ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ನಾಳೆ ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ.
ರಾಕ್ಲೈನ್ ವೆಂಕಟೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಪೂಜೆಗೆ ಸಕಲ ತಯಾರಿ ನಡೆಸಲಾಗಿದೆ.
ಚಾಮರಾಜನಗರ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ನಾಳೆ ಬೆಳಿಗ್ಗೆ 7.30ರಿಂದ 11.30ರವರೆಗೆ ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಲಿದೆ. ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಣ್ಣಮ್ಮಯ್ಯ ಅವರು ಮಾಡಲಿದ್ದು, ಪೂಜೆಯ ಸಿದ್ಧತೆಯನ್ನು ನಟ ದೊಡ್ಡಣ್ಣ ನೋಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಈಗಾಗಲೇ ರಾಕ್ಲೈನ್ ವೆಂಕಟೇಶ್ ಮಾತನಾಡಿದ್ದು, ಕೋವಿಡ್ ನಂತರ ಸಿನಿಮಾ ರಂಗದಲ್ಲಿ ಉಂಟಾದ ಸಮಸ್ಯೆಗಳನ್ನು ಎದುರಿಸಲು ಇಂತಹ ಪೂಜೆ ಮಾಡಲು ಯೋಚಿಸಿದೆವು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೋವಿಡ್ ನಂತರ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಾವು, ನೋವಿನ ಘಟನೆಗಳು ನಡೆದಿವೆ. ಈಗ ಕನ್ನಡ ಚಿತ್ರರಂಗದಲ್ಲಿ ದೊಡ್ಡವರು ಅಂತ ಯಾರು ಇಲ್ಲ. ಹೀಗಾಗಿ ನಾವು ದೇವರ ಮೊರೆ ಹೋಗುತ್ತಿದ್ದೇವೆ ಎಂದು ಪೂಜೆಯ ಬಗ್ಗೆ ಮಾಹಿತಿ ನೀಡಿದ್ದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…