್ರವಾಸದಲ್ಲಿರುವ ತಾರಕ್‌(ಜೂ. ಎನ್‌ಟಿಆರ್‌) ಅವರು ತಮ್ಮ ಎರಡನೇ ದಿನವಾದ ಇಂದು ಮುಕಾಂಬಿಕಾ ದೇವಿಯ ಮಹಾಪೂಜೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ತಾರಕ್‌ ಹಾಗೂ ಕುಟುಂಬ ಪಾತ್ರರಾದರು.

ಕೊಲ್ಲೂರಮ್ಮನ ದರ್ಶನಕ್ಕೆ ಕೇವಲ ತಾರಕ್‌ ಮತ್ತು ಕುಟುಂಬ ಮಾತ್ರ ಬಂದಿಲ್ಲ. ಇವರಿಗೆ ಜೊತೆಯಾಗಿ ರಿಷಬ್‌ ಶೆಟ್ಟಿ, ಕೆಜಿಎಫ್‌ ಖ್ಯಾತಿಯ ಪ್ರಶಾಂತ್‌ ನೀಲ್‌, ಪ್ರಮೋದ್‌ ಶೆಟ್ಟಿ ಅವರ ಕುಟುಂಬಗಳು ಸಹಾ ದೇವಿಯ ದರ್ಶನ ಪಡೆದರು.

ನಾಲ್ಕು ದಶಕಗಳ ಬಳಿಕ ಇದೇ ಮೊದಲ ಬಾರಿಗೆ ತಾರಕ್‌ ತಾಯಿ ಶಾಲಿನಿ ನಂದಮೂರಿ ಅವರು ತಮ್ಮ ಹುಟ್ಟೂರು ಕರಾವಳಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಪತ್ನಿ ಲಕ್ಷ್ಮೀ ಪ್ರಣತಿ, ತಾರಕ್‌ ಇದ್ದಾರೆ. ಇವರ ಜೊತೆ ರಿಷಬ್‌ ಪತ್ನಿ ಪ್ರಗತಿ ರಿಷಬ್‌, ಪ್ರಶಾಂತ್‌ ನೀಲ್‌ ಪತ್ನಿ ಲಿಖಿತಾ ನೀಲ್‌ ಜೊತೆಯಲ್ಲಿದ್ದರು.

ಟಾಲಿವುಡ್‌ ಸ್ಟಾರ್‌ ಕೊಲ್ಲೂರಮ್ಮನ ದರ್ಶನಕ್ಕೆ ಆಗಮಿಸಿದ ವೇಳೆ ದೇವಸ್ಥಾನ ಪ್ರಾಧಿಕಾರ ತಾರಕ್‌ ಅವರಿಗೆ ಗೌರವ ಸಮರ್ಪಣೆ ಮಾಡಿದರು.

ದೇವರ ದರ್ಶನ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ತಾರಕ್‌, ದೇವಿಯ ದರ್ಶನ ಮಾಡಿಸಿದ ರಿಷಬ್‌ ಅವರಿಗೆ ಧನ್ಯವಾದಗಳು. ದೇವರ ದರ್ಶನ ಚೆನ್ನಾಗಿ ಆಯಿತು. ನಾನಿಲ್ಲಿ ದೇವರ ದರ್ಶನಕ್ಕಾಗಿ ಬಂದಿದ್ದೇನೆ ಹಾಗಾಗಿ ಯಾವುದೇ ಸಿನಿಮಾ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ದೇವಸ್ಥಾನದಲ್ಲಿ ದೇಗುಲ ಭೇಟಿ ಬಿಟ್ಟು ಬೇರೆ ವಿಚಾರ ಮಾತಾಡಲ್ಲ ಎಂದರು.

ಇನ್ನು ಕಾಂತಾರ ಸೀಕ್ವೆಲ್‌ನಲ್ಲಿ ಜೂ.ಎನ್‌ಟಿಆರ್‌ ನಟಿಸಲಿದ್ದಾರೆ ಎಂಬ ಗಾಸಿಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ರಿಷಬ್‌ ಅವರನ್ನೇ ಕೇಳಬೇಕು. ಅವರೇನೆ ಪ್ಲಾನ್‌ ಮಾಡಿದರೂ ನಾನ್‌ ರೆಡಿ ಎಂದರು. ಇನ್ನು ಟಾಲಿವುಡ್‌ನಲ್ಲಿ ವಾಯ್ಸ್‌ ಆಫ್‌ ವುಮನ್‌ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ತಾರಕ್‌ ನಿರಾಕರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿದೆ: ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಜೀವ ರಕ್ಷಕ ಔಷಧಿಗಳ ಕೊರತೆಯಿರುವುದು ನಿಜ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.…

47 seconds ago

ನಟಿ ರನ್ಯಾ ರಾವ್‌ ಪ್ರಕರಣಕ್ಕೆ ರೋಚಕ ಟ್ವಿಸ್ಟ್‌

ಬೆಂಗಳೂರು: ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾರಾವ್‌ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದು, ಡಿಐಆರ್‌ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದೇಗೆ ಎಂಬ…

20 mins ago

ಕೌಟುಂಬಿಕ ಕಲಹ: ಕೆರೆಗೆ ಹಾರಿ ತಾಯಿ-ಮಗ ಆತ್ಮಹತ್ಯೆ

ಹಾಸನ: ಕೌಟುಂಬಿಕ ಕಲಹದಿಂದ ಬೇಸತ್ತು ತಾಯಿ-ಮಗ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಕಬ್ಬಳ್ಳಿ…

43 mins ago

ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಎಚ್.ಡಿ.ಕುಮಾರಸ್ವಾಮಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ವಿಧೇಯಕಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸಂಪೂರ್ಣ ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ…

58 mins ago

ಓದುಗರ ಪತ್ರ: ಸಮತೋಲನದ ಬಜೆಟ್!…

ಸಮತೋಲನದ ಬಜೆಟ್!... ಮೂಡಿ ಬಂದಿದೆ ಸರ್ವರ ಹಿತ ಏಳ್ಗೆಯ ಕರ್ನಾಟಕದ ಮಾದರಿ ಜನಪರ ಬಜೆಟ್! ಮುಖ್ಯಮಂತ್ರಿಗಳ ಅನುಭವದ ಮೂಸೆಯಲಿ ಸುಸ್ಥಿರ…

4 hours ago

ಓದುಗರ ಪತ್ರ: ಸಿನಿಮಾ ಟಿಕೆಟ್ ದರ ನಿಗದಿ ಸ್ವಾಗತಾರ್ಹ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ೧೬ನೇ ಬಜೆಟ್ ಮಂಡನೆ ವೇಳೆ ಸಿನಿಮಾ ಟಿಕೆಟ್ ದರ ನಿಗದಿಯ ಬಗ್ಗೆ ಪ್ರಸ್ತಾಪಿಸಿದ್ದು, ಸಿನಿ ಪ್ರಿಯರಿಗೆ ಸಂತಸ…

4 hours ago