ಮನರಂಜನೆ

ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ಜೂ. ಎನ್‌ಟಿಆರ್‌: ಜೊತೆಯಾದ ನೀಲ್‌, ಶೆಟ್ರು

ಉಡುಪಿ: ಜಿಲ್ಲೆಯ ಬೈಂದೂರಿನ ಕೊಲ್ಲೂರು ಮುಕಾಂಬಿಕಾ ದೇವಾಲಯಕ್ಕೆ ತೆಲುಗಿನ ಖ್ಯಾತ ನಟ ಜೂ. ಎನ್‌ಟಿಆರ್‌ ಅವರು ಕುಟುಂಬ ಸಮೇತಾ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.

ಕುಟುಂಬದೊಂದಿಗೆ ಪ್ರವಾಸದಲ್ಲಿರುವ ತಾರಕ್‌(ಜೂ. ಎನ್‌ಟಿಆರ್‌) ಅವರು ತಮ್ಮ ಎರಡನೇ ದಿನವಾದ ಇಂದು ಮುಕಾಂಬಿಕಾ ದೇವಿಯ ಮಹಾಪೂಜೆಯಲ್ಲಿ ಭಾಗವಹಿಸಿ ದೇವರ ಅನುಗ್ರಹಕ್ಕೆ ತಾರಕ್‌ ಹಾಗೂ ಕುಟುಂಬ ಪಾತ್ರರಾದರು.

ಕೊಲ್ಲೂರಮ್ಮನ ದರ್ಶನಕ್ಕೆ ಕೇವಲ ತಾರಕ್‌ ಮತ್ತು ಕುಟುಂಬ ಮಾತ್ರ ಬಂದಿಲ್ಲ. ಇವರಿಗೆ ಜೊತೆಯಾಗಿ ರಿಷಬ್‌ ಶೆಟ್ಟಿ, ಕೆಜಿಎಫ್‌ ಖ್ಯಾತಿಯ ಪ್ರಶಾಂತ್‌ ನೀಲ್‌, ಪ್ರಮೋದ್‌ ಶೆಟ್ಟಿ ಅವರ ಕುಟುಂಬಗಳು ಸಹಾ ದೇವಿಯ ದರ್ಶನ ಪಡೆದರು.

ನಾಲ್ಕು ದಶಕಗಳ ಬಳಿಕ ಇದೇ ಮೊದಲ ಬಾರಿಗೆ ತಾರಕ್‌ ತಾಯಿ ಶಾಲಿನಿ ನಂದಮೂರಿ ಅವರು ತಮ್ಮ ಹುಟ್ಟೂರು ಕರಾವಳಿಗೆ ಆಗಮಿಸಿದ್ದಾರೆ. ಜೊತೆಯಲ್ಲಿ ಪತ್ನಿ ಲಕ್ಷ್ಮೀ ಪ್ರಣತಿ, ತಾರಕ್‌ ಇದ್ದಾರೆ. ಇವರ ಜೊತೆ ರಿಷಬ್‌ ಪತ್ನಿ ಪ್ರಗತಿ ರಿಷಬ್‌, ಪ್ರಶಾಂತ್‌ ನೀಲ್‌ ಪತ್ನಿ ಲಿಖಿತಾ ನೀಲ್‌ ಜೊತೆಯಲ್ಲಿದ್ದರು.

ಟಾಲಿವುಡ್‌ ಸ್ಟಾರ್‌ ಕೊಲ್ಲೂರಮ್ಮನ ದರ್ಶನಕ್ಕೆ ಆಗಮಿಸಿದ ವೇಳೆ ದೇವಸ್ಥಾನ ಪ್ರಾಧಿಕಾರ ತಾರಕ್‌ ಅವರಿಗೆ ಗೌರವ ಸಮರ್ಪಣೆ ಮಾಡಿದರು.

ದೇವರ ದರ್ಶನ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ತಾರಕ್‌, ದೇವಿಯ ದರ್ಶನ ಮಾಡಿಸಿದ ರಿಷಬ್‌ ಅವರಿಗೆ ಧನ್ಯವಾದಗಳು. ದೇವರ ದರ್ಶನ ಚೆನ್ನಾಗಿ ಆಯಿತು. ನಾನಿಲ್ಲಿ ದೇವರ ದರ್ಶನಕ್ಕಾಗಿ ಬಂದಿದ್ದೇನೆ ಹಾಗಾಗಿ ಯಾವುದೇ ಸಿನಿಮಾ ವಿಚಾರಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ದೇವಸ್ಥಾನದಲ್ಲಿ ದೇಗುಲ ಭೇಟಿ ಬಿಟ್ಟು ಬೇರೆ ವಿಚಾರ ಮಾತಾಡಲ್ಲ ಎಂದರು.

ಇನ್ನು ಕಾಂತಾರ ಸೀಕ್ವೆಲ್‌ನಲ್ಲಿ ಜೂ.ಎನ್‌ಟಿಆರ್‌ ನಟಿಸಲಿದ್ದಾರೆ ಎಂಬ ಗಾಸಿಪ್‌ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ರಿಷಬ್‌ ಅವರನ್ನೇ ಕೇಳಬೇಕು. ಅವರೇನೆ ಪ್ಲಾನ್‌ ಮಾಡಿದರೂ ನಾನ್‌ ರೆಡಿ ಎಂದರು. ಇನ್ನು ಟಾಲಿವುಡ್‌ನಲ್ಲಿ ವಾಯ್ಸ್‌ ಆಫ್‌ ವುಮನ್‌ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ತಾರಕ್‌ ನಿರಾಕರಿಸಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಓದುಗರ ಪತ್ರ: ಸ್ವಾಗತಾರ್ಹ ಸಂಕಲ್ಪ!

ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…

2 hours ago

ಓದುಗರ ಪತ್ರ: ಸತ್ಪ್ರಜೆಗಳಾಗಿ ಜೀವಿಸುವುದೇ ಸ್ವಾತಂತ್ರ್ಯ ಹೋರಾಟಗಾರರಿಗೆ ನಾವು ನೀಡುವ ಗೌರವ

ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…

2 hours ago

ಓದುಗರ ಪತ್ರ: ಸೇತುವೆ ಅವ್ಯವಸ್ಥೆ; ಸಂಚಾರ ದುಸ್ತರ

ಮೈಸೂರು ತಾಲ್ಲೂಕಿನ ಬ್ಯಾತಹಳ್ಳಿ ಮತ್ತು ದಡದಹಳ್ಳಿ ನಡುವೆ ಹರಿಯುತ್ತಿರುವ ಎಣ್ಣೆಹೊಳೆ ದಾಟಲು ಸೇತುವೆಯೊಂದನ್ನು ನಿರ್ಮಿಸಲಾಗಿದೆ. ಇದು ಅತ್ಯಂತ ದುಸ್ಥಿತಿಯಲ್ಲಿದೆ. ಈ…

2 hours ago

ಕಪ್ಪು ವರ್ಣೀಯರ ಕಣ್ಣೀರ ಕಥನ

ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಐಪಿಎಸ್ ಅಧಿಕಾರಿ ಚೆನ್ನಬಸವಣ್ಣ ಅವರ ಅಲ್ಕೆಬುಲಾನದ ಹೃದಯದಿಂದ…

2 hours ago

ಯಶ್: ‘ಟಾಕ್ಸಿಕ್’ ಬೆನ್ನೇರಿದ ಯಶೋ ಮಾರ್ಗ

ವೈಡ್‌ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ‘ಫಸ್ಟ್ , ಯು ಹ್ಯಾವ್ ಟು ಬಿಲೀವ್ ಇನ್ ಇಟ್, ದೆನ್…

2 hours ago

ರೈತರ ಪಾಲಿಗೆ ಕಹಿಯಾದ ಸಿಹಿಗುಂಬಳ

ದಾ.ರಾ.ಮಹೇಶ್ ಹನಗೋಡು ಹೋಬಳಿ ರೈತರು ಬೆಳೆದ ಸಿಹಿಗುಂಬಳಕ್ಕೆ ದೊರೆಯದ ಮಾರುಕಟ್ಟೆ  ವೀರನಹೊಸಹಳ್ಳಿ: ಜೋಳ, ಶುಂಠಿ, ಮತ್ತಿತರ ಸಾಂಪ್ರದಾಯಿಕ ಕೃಷಿ ಬಿಟ್ಟು…

2 hours ago