ಬೆಂಗಳೂರು: ಕನ್ನಡ ಚಿತ್ರರಂಗದ ಏಳಿಗೆಗಾಗಿ ನಾಳೆ ಕಲಾವಿದರ ಸಂಘದಲ್ಲಿ ಸುಬ್ರಹ್ಮಣ್ಯ ಸರ್ಪ ಶಾಂತಿ ಹೋಮ ನಡೆಸಲು ನಿರ್ಧರಿಸಲಾಗಿದೆ.
ರಾಕ್ಲೈನ್ ವೆಂಕಟೇಶ್ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಲಿದ್ದು, ಈ ಹಿನ್ನೆಲೆಯಲ್ಲಿ ಪೂಜೆಗೆ ಸಕಲ ತಯಾರಿ ನಡೆಸಲಾಗಿದೆ.
ಚಾಮರಾಜನಗರ ಕಲಾವಿದರ ಸಂಘದಲ್ಲಿ ವಿಶೇಷ ಪೂಜೆ ನಡೆಯಲಿದ್ದು, ನಾಳೆ ಬೆಳಿಗ್ಗೆ 7.30ರಿಂದ 11.30ರವರೆಗೆ ಗಣಯಾಗ, ಆಶ್ಲೇಷ ಬಲಿ, ಸರ್ಪ ಶಾಂತಿ, ಮೃತ್ಯುಂಜಯ ಹೋಮ ಜರುಗಲಿದೆ. ಈ ವಿಶೇಷ ಪೂಜೆಯನ್ನು ಉಡುಪಿಯ ಪ್ರಕಾಶ್ ಅಣ್ಣಮ್ಮಯ್ಯ ಅವರು ಮಾಡಲಿದ್ದು, ಪೂಜೆಯ ಸಿದ್ಧತೆಯನ್ನು ನಟ ದೊಡ್ಡಣ್ಣ ನೋಡಿಕೊಳ್ಳುತ್ತಿದ್ದಾರೆ.
ಈ ಬಗ್ಗೆ ಈಗಾಗಲೇ ರಾಕ್ಲೈನ್ ವೆಂಕಟೇಶ್ ಮಾತನಾಡಿದ್ದು, ಕೋವಿಡ್ ನಂತರ ಸಿನಿಮಾ ರಂಗದಲ್ಲಿ ಉಂಟಾದ ಸಮಸ್ಯೆಗಳನ್ನು ಎದುರಿಸಲು ಇಂತಹ ಪೂಜೆ ಮಾಡಲು ಯೋಚಿಸಿದೆವು. ಆದರೆ ಅದು ಸಾಧ್ಯವಾಗಿರಲಿಲ್ಲ. ಕೋವಿಡ್ ನಂತರ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಸಾವು, ನೋವಿನ ಘಟನೆಗಳು ನಡೆದಿವೆ. ಈಗ ಕನ್ನಡ ಚಿತ್ರರಂಗದಲ್ಲಿ ದೊಡ್ಡವರು ಅಂತ ಯಾರು ಇಲ್ಲ. ಹೀಗಾಗಿ ನಾವು ದೇವರ ಮೊರೆ ಹೋಗುತ್ತಿದ್ದೇವೆ ಎಂದು ಪೂಜೆಯ ಬಗ್ಗೆ ಮಾಹಿತಿ ನೀಡಿದ್ದರು.
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…
ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…