ಮನರಂಜನೆ

ಏಪ್ರಿಲ್‍ಗೆ ಬಿಡುಗಡೆ ಆಗುವುದಿಲ್ಲ ಯಶ್‍ ನಟನೆಯ ‘ಟಾಕ್ಸಿಕ್’

ಯಶ್‍ ಅಭಿನಯದ ‘ಟಾಕ್ಸಿಕ್‍’ ಚಿತ್ರದ ಚಿತ್ರೀಕರಣ ಎರಡು ತಿಂಗಳುಗಳಿಂದ ಭರದಿಂದ ಸಾಗಿದೆ. ಹೀಗಿರುವಾಗಲೇ, ಚಿತ್ರವು ಅಂದುಕೊಂಡಂತೆ ಮುಂದಿನ ವರ್ಷ ಏಪ್ರಿಲ್‍ 10ರಂದು ಬಿಡುಗಡೆ ಆಗುವುದಿಲ್ಲ ಎಂದು ಸ್ವತಃ ನಟ ಯಶ್‍ ಸ್ಪಷ್ಟಪಡಿಸಿದ್ದಾರೆ.

ಈ ವರ್ಷದ ಆರಂಭದಲ್ಲಿ ‘ಟಾಕ್ಸಿಕ್‍’ ಚಿತ್ರವು ಘೋಷಣೆಯಾಗಿತ್ತು. ಘೋಷಣೆಯ ದಿನವೇ ಬಿಡುಗಡೆಯ ದಿನಾಂಕವನ್ನು ಘೋಷಿಸಲಾಗಿತ್ತು. ಅದರ ಪ್ರಕಾರ, ಚಿತ್ರವು 2025ರ ಏಪ್ರಿಲ್‍ 10ರಂದು ಜಗತ್ತಿನಾದ್ಯಂತ ಬಿಡುಗಡೆ ಆಗಬೇಕಿತ್ತು. ಆದರೆ, ಚಿತ್ರ ಶುರುವಾಗಿದ್ದೇ ಎರಡು ತಿಂಗಳ ಹಿಂದಾದ್ದರಿಂದ, ಅಂದುಕೊಂಡ ಸಮಯದಲ್ಲಿ ಚಿತ್ರವು ಬಿಡುಗಡೆಯಾಗುವುದು ಸಂಶಯ ಎಂಬ ಮಾತು ಕೇಳಿಬಂದಿತ್ತು. ಆದರೆ, ಚಿತ್ರತಂಡ ಈ ಕುರಿತು ಯಾವುದೇ ಸ್ಪಷ್ಟನೆ ಬಂದಿರಲಿಲ್ಲ. ಆದರೆ, ಸಂದರ್ಶನವೊಂದರಲ್ಲಿ ಮಾತನಾಡಿರುವ ಯಶ್‍, ಚಿತ್ರವು ಏಪ್ರಿಲ್‍ 10ಕ್ಕೆ ಬಿಡುಗಡೆ ಆಗುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು, ಚಿತ್ರಕ್ಕೆ ‘ಟಾಕ್ಸಿಕ್‍ – A Fairy Tale For Grown-Ups’ ಎಂಬ ಶೀರ್ಷಿಕೆ ಕೊಟ್ಟಿದ್ದು ತಾನೇ ಎಂದು ಹೇಳಿಕೊಂಡಿದ್ದಾರೆ. ‘ನಮ್ಮಲ್ಲಿ ಮಕ್ಕಳಿಗೆ ಸಾಕಷ್ಟು ಕಾಲ್ಪನಿಕ ಕಥೆಗಳಿವೆ. ಆದರೆ, ದೊಡ್ಡವರಿಗೆ ಅಂತಹ ಕಥೆಗಳಿಲ್ಲ. ಯಾಕೆ, ದೊಡ್ಡವರಿಗೆ ಅಂಥದ್ದೊಂದು ಕಥೆ ಕೊಡಬಾರದು ಎಂಬ ನಿಟ್ಟಿನಲ್ಲಿ ಈ ಚಿತ್ರ ಮಾಡುತ್ತಿದ್ದೇವೆ. ಈ ಶೀರ್ಷಿಕೆ ಮತ್ತು ಟ್ಯಾಗ್‍ಲೈನ್‍ ಎರಡೂ ಕೊಟ್ಟಿದ್ದು ನಾನೇ. ಇಂದಿನ ಯುಗದಲ್ಲಿ ನಾವು ಸಾಕಷ್ಟು ಗೊಂದಲಗಳ ಮಧ್ಯೆ ಹೋರಾಟ ಮಾಡುತ್ತಿರುತ್ತೇವೆ ಮತ್ತು ‘ಟಾಕ್ಸಿಕ್’ ಎಂಬ ಪದಕ್ಕೆ ಹಲವು ಅರ್ಥಗಳಿವೆ. ಇಂದು ನಾವು ಇದೇ ಟಾಕ್ಸಿಕ್‍ (ವಿಷಕಾರಿ) ವಾತಾವರಣದಲ್ಲಿ ಬದುಕುತ್ತಿರುವುದರಿಂಧ, ಚಿತ್ರಕ್ಕೆ ಅದೇ ಶೀರ್ಷಿಕೆ ಸೂಕ್ತ ಎಂದನಿಸಿತು’ ಎಂದಿದ್ದಾರೆ.

ಯಶ್‍ ಇದುವರೆಗೂ ಮಾಡಿಕೊಂಡ ಚಿತ್ರಗಳು ಬೇರೆ, ನಿರ್ದೇಶಕಿ ಗೀತು ಮೋಹನ್‍ ದಾಸ್‍ ಪ್ರಪಂಚ ಬೇರೆ. ಎರಡು ಪ್ರಪಂಚಗಳು ಒಟ್ಟಿಗೆ ಸೇರಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಯಶ್‍, ‘ಗೀತು ಅವರ ಚಿತ್ರಗಳು ಬೇರೆ ಇರಬಹುದು. ಆದರೆ, ಅವರಿಗೆ ಮಾಸ್ ಪ್ರೇಕ್ಷಕರ ನಾಡಿಮಿಡಿತ ಬಹಳ ಚೆನ್ನಾಗಿ ಗೊತ್ತಿದೆ. ಇನ್ನು, ನಾನು ಯಾವಾಗಲೂ ಪ್ರೇಕ್ಷಕರನ್ನು ಮನರಂಜಿಸಬೇಕು ಎಂದು ಆಸೆಪಡುವವನು. ನಾವಿಬ್ಬರೂ ಒಟ್ಟಿಗೆ ಕೆಲಸ ಮಾಡುವುದಕ್ಕೆ ಹೇಗೆ ಸಾಧ್ಯ ಎಂದು ಎಷ್ಟೋ ಜನ ಕೇಳಿದ್ದಾರೆ. ಆದರೆ, ಒಂದೊಳ್ಳೆಯ ಮಾಸ್‍ ಕಥೆಯೊಂದಿಗೆ ಗೀತು ಬಂದಿದ್ದರು. ಇದೊಂದು ಮೆಗಾ ಮನರಂಜನಾತ್ಮಕ ಚಿತ್ರವಾಗುತ್ತದೆ ಎಂಬ ಕಾರಣಕ್ಕೆ ನಾನು ಅವರ ಜೊತೆಗೆ ಕೈ ಜೋಡಿಸಿದೆ’ ಎಂದು ಹೇಳಿದ್ದಾರೆ.

‘ಟಾಕ್ಸಿಕ್‍’ ಚಿತ್ರವನ್ನು ಕೆವಿಎನ್‍ ಪ್ರೊಡಕ್ಷನ್ಸ್ ನಿರ್ಮಿಸುತ್ತಿದ್ದು, ಮಲಯಾಳಂ ನಿರ್ದೇಶಕಿ ಗೀತೂ ಮೋಹನ್‍ ದಾಸ್‍ ನಿರ್ದೇಶನ ಮಾಡುತ್ತಿದ್ದಾರೆ.

ಭೂಮಿಕಾ

Recent Posts

ಪರಿಷತ್‌ ಚುನಾವಣೆ ; ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಜಯ

ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ಕಾಂಗ್ರೆಸ್‌ನ ಐದನೇ ಅಭ್ಯರ್ಥಿ ವಿನಯ್‌ ಕಾರ್ತಿಕ್‌ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…

49 mins ago

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…

2 hours ago

ಕರ್ತವ್ಯ ಲೋಪ ; ಮಹಿಳಾ ಮತ್ತು ಮಕ್ಕಳ ಇಲಾಖೆ ಡಿಡಿ ಅಮಾನತ್ತು

ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…

3 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಏಳು ದಿನ ಭಾರೀ ಮಳೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

7 hours ago

ಜೈಲಿನಲ್ಲಿ ಪವಿತ್ರಾಗೌಡಗೆ ರಾಜಾತಿಥ್ಯ ಆರೋಪ: ಸಂಧ್ಯಾ ನಾಗರಾಜ್‌ ವಿರುದ್ಧ ದೂರು

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಎ1 ಆರೋಪಿ ಪವಿತ್ರಾಗೌಡಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.…

8 hours ago

ಓದುಗರ ಪತ್ರ: ಕಿಡಿಗೇಡಿಗಳಿಗೆ ಕಠಿಣ ಶಿಕ್ಷೆ ಆಗಲಿ

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲ್ಲೂಕಿನ ಮಸಣಾಪುರ ಚಾಟಿಪುರ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರದ ಫಲಕಕ್ಕೆ ಕಿಡಿಗೇಡಿಗಳು ಅಪಮಾನ…

13 hours ago